ತುಮಕೂರು: ಕೆಲ ದಿನಗಳ ಹಿಂದೆ ಮದುವೆಯಾಗಿದ್ದ ಯುವತಿ ಇದೀಗ ತನ್ನ ಪತಿಯನ್ನು ಹುಡುಕಿ ಕೊಡಿ ಎಂದು ಪೊಲೀಸ್ ಮೆಟ್ಟಿಲೇರಿದ ಘಟನೆ ನಡೆದಿದೆ.
ತುರುವೇಕೆರೆಯ ಮೊಬೈಲ್ ಶಾಪ್ ಒಂದರಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಚೈತ್ರಾ ಹಾಗೂ ಅದೇ ಮೊಬೈಲ್ ಶಾಪ್ ನಲ್ಲಿ ಫೈನಾನ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ನಿಖಿಲ್ ನಡುವೆ ಪ್ರೀತಿ ಬೆಳೆದಿತ್ತು. ಬಳಿಕ ಚೈತ್ರಾ ಮನೆಯವರ ವಿರೋಧದ ನಡುವೆಯೂ ನಿಖಿಲ್ ನನ್ನು ದೇವಸ್ಥಾನದಲ್ಲಿ ವಿವಾಹವಾಗಿದ್ದರು. ಜೊತೆಗೆ ಫೆಬ್ರವರಿ 7ರಂದು ರಿಜಿಸ್ಟರ್ ಮ್ಯಾರೇಜ್ ಕೂಡ ಆಗಿದ್ದರು.
ಆದರೆ ಇದ್ದಕ್ಕಿದ್ದಂತೆ ನಿಖಿಲ್ ನಾಪತ್ತೆಯಾಗಿದ್ದು, ಇದರಿಂದ ಗಾಬರಿಗೊಂಡ ಚೈತ್ರಾ ನಿಖಿಲ್ ನನ್ನು ತಿಪಟೂರು ತಾಲೂಕಿನ ಪರವ ಗೊಂಡನಹಳ್ಳಿಯಲ್ಲಿರುವ ನಿಖಿಲ್ ಮನೆಗೆ ಹುಡುಕಿಕೊಂಡು ಹೋಗಿದ್ದು, ಈ ವೇಳೆ ಚೈತ್ರಾಳಿಗೆ ನಿಖಿಲ್ ತಂದೆ ಬಸವರಾಜು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ.
ಇದರಿಂದ ಕಂಗಾಲಾಗಿರುವ ಚೈತ್ರಾ ನನ್ನ ಗಂಡನನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಕಿಬ್ಬನಹಳ್ಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಎ.ಎನ್. ಪೀರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5