nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ

    October 7, 2025

    ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ

    October 7, 2025

    ಇದು ಪ್ರೈವೇಟ್ ದೇವರು!: ದಲಿತ ಸಮುದಾಯದವರಿಗೆ ಪೂಜೆಗೆ ಅವಕಾಶ ನಿರಾಕರಣೆ!

    October 7, 2025
    Facebook Twitter Instagram
    ಟ್ರೆಂಡಿಂಗ್
    • ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ
    • ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ
    • ಇದು ಪ್ರೈವೇಟ್ ದೇವರು!: ದಲಿತ ಸಮುದಾಯದವರಿಗೆ ಪೂಜೆಗೆ ಅವಕಾಶ ನಿರಾಕರಣೆ!
    • ಪಾವಗಡ | ಶಿಷ್ಯ ವೇತನ, ಮದ್ಯಪಾನ ಮುಕ್ತರಿಗೆ ಅಭಿನಂದನೆ ಕಾರ್ಯಕ್ರಮ
    • ಮೇಕೆಗಳ ಹಿಂಡಿನ ಮೇಲೆ ಹುಲಿ ದಾಳಿ: ಮೂರು ಮೇಕೆಗಳು ಸಾವು, ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಆಕ್ರೋಶ
    • ಮಧುಗಿರಿ | ಮೂಲಸೌಕರ್ಯ, ನಿರ್ವಹಣೆ ಸಮಸ್ಯೆಯಿಂದ ಬಳಲುತ್ತಿರುವ ಸರ್ಕಾರಿ ಕಾಲೇಜು
    • ಸರಗೂರು | ವಿವಿಧೆಡೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ
    • ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ | ಮೂಲಸೌಕರ್ಯ, ನಿರ್ವಹಣೆ ಸಮಸ್ಯೆಯಿಂದ ಬಳಲುತ್ತಿರುವ ಸರ್ಕಾರಿ ಕಾಲೇಜು
    ಮಧುಗಿರಿ October 7, 2025

    ಮಧುಗಿರಿ | ಮೂಲಸೌಕರ್ಯ, ನಿರ್ವಹಣೆ ಸಮಸ್ಯೆಯಿಂದ ಬಳಲುತ್ತಿರುವ ಸರ್ಕಾರಿ ಕಾಲೇಜು

    By adminOctober 7, 2025No Comments1 Min Read
    madhugiri

    ಮಧುಗಿರಿ: ಪಟ್ಟಣದ ಹೃದಯ ಭಾಗದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು ಮೂಲಸೌಕರ್ಯ ಕೊರತೆ ಮತ್ತು ನಿರ್ವಹಣೆ ಕೊರತೆಯನ್ನು ಎದುರಿಸುತ್ತಿದ್ದು,  ವಿದ್ಯಾರ್ಥಿಗಳು ಸೋರುತ್ತಿರುವ ಕೊಠಡಿಯಲ್ಲಿ ಪಾಠ ಕೇಳುವ ದುಸ್ಥಿತಿ ಎದುರಾಗಿದೆ.

    ತಾಲ್ಲೂಕಿನ ಮಕ್ಕಳಿಗೆ ಗುಣಮಟ್ಟದ ವಿದ್ಯಾಭ್ಯಾಸ ನೀಡಲೆಂಬ ಉದ್ದೇಶದಿಂದ 1997ರಲ್ಲಿ ಈ ಕಾಲೇಜಿನ ನೂತನ ಕಟ್ಟಡ ನಿರ್ಮಾಣವಾಗಿತ್ತು. ಆದರೆ, ಕಾಲಾಂತರದಲ್ಲಿ ಕಟ್ಟಡದ ಮೇಲ್ಬಾವಣಿ ಬಿರುಕು ಬಿಟ್ಟಿದೆ.


    Provided by
    Provided by
    Provided by

    ಮಳೆಗಾಲದಲ್ಲಿ ಗೋಡೆಗಳಿಂದ ನೀರು ಜಿನುಗುತ್ತದೆ ಮತ್ತು ಬೇಸಿಗೆಯಲ್ಲಿ ಮಣ್ಣು ಉದುರುತ್ತದೆ. ಈ ಸಮಸ್ಯೆಯಿಂದ ವಿದ್ಯಾರ್ಥಿಗಳು ಕೊಠಡಿಯಲ್ಲಿ ಕುಳಿತು ಪಾಠ ಕೇಳಲು ತೊಂದರೆಯಾಗುತ್ತಿದೆಯೆಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

    ಕಾಲೇಜಿನ ಕಟ್ಟಡಕ್ಕೆ ಸುಣ್ಣ ಮತ್ತು ಬಣ್ಣ ಬಳಿದು ಎಷ್ಟೋ ವರ್ಷಗಳಾಗಿವೆ. ಕಿಟಕಿಗಳ ಗಾಜುಗಳು ಹಾಳಾಗಿ, ಮಳೆ ನೀರು ಒಳ ಹೋಗುತ್ತಿದೆ.  ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಒಟ್ಟು 22 ಕೊಠಡಿಗಳಿವೆ. ಅವುಗಳಲ್ಲಿ 9 ಕೊಠಡಿಗಳು ಬಳಕೆಗೆ ಅನುಪಯುಕ್ತವಾಗಿವೆ. ಕಾಲೇಜಿನಲ್ಲಿ ಮೂರು ಶೌಚಾಲಯಗಳಿವೆ. ಒಂದನ್ನು ಉಪನ್ಯಾಸಕರು ಮತ್ತು ಸಿಬ್ಬಂದಿ ಬಳಸುತ್ತಿದ್ದಾರೆ. ವಿದ್ಯಾರ್ಥಿ–ವಿದ್ಯಾರ್ಥಿನಿಯರ ಶೌಚಾಲಯಗಳು ಸಂಪೂರ್ಣವಾಗಿ ಹಾಳಾಗಿ, ನಿರ್ವಹಣೆಯಿಲ್ಲದೆ  ಬಳಕೆ ಮಾಡಲು ಸಾಧ್ಯವಾಗದೇ ಪರದಾಡುವಂತಾಗಿದೆ. ವಿದ್ಯಾರ್ಥಿಗಳು ಶೌಚಾಲಯಕ್ಕೆ ಹೊರಗಡೆ ಅಲೆದಾಡಬೇಕಾದ ಪರಿಸ್ಥಿತಿ ಇಲ್ಲಿಯದು.

    ಕಳೆದ ವರ್ಷ ಕಾಲೇಜಿಗೆ ಕಂಪ್ಯೂಟರ್ ಸೈನ್ಸ್ ಕೋರ್ಸ್ ಮಂಜೂರಾಗಿದೆ. ಆದರೆ, ಎರಡು ವರ್ಷಗಳ ನಂತರವೂ ಕಾಲೇಜಿನಲ್ಲಿ ಕಂಪ್ಯೂಟರ್ ಲ್ಯಾಬ್ ಸೌಲಭ್ಯ ಇಲ್ಲದೆ, 86 ವಿದ್ಯಾರ್ಥಿಗಳು ಸರ್ಕಾರಿ ಪ್ರೌಢಶಾಲೆ ಕಂಪ್ಯೂಟರ್ ಲ್ಯಾಬ್‌ಗೆ ತೆರಳಬೇಕಾಗುತ್ತಿದೆ.

    ಕಾಲೇಜಿನಲ್ಲಿ ಉಪನ್ಯಾಸಕರು ಮತ್ತು ಸಿಬ್ಬಂದಿಗಳಿಗೆ ಒಟ್ಟು 23 ಹುದ್ದೆಗಳು ಮಂಜೂರಾಗಿವೆ. ಆದರೆ, 10 ಹುದ್ದೆಗಳು ಖಾಲಿ ಇವೆ. ಭೂಗೋಳಶಾಸ್ತ್ರ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಜೀವಶಾಸ್ತ್ರ ಮತ್ತು ಕನ್ನಡ ವಿಷಯಗಳಿಗೆ ಕಾಯಂ ಉಪನ್ಯಾಸಕರು ಇಲ್ಲದೆ, ಅತಿಥಿ ಉಪನ್ಯಾಸಕರ ಮೂಲಕ ವಿದ್ಯಾಭ್ಯಾಸ ನಡೆಸಲಾಗುತ್ತಿದೆ. ಸಂಬಂಧಪಟ್ಟವರು ಇನ್ನಾದರೂ  ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಒದಗಿಸುತ್ತಾರಾ? ಎಂದು ಕಾದು ನೋಡಬೇಕಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಧುಗಿರಿ: ಅಪರಿಚಿತ ವಾಹನ ಡಿಕ್ಕಿ: ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಾವು

    September 25, 2025

    ಮಧುಗಿರಿ: ಯೂರಿಯಾ ಖರೀದಿಗೆ ಮುಗಿಬಿದ್ದ ರೈತರು

    September 24, 2025

    ಮಧುಗಿರಿಯಲ್ಲಿ ಜೆಡಿಎಸ್ ಸದೃಢವಾಗಿದ್ದು 2028ರ ಗೆಲುವು ನಮ್ಮದೇ : ಬಿಜವರ ಶ್ರೀನಿವಾಸ್

    September 23, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ

    October 7, 2025

    ಕುಣಿಗಲ್: ಬೈಕ್ ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ವೃದ್ಧೆಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ…

    ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ

    October 7, 2025

    ಇದು ಪ್ರೈವೇಟ್ ದೇವರು!: ದಲಿತ ಸಮುದಾಯದವರಿಗೆ ಪೂಜೆಗೆ ಅವಕಾಶ ನಿರಾಕರಣೆ!

    October 7, 2025

    ಪಾವಗಡ | ಶಿಷ್ಯ ವೇತನ, ಮದ್ಯಪಾನ ಮುಕ್ತರಿಗೆ ಅಭಿನಂದನೆ ಕಾರ್ಯಕ್ರಮ

    October 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.