nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025
    Facebook Twitter Instagram
    ಟ್ರೆಂಡಿಂಗ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
    • ಕ್ರಾಂತಿ ಬಿಜೆಪಿಯಲ್ಲೂ, ಕೇಂದ್ರದಲ್ಲೂ ಆಗಬಹುದು: ಕೆ.ಎನ್.ರಾಜಣ್ಣ ಯುಟರ್ನ್
    • ಬಿ ಮಟಕರೆ ಗ್ರಾ.ಪಂ. ಮೂರನೇ ಅವಧಿಯ ಉಪಾಧ್ಯಕ್ಷರಾಗಿ ಗೌರಿಬಾಯಿ ಹೇಮಾಜಿನಾಯ್ಕ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ: ರಾತ್ರೋ ರಾತ್ರಿ ನೀರಿಲ್ಲದೇ ಪರದಾಡಿದ ರೋಗಿಗಳು: ಮಾನವೀಯತೆ ಮೆರೆದ ಕಾಳಜಿ ತಂಡ
    ಮಧುಗಿರಿ March 16, 2024

    ಮಧುಗಿರಿ: ರಾತ್ರೋ ರಾತ್ರಿ ನೀರಿಲ್ಲದೇ ಪರದಾಡಿದ ರೋಗಿಗಳು: ಮಾನವೀಯತೆ ಮೆರೆದ ಕಾಳಜಿ ತಂಡ

    By adminMarch 16, 2024No Comments2 Mins Read
    madhugiri hospital

    ಮಧುಗಿರಿಯ ಸಾರ್ವಜನಿಕ  ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ  ರಾತ್ರೋ ರಾತ್ರಿ  ನೀರಿನ ಸಮಸ್ಯೆ ಉಂಟಾಗಿ ರೋಗಿಗಳು ಪರದಾಡಿದ ಘಟನೆ ನಡೆದಿದ್ದು, ಈ ಬಗ್ಗೆ ಮಾಹಿತಿ ತಿಳಿದು ಕಾಳಜಿ ತಂಡದ ಸದಸ್ಯರು ರೋಗಿಗಳಿಗೆ ಸೂಕ್ತ ಸಮಯದಲ್ಲಿ ನೀರು ಒದಗಿಸಿ ಕೊಡುವ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ಸಾರ್ವಜನಿಕ  ತಾಲ್ಲೂಕು ಸರ್ಕಾರಿ ಆಸ್ಪತ್ರೆ ಮಧುಗಿರಿಯ ರೋಗಿಗಳಿಗೆ ನೀರಿಲ್ಲದೆ ತೊಂದರೆಯಾಗಿ ರೋಗಿಗಳು ಪರದಾಡುತ್ತಿದ್ದಾರೆ ಎಂಬ ಬಗ್ಗೆ ಕಾಳಜಿ ತಂಡದ ವಾಟ್ಸಾಪ್ ಗ್ರೂಪ್ ನಲ್ಲಿ ಅಧಿಕಾರಿಗಳ ಗಮನ ಸೆಳೆಯಲು ತಂಡದ ಸದಸ್ಯರು ಪ್ರಯತ್ನಿಸಿದ್ದರು. ಆದರೆ, ಈ ವೇಳೆ ಯಾವುದೇ ಅಧಿಕಾರಿಗಳು ಸ್ಪಂದಿಸಲಿಲ್ಲ.


    Provided by

    ಹೀಗಾಗಿ ನೀರು ಸರಬರಾಜು ಮಾಡುವ ವ್ಯವಸ್ಥೆಯನ್ನು ಮಾಡಲು  ಕಾಳಜಿ ಪೌಂಡೇಷನ್  ಸದಸ್ಯರಾದ  ಮಧುಗಿರಿ ಮಹೇಶ್ ಮತ್ತು ಸತೀಶ ರವರು ಖುದ್ದು ತಡ ರಾತ್ರಿಯವರೆಗೂ ಆಸ್ಪತ್ರೆಯ ಬಳಿ ಇದ್ದು ನೀರಿನ ವ್ಯವಸ್ಥೆ ಕಲ್ಪಿಸಲು ಮುಂದಾಗಿದ್ದು,  ಕೊಡಿಗೆನಹಳ್ಳಿ  ಸಿಂಗೆನಹಳ್ಳಿ  ಪ್ರಸಾದ್ ಬಾಬು ಅವರ ಗಮನಕ್ಕೆ ತಂದರು.  ಪ್ರಸಾದ್ ಬಾಬು ಅವರು, ಮಾಹಿತಿ ತಿಳಿದು ತಕ್ಷಣವೇ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಆಸ್ಪತ್ರೆಗೆ ನೀರು ಸರಬರಾಜು ಮಾಡಿದರು.

    ಆಸ್ಪತ್ರೆಯಲ್ಲಿ ನೀರಿಲ್ಲದ ಪರಿಣಾಮ ಆಸ್ಪತ್ರೆಯ ಶೌಚಾಲಯ ಬಳಸಿ ರೋಗಿಗಳು ನೀರು ಹಾಕದೇ ಮಲೀನವಾಗಿತ್ತು.  ಆಸ್ಪತ್ರೆಯಲ್ಲಿ ರಾತ್ರಿ ನೀರು ಖಾಲಿಯಾಗಿದ್ದು, ಇದೇ ಪರಿಸ್ಥಿತಿ ಬೆಳಗ್ಗಿನವರೆಗೆ ಮುಂದುವರಿದಿದ್ದರೆ, ರೋಗಿಗಳ ಸ್ಥಿತಿ ಮತ್ತು ಆಸ್ಪತ್ರೆಯ ನೈರ್ಮಲ್ಯದ ಸ್ಥಿತಿ ಏನಾಗಬಹುದಿತ್ತು ಎನ್ನುವುದನ್ನು ಊಹಿಸಲೂ ಸಾಧ್ಯವಾಗುತ್ತಿರಲಿಲ್ಲ, ಕಾಳಜಿ ತಂಡ ಸೂಕ್ತ ಸಮಯದಲ್ಲಿ ಕೊಡಿಗೆನಹಳ್ಳಿ  ಸಿಂಗೆನಹಳ್ಳಿ  ಪ್ರಸಾದ್ ಬಾಬು ಅವರ ಸಹಕಾರದೊಂದಿಗೆ ನೀರು ಸರಬರಾಜು ಮಾಡುವ ಮೂಲಕ ರೋಗಿಗಳಿಗೆ ನೆರವಾಗಿದ್ದಾರೆ. ತಂಡದ ಕಾರ್ಯಕ್ಕೆ ರೋಗಿಗಳು ಹಾಗೂ ಅವರ ಕುಟುಂಬಸ್ಥರು ಶ್ಲಾಘಿಸಿದ್ದಾರೆ.

    ನೀರಿನ ವ್ಯವಸ್ಥೆ ಎಲ್ಲ, ಮಾಡಿದ ನಂತರ,  ಅಧಿಕಾರಿಗಳು ಆಸ್ಪತ್ರೆಗೆ ಓಡಿ ಬಂದಿದ್ದು, ಸ್ಥಳೀಯ ಅಧಿಕಾರಿಗಳಾದ ಸುರೇಶ್ ಮತ್ತು ಸಂಜೀವ್ ಮೂರ್ತಿ ಅವರು ಆಸ್ಪತ್ರೆಗೆ ಆಗಮಿಸಿ, ರೋಗಿಗಳಿಗೆ ಆಗಿರುವ ಸಮಸ್ಯೆಗೆ ಕಾಳಜಿ ತಂಡದ ಬಳಿ ಕ್ಷಮೆ ಕೇಳಿದರು. ಇನ್ನು ಮುಂದೆ ಈ ರೀತಿ ಸಮಸ್ಯೆಯಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.

    ಇದೇ ವೇಳೆ ರೋಗಿಗಳಿಗೆ ಆಪತ್ಕಾಲದಲ್ಲಿ ತಡರಾತ್ರಿಯಾದರು ತಮ್ಮದೇ ಟ್ರ್ಯಾಕ್ಟರ್ ನಲ್ಲಿ ನೀರನ್ನು ಸರಬರಾಜು ಮಾಡಿದ ಪ್ರಸನ್ನ  ಬಾಬು ರವರಿಗೆ ಕಾಳಜಿ ತಂಡದ ಕೃತಜ್ಞತೆಗಳನ್ನು ಸಲ್ಲಿಸಿದೆ.

    ಕಾಳಜಿ ಪೌಂಡೇಶನ್ ನ ಕಾಳಜಿಗೆ  ರೋಗಿಗಳು, ರೋಗಿಗಳ ಸಂಬಂಧಿಕರು ಅಲ್ಲಿನ ಸಾರ್ವಜನಿಕರು ಪ್ರಶಂಸೆ ವ್ಯಕ್ತಕಡಿಸಿದರು.

    ಸ್ಥಳೀಯ ಆಡಳಿತ ರೋಗಿಗಳಿಗೆ ಇನ್ನಾದರೂ ಮೂಲಭೂತ ಸೌಕರ್ಯಗಳನ್ನು ಜವಾಬ್ದಾರಿಯುತವಾಗಿ ಕಲ್ಪಿಸಿಕೊಟ್ಟು, ರೋಗಿಗಳ ಹಿತಕಾಯಬೇಕಿದೆ ಎಂದು ಕಾಳಜಿ ತಂಡ ಅಭಿಪ್ರಾಯ ವ್ಯಕ್ತಪಡಿಸಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಹಿಟ್ಲರ್ ರಾಜಕಾರಣ ಮಾಡಬೇಡಿ, ನಿಮ್ಮ ದರ್ಪಕ್ಕೆ, ಧಮ್ಕಿಗೆ ಯಾರು ಹೆದರುವುದಿಲ್ಲ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    June 19, 2025

    ಮಧುಗಿರಿ: ಪ್ರೋತ್ಸಾಹ ಧನ ಸೌಲಭ್ಯಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    June 7, 2025

    ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಡ್ಲಾಪುರ ಪಿಡಿಓ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

    May 14, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    ಬೆಂಗಳೂರು: ಮಹದೇವಪುರದ ಅಪಾರ್ಟ್ಮೆಂಟ್​ವೊಂದರಲ್ಲಿ ಮಹಿಳೆಯೊಬ್ಬಳು ತಾನು ಸಾಕಿದ್ದ ನಾಯಿಯನ್ನೇ ಹತ್ಯೆ ಮಾಡಿ, ಕೊಳೆತು ನಾರುತ್ತಿದ್ದ ನಾಯಿಯ ಮೃತದೇಹದೊಂದಿಗೆ ವಾಸವಿದ್ದ ಶಾಕಿಂಗ್…

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.