nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ”ಮಧುಗಿರಿ ಬಂದ್”ಗೆ ಕರೆ
    ಮಧುಗಿರಿ October 18, 2022

    ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ”ಮಧುಗಿರಿ ಬಂದ್”ಗೆ ಕರೆ

    By adminOctober 18, 2022No Comments2 Mins Read
    madhugiri bandh

    ಮಧುಗಿರಿ: ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳು ಮರೀಚಿಕೆಯಾಗುತ್ತಿದ್ದು, ಪಟ್ಟಣದಾದ್ಯಂತ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರಿಂದ ದ್ವಿಚಕ್ರ ವಾಹನ ಸವಾರರಿಗೆ ಭಾರೀ ಅನಾನುಕೂಲವಾಗುತ್ತಿದೆ. ಸಂತೆ ಮೈದಾನದಲ್ಲಿ ನೀರು ನಿಲ್ಲುವುದರಿಂದ ಮಹಿಳೆಯರು ವ್ಯಾಪಾರದ ವೇಳೆ ಜಾರಿ ಬಿದ್ದಿರುವುದು, ಬೀದಿದೀಪ ನಿರ್ವಹಣೆ ನಿರ್ಲಕ್ಷ್ಯ, ರಾಜೀವ್ ಗಾಂಧಿ ಕ್ರೀಡಾಂಗಣ ಕೆಸರುಗದ್ದೆಯಾಗಿರುವುದರಿಂದ ವಾಯುವಿಹಾರಿಗಳಿಗೆ ಮತ್ತು ಕ್ರೀಡಾಪಟುಗಳಿಗೆ ತೊಂದರೆಯಾಗುತ್ತಿದೆ ಎಂದು ಕನ್ನಡ ಪರ ಸಂಘಟನೆಗಳ ಒಕ್ಕೂಟ ದೂರಿದೆ.

    ಈ ಸಂಬಂಧ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಅಕ್ಟೋಬರ್–21ರಂದು ”ಮಧುಗಿರಿ ಬಂದ್” ಕರೆ ನೀಡಲಾಗುತ್ತಿದೆಂದು ಸೋಮವಾರ  ಪಟ್ಟಣದಲ್ಲಿ  ಪದಾಧಿಕಾರಿಗಳು ದ್ವಿಚಕ್ರವಾಹನದಲ್ಲಿ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ಪತ್ರ  ಸಲ್ಲಿಸಿದರು.


    Provided by
    Provided by

    ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಕಳೆದ ಹದಿನೈದು ದಿನಗಳಿಂದ ದಸರಾ ರಜೆ ಇದ್ದ ಹಿನ್ನೆಲೆಯಿಂದಾಗಿ ಶಾಲಾ ಕಾಲೇಜುಗಳು ರಜೆ ಇದ್ದವು, ಸೋಮವಾರದಿಂದ ಶಾಲಾ ಕಾಲೇಜುಗಳು ಪುನರಾರಂಭಗೊಂಡಿದ್ದು ಮಕ್ಕಳನ್ನು ಪೋಷಕರು ಶಾಲೆಗೆ ಬಿಡಲು ದ್ವಿಚಕ್ರ ವಾಹನಗಳು ಮತ್ತು ಆಟೋಗಳ ಮೂಲಕ ಬರುತ್ತಾರೆ. ಆದರೆ ಮಧುಗಿರಿ ಪಟ್ಟಣದಾದ್ಯಂತ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರಿಂದ ವಾಹನ  ಸಂಚಾರಕ್ಕೆ ಅಸ್ತವ್ಯಸ್ತವಾಗುತ್ತಿದೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ಗುಂಡಿಗಳನ್ನು ಮುಚ್ಚದಿದ್ದಲ್ಲಿ ಶುಕ್ರವಾರದಂದು ಮಧುಗಿರಿ ಬಂದ್ ಗೆ ಕರೆ ನೀಡಲಾಗಿದೆ ಎಂದರು.

    ಮಧುಗಿರಿ ಪಟ್ಟಣದ ಗುರು ಭವನದ ರಸ್ತೆ, ನೃಪತುಂಗಾ ವೃತ್ತ, ಕೃಷಿ ಇಲಾಖೆ ರಸ್ತೆ, ಡಬಲ್ ರೋಡ್, ಪಟ್ಟಣದ ಹಲವು ಪ್ರಮುಖ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ಜತೆಗೆ ಯುಜಿಡಿ ನೀರು ಸಹ ಜಿನುಗುತ್ತಿರುವುದರಿಂದ ಅವಲಕ್ಕಿ ಮಿಲ್ ಮುಂಭಾಗ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ತಿಳಿಸಿದರು.

    ಇನ್ನು ರಾಜರಾಜೇಶ್ವರಿ ಚಿತ್ರಮಂದಿರದ ಮುಂಭಾಗ  ಶ್ರೀದಂಡಿನ ಮಾರಮ್ಮನ ದೇವಾಲಯದ ಮುಂಭಾಗ  ಕೋರ್ಟ್ ಮುಂಭಾಗದ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು ಇತ್ತೀಚೆಗೆ ಅಪಘಾತಗಳಾಗಿ  ಕುಟುಂಬಗಳೇ ಆಸ್ಪತ್ರೆಗೆ ದಾಖಲಾಗಿರುವ ಘಟನೆಗಳು ಸಂಭವಿಸಿವೆ ಎಂದರು.

    ಇನ್ನೂ ಪ್ರತಿ ಬುಧವಾರ ನಡೆಯುವ ಸಂತೆ ಮೈದಾನದಲ್ಲಿ ಮಣ್ಣು ತುಂಬಿರುವುದರಿಂದ ಜೊತೆಯಲ್ಲಿ ಅಳವಡಿಸಿರುವ ಹೈಮಾಸ್ಟ್ ದೀಪ ಇಲ್ಲಿವರೆಗೂ ಉರಿಯದ ಕಾರಣ ವ್ಯಾಪಾರ ಮಾಡುವ ಮಹಿಳೆಯರು ಜಾರಿ ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ. ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಸತತವಾಗಿ ನೀರು ಜಿನುಗುತ್ತಿದ್ದು ಕ್ರೀಡಾಪಟುಗಳು ನಿರಾಸೆಯಿಂದ ಪ್ರತಿನಿತ್ಯ ಹಿಂದಿರುಗುತ್ತಿದ್ದಾರೆ. ವಾಯು ವಿಹಾರಿಗಳಂತೂ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

    ಈ ಮೇಲಿನ ಎಲ್ಲಾ ಕಾರಣಗಳಿಂದಾಗಿ ಸರಕಾರದ ಗಮನ ಸೆಳೆಯುವ ಉದ್ದೇಶದಿಂದ ಸ್ಥಳೀಯ ಜನಪ್ರತಿನಿಧಿಗಳಂತು ಕ್ಯಾರೆ ಅನ್ನದ ಕಾರಣ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಅಕ್ಟೋಬರ್-21 ರ ಶುಕ್ರವಾರದಂದು ಮಧುಗಿರಿ ಬಂದ್ಗೆ ಕರೆ ನೀಡಲಾಗುತ್ತಿದೆ. ಅ ದಿನ ಮಿನಿವಿಧಾನ ಸೌಧದಲ್ಲಿರುವ ಶಾಸಕರ ಕೊಠಡಿಯ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದರು.

    ಈ ಬಂದ್ ಗೆ ಆಟೋ ಚಾಲಕರು, ಹೋಟೆಲ್, ಮಾಲೀಕರು ಬಸ್ ಮಾಲೀಕರು, ಶಾಲಾ ಕಾಲೇಜು ಆಡಳಿತ ಮಂಡಳಿಯವರು, ಸಾರ್ವಜನಿಕರು ಹೆಚ್ಚಿನ ಬೆಂಬಲ ನೀಡಲಿದ್ದಾರೆಂದು ಭಾವಿಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಬಂದ್ ಕರೆ ನೀಡಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ  ಮನವಿ ಮಾಡಿಕೊಂಡಿದ್ದಾರೆ.

    ಮನವಿ ಸ್ವೀಕರಿಸಿ  ಉಪವಿಭಾಗಾಧಿಕಾರಿ ಸೋಮಪ್ಪಕಡಕೋಳ ಮಾತನಾಡಿ, ನಾವು ಸಾಕಷ್ಟು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದೇವೆ. ನೀವು ನೀಡಿರುವ ಪತ್ರವನ್ನು ಸಂಬಂಧಪಟ್ಟ ಇಲಾಖೆಯವರಿಗೆ ಕಳುಹಿಸಲಾಗುವುದೆಂದು ತಿಳಿಸಿದರು.

    ಮುಖ್ಯಾಧಿಕಾರಿ ಪುರಸಭೆ ಮಧುಗಿರಿ, ತಹಸೀಲ್ದಾರ್ ಮಧುಗಿರಿ ತಾಲ್ಲೂಕು  .ಜಿಲ್ಲಾಧಿಕಾರಿಗಳು  ತುಮಕೂರು,ಅಧ್ಯಕ್ಷರು ಕಾರ್ಯದರ್ಶಿ ಕಾನೂನು ಸೇವಾ ಪ್ರಾಧಿಕಾರ ಮಧುಗಿರಿ ರವರುಗಳಿಗೂ ಮನವಿ ಸಲ್ಲಿಸಿದ್ದಾರೆ.

    ಉಪಾಧ್ಯಕ್ಷ ಎಸ್’ಟಿಡಿ ರಘು,  ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ  ಪಾಂಡುರಂಗಯ್ಯ, ಆಟೋ  ಚಾಲಕರ ಘಟಕದ ಅಧ್ಯಕ್ಷ  ಗೌಡ, ಹರೀಶ್, ಹೊಯ್ಸಳ ಟ್ಯಾಕ್ಸಿ ಚಾಲಕರ ಸಂಘದ ಯೋಗೀಶ್ ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳಾದ ರೋಹಿತ್, ಸಿಕಂದರ್, ಪ್ರದೀಪ್, ರಾಕೇಶ್, ಸುರೇಶ್,  ರಾಜ್ ಕುಮಾರ್,  ಲಕ್ಷ್ಮೀಶ, ಮಹೇಶ್, ಶಿವಲಿಂಗಯ್ಯ, ಸಂತೋಷ, ನರೇಶ್ ಬಾಬು ಇದ್ದರು.

    ವರದಿ: ಅಬಿದ್, ಮಧುಗಿರಿ 


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    June 2, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.