ಮಧುಗಿರಿ: ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಬೇಕೆಂದು ಆಗ್ರಹಿಸಿ ರಾಜ್ಯ ಜೀತದಾಳು ಮತ್ತು ಕೃಷಿ ಕೂಲಿ ಕಾರ್ಮಿಕರ ಒಕ್ಕೂಟದ ಪದಾಧಿಕಾರಿಗಳು ಮಧುಗಿರಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಉಪವಿಭಾಗಾಧಿಕಾರಿ ಗೊಟೋರು ಶಿವಪ್ಪ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಜೀವಿಕ ಸಂಘಟನೆಯ ಜಿಲ್ಲಾ ಸಂಚಾಲಕ ಡಾ.ಸಂಜೀವಮೂರ್ತಿ, , ತಾಲ್ಲೂಕಿನಲ್ಲಿ 1,600ಕ್ಕೂ ಹೆಚ್ಚು ಜೀತ ವಿಮುಕ್ತರಿದ್ದು, ಅವರಿಗೆ ಉಚಿತವಾಗಿ ನಿವೇಶನ ಮತ್ತು ಮನೆ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.
ಜೀತ ವಿಮುಕ್ತರಿಗೆ ಪ್ರತ್ಯೇಕ ನಿಗಮ ಸ್ಥಾಪಿಸಿ ಸೌಲಭ್ಯ ನೀಡಬೇಕು. ಜೀತ ವಿಮುಕ್ತ ಕುಟುಂಬದವರಿಗೆ ಉನ್ನತ ಶಿಕ್ಷಣದವರೆಗೂ ಉಚಿತ ಶಿಕ್ಷಣ ನೀಡಬೇಕು. ಸರ್ಕಾರಿ ಕೆಲಸಗಳ ನೇಮಕಾತಿಯಲ್ಲಿ ಮೀಸಲಾತಿ ನೀಡಬೇಕು. ಎಸ್ ಇಪಿ ಟಿಎಸ್ ಪಿ ಯೋಜನೆಯಲ್ಲಿ ಆದ್ಯತೆ ನೀಡಬೇಕು. ಸಾಗುವಳಿ ಚೀಟಿ ನೀಡಬೇಕು. ಜಮೀನು ಇರುವ ಪ್ರತಿ ಜೀತ ವಿಮುಕ್ತರಿಗೆ ಕೊಳವೆ ಬಾವಿ ಮಂಜೂರಾತಿ ಮಾಡಲು ಸರ್ಕಾರ ಆದೇಶಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜೀವಿಕ ಸಂಘಟನೆಯ ಹನುಮಂತರಾಯಪ್ಪ, ತಾಲ್ಲೂಕು ಸಂಚಾಲಕ ನರಸಿಂಹಮೂರ್ತಿ, ಸರ್ವೋದಯ ಮಾಲಿಂಗ, ನರಸಿಂಹಮೂರ್ತಿ, ವಕೀಲ ಶಿವಕುಮಾರ್, ಡಿ.ಎಸ್.ಎಸ್. ಹರಿರಾಮ್, ಮುಖಂಡ ಕದರಪ್ಪ ತಿಮ್ಮಯ್ಯ, ಗೋವಿಂದಪ್ಪ, ಸಿದ್ದಪ್ಪ, ನರಸಿಂಹಪ್ಪ, ಅಂಜಿನಪ್ಪ, ಪಾಲಣ್ಣ, ಕುಮಾರ, ರಾಜ, ನರಸಿಂಹಪ್ಪ, ಅಂಜಿನಪ್ಪ, ಪಾಲಣ್ಣ, ಶಿವಪ್ಪ, ತೆರಿಯೂರು ನರಸಿಂಹರಾಜು, ನರಸಿಂಹಪ್ಪ, ದೇವರಾಜ್ ಮತ್ತಿತರರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


