ಮಧುಗಿರಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮುಸ್ಲಿಂ ಬಾಂಧವರು ಶನಿವಾರ ಈದ್-ಉಲ್- ಫಿತರ್ ಹಬ್ಬದ ಅಂಗವಾಗಿ ಶ್ರದ್ಧಾ–ಭಕ್ತಿಯಿಂದ ಸಾಮೂಹಿಕವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಪಟ್ಟಣದ ಕಂಜೂಲ್ ಉಲೂಮ್ ಮದರಸಾ ಸಮೀಪದಲ್ಲಿರುವ ಈದ್ಗಾ ಮೈದಾನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಂ ಬಾಂಧವರು ಲೋಕ ಕಲ್ಯಾಣಾರ್ಥವಾಗಿ ಸಾಮೂಹಿಕವಾಗಿ ನಮಾಜ್ ಮಾಡಿದರು.
ಇದು ಇಸ್ಲಾಂ ಧರ್ಮದಲ್ಲಿ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಒಂದಾಗಿದೆ. ಈ ದಿನದಂದು ಮುಸ್ಲಿಮರು ಉಪವಾಸವನ್ನು ಅಂತ್ಯಗೊಳಿಸುತ್ತಾರೆ. ಹೊಸ ಬಟ್ಟೆ ಧರಿಸುವುದು, ವಿಶೇಷ ಭಕ್ಷ್ಯಗಳನ್ನು ತಯಾರಿಸುವುದು, ದಾನ ಮಾಡುವುದು ಈ ಹಬ್ಬದ ವಿಶೇಷ.
ಸಾಮೂಹಿಕ ಪ್ರಾರ್ಥನೆಯಲ್ಲಿ ನೂತನ ವಸ್ತ್ರಗಳನ್ನು ಧರಿಸಿ ನೂತನ ಟೋಪಿ, ಅರಬ್ ರಾಷ್ಟ್ರಗಳ ಮಾದರಿಯಲ್ಲಿ ರುಮಾಲು ಸುತ್ತಿದ್ದ ಚಿಣ್ಣರು, ಯುವಕರು ಎಲ್ಲರ ಗಮನ ಸೆಳೆದರು.
ನಮಾಜ್ ಬಳಿಕ ಆಶೀರ್ವಚನ ನೀಡಿದ ಧರ್ಮಗುರುಗಳು, ದೇಶದಲ್ಲಿ ಉತ್ತಮ ಮಳೆ, ಬೆಳೆ ಆಗಬೇಕು. ವಿಶ್ವದಲ್ಲಿ ಶಾಂತಿ-ಸೌಹಾರ್ದತೆ ನೆಲೆ ನಿಲ್ಲಬೇಕು. ಈದ್ ಉಲ್ ಫಿತರ್ ಆಚರಣೆಯಿಂದ ಸಮಾಜದಲ್ಲಿ ಸೌಹಾರ್ದ, ಸಹನೆ, ಪರಸ್ಪರ ಪ್ರೀತಿ- ವಿಶ್ವಾಸ ವೃದ್ಧಿಯಾಗಬೇಕು. ಉಳ್ಳವರು ಬಡವರಿಗೆ ದಾನ, ಧರ್ಮ ಮಾಡಬೇಕು ಎಂದು ಸಲಹೆ ನೀಡಿದರು.
ಸಂದರ್ಭದಲ್ಲಿ ಧರ್ಮ ಗುರುಗಳಾದ ಯಾಸಿರ್ ಅರ್ಫಾತ್, ಜಾಮಿಯಾ ಮಸೀದಿ ಅಧ್ಯಕ್ಷರಾದ ಅಲೀಂ, ಕಾರ್ಯದರ್ಶಿಯಾದ ಸಾಧಿಕ್, ಪುರಸಭೆ ಸದಸ್ಯರಾದ ಅಲೀಂ, ಆಸಿಯ ಶಾಜು, ಅಲ್ಪಸಂಖ್ಯಾತರ ಮುಖಂಡರಾದ ಹರ್ಷದ್ ಹುಸೇನ್, ಸಲ್ಮಾನ್ ಭೈಗ್, ಪಾಳ್ಯ ನಬಿ, ಅಲಾಉದ್ದಿನ್, ಜಾಫರ್, ಹಾಗೂ ಸಾವಿರಾರು ಸಂಖ್ಯೆಯಲ್ಲಿ ಮುಸಲ್ಮಾನ್ ಬಾಂಧವರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.
ವರದಿ: ಅಬಿದ್, ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy