nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಲಂ ನಿವಾಸಿಗಳಿಗೆ ಕಾಯಿದೆ ಅನ್ವಯ ಹಕ್ಕುಪತ್ರಕ್ಕೆ ಕ್ರಮ: ಜಿಲ್ಲಾಧಿಕಾರಿ ಶುಭಕಲ್ಯಾಣ್

    September 3, 2026

    ಅನುಭವ, ಅಧ್ಯಯನದಿಂದ ಗುಣಮಟ್ಟದ ಸಾಹಿತ್ಯ ಸಾಧ್ಯತೆ: ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸಲಹೆ

    September 3, 2026

    ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!

    September 2, 2026
    Facebook Twitter Instagram
    ಟ್ರೆಂಡಿಂಗ್
    • ಸ್ಲಂ ನಿವಾಸಿಗಳಿಗೆ ಕಾಯಿದೆ ಅನ್ವಯ ಹಕ್ಕುಪತ್ರಕ್ಕೆ ಕ್ರಮ: ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಅನುಭವ, ಅಧ್ಯಯನದಿಂದ ಗುಣಮಟ್ಟದ ಸಾಹಿತ್ಯ ಸಾಧ್ಯತೆ: ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸಲಹೆ
    • ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!
    • ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ
    • ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ
    • ಸರಗೂರು ವೀರಶೈವ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಸಿ. ಮಹೇಶ್, ಉಪಾಧ್ಯಕ್ಷರಾಗಿ ಎಂ. ಶಿವಣ್ಣ ಅವಿರೋಧ ಆಯ್ಕೆ
    • ಹೀಗೂ ಉಂಟೆ …! | ಸಂಟ್ಯಾರು ಕಡೆಯುವ ಕಲ್ಲು…!
    • ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಗು ನನ್ನದಲ್ಲ ಎಂದು ಮನೆ ದೇವರ ಮೇಲೆ ಪ್ರಮಾಣ ಮಾಡುವಂತೆ ಶಾಸಕರಿಗೆ ಮಹಿಳೆ ಸವಾಲು
    ರಾಜ್ಯ ಸುದ್ದಿ February 9, 2022

    ಮಗು ನನ್ನದಲ್ಲ ಎಂದು ಮನೆ ದೇವರ ಮೇಲೆ ಪ್ರಮಾಣ ಮಾಡುವಂತೆ ಶಾಸಕರಿಗೆ ಮಹಿಳೆ ಸವಾಲು

    By adminFebruary 9, 2022No Comments2 Mins Read
    rajkumar

    ಬಾಲ್ಯದಿಂದಲೂ ಅವರು ನನಗೆ ಸ್ನೇಹಿತರು. ಅವರ ಜೊತೆ ಸಂಪರ್ಕ ಇಟ್ಟುಕೊಂಡಿದ್ದರಿಂದಲೇ ನನಗೆ ಮಗುವಾಗಿದೆ. ಈ ಮಗು ಅವರದಲ್ಲವೆಂಬುದಾದರೆ ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಲಿ ಎಂದು ಸಂತ್ರಸ್ತ ಮಹಿಳೆಯು ಶಾಸಕ ರಾಜ್‍ ಕುಮಾರ್ ಪಾಟೀಲ್ ತೇಲ್ಕೂರ್‍ಗೆ ಸವಾಲು ಹಾಕಿದ್ದಾರೆ.ನಗರದ ಖಾಸಗಿ ಹೋಟೆಲ್‍ನಲ್ಲಿ ವಕೀಲ ಜಗದೀಶ್ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ನನ್ನ ಜೊತೆ ಹಲವು ವರ್ಷಗಳಿಂದ ಅವರು ಒಡನಾಟ ಇಟ್ಟುಕೊಂಡಿದ್ದರು. ಅದರ ಪರಿಣಾಮವೇ ನನಗೆ ಮಗು ಜನಿಸಿದೆ. ಈಗ ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳುತ್ತಿದ್ದಾರೆ. ಅವರ ಮನೆ ದೇವರಾದ ವೀರಭದ್ರಸ್ವಾಮಿಯ ಮೇಲೆ ಆಣೆ ಮಾಡಿ ಹೇಳಲಿ ಎಂದು ಒತ್ತಾಯಿಸಿದರು.

    ನನಗೆ ಮಹಿಳೆ ಗೊತ್ತೇ ಇಲ್ಲ ಎಂದು ಹೇಳುವ ಶಾಸಕರು ಬೆಂಗಳೂರಿನ ಶಾಂಗ್ರೀಲಾ ಹೋಟೆಲ್‍ಗೆ ತಮ್ಮ ಪತ್ನಿಯನ್ನು ಕರೆದುಕೊಂಡು ಮಾತುಕತೆಗೆ ಬಂದಿದ್ದಾದರೂ ಏಕೆ? ಪರಿಚಯವಿಲ್ಲ ಎಂದ ಮೇಲೆ ಬರುವ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದರು. ನಾನು ಶಾಸಕರಿಗೆ ಯಾವುದೇ ರೀತಿಯಲ್ಲೂ ಬ್ಲಾಕ್‍ಮೇಲ್ ಮಾಡುತ್ತಿಲ್ಲ. ಪ್ರಸ್ತುತ ನಾನು ಬ್ಯೂಟಿಪಾರ್ಲರ್ ನಡೆಸುತ್ತಿದ್ದೇನೆ. ಜೀವನ ನಿರ್ವಹಣೆ ಕಷ್ಟವಾಗಿದೆ. ಕಡೇ ಪಕ್ಷ ಅದರ ಪೋಷಣೆಗಾದರೂ ಜೀವನಾಂಶ ಕೊಡಿ ಎಂದು ನೊಂದ ಮಹಿಳೆ ಸೇಡಂ ಶಾಸಕರನ್ನು ಒತ್ತಾಯಿಸಿದ್ದಾರೆ.ನನ್ನ ಜೊತೆ ಸಂಬಂಧ ಇಟ್ಟುಕೊಂಡಿರುವುದು ಅವರ ಪತ್ನಿಗೆ ಗೊತ್ತಾಗಿ ವಿಷಯ ರಂಪಾಟವಾಗಬಾರದು ಎಂದು ಖಾಸಗಿ ಹೋಟೆಲ್‍ನಲ್ಲಿ ಮಾತುಕತೆಗೆ ಬಂದಿದ್ದರು. ಬೇಕಿದ್ದರೆ ಇಲ್ಲಿನ ಸಿಸಿ ಕ್ಯಾಮೆರಾಗಳ ವಿಶ್ಯುಯಲ್ ನೋಡಿದರೆ ಎಲ್ಲವೂ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.ನನಗೆ ಅವರ ಜೊತೆ ಮಾತುಕತೆ ಇಲ್ಲವೇ ಸಂಧಾನ ಬೇಕಿಲ್ಲ. ನಾನು ಬ್ಲಾಕ್‍ಮೇಲ್ ಮಾಡುವ ಅಗತ್ಯವೂ ನನಗಿಲ್ಲ. ನನಗೆ ಅನ್ಯಾಯವಾಗಿದ್ದು, ಶಾಸಕರಿಂದ ನ್ಯಾಯಬೇಕು. ಈಗ ನಾನು ಒಬ್ಬಂಟಿಯಾಗಿದ್ದು ಜೀವನ ಹೇಗೆ ನಿರ್ವಹಿಸಲಿ ಎಂದು ಪ್ರಶ್ನಿಸಿದ್ದಾರೆ. ಖಂಡಿತವಾಗಿಯೂ ನಾನು ಮಾಧ್ಯಮದವರ ಮುಂದೆ ಬರಬೇಕೆಂದುಕೊಂಡಿರಲಿಲ್ಲ. ನನ್ನ ಮೇಲೆ ಶಾಸಕರು, ಅವರ ಕುಟುಂಬದವರು ಹಾಗೂ ಬೆಂಬಲಿಗರು ದಬ್ಬಾಳಿಕೆ ಮಾಡುತ್ತಿರುವುದರಿಂದ ಮಾಧ್ಯಮದ ಮುಂದೆ ಬರಬೇಕಾಯಿತು ಎಂದು ಅಳಲು ತೋಡಿಕೊಂಡರು.ವಿಧಾನಸೌಧ ಠಾಣೆಯಲ್ಲಿ ನನಗೆ ತುಂಬ ಹಿಂಸೆ ಕೊಟ್ಟಿದ್ದಾರೆ. ಠಾಣೆಯಲ್ಲಿ ವಿಜಯ್ ಎಂಬುವರ ಮುಂದೆ ಕಾಲಿಗೆ ಬೀಳಲು ಮುಂದಾದೆ. ಆದರೂ ಕೇಳಲಿಲ್ಲ ಎಂದು ಕಣ್ಣೀರು ಹಾಕಿದರು.

    ನಾವು ನಿಮಗೆ ಎಲ್ಲ ಸಹಾಯ ಮಾಡುತ್ತೇವೆ. ನೀವು ನಾವು ಹೇಳಿದ ಹಾಗೆ ನಡೆದುಕೊಳ್ಳಬೇಕು. ಇದಕ್ಕೆಲ್ಲ ಕಾಂಗ್ರೆಸ್‍ನವರ ಕುಮ್ಮಕ್ಕಿದೆ ಎಂದು ನಾವು ಬರೆದುಕೊಟ್ಟ ಪತ್ರಕ್ಕೆ ಸಹಿ ಹಾಕಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಒಪ್ಪದಿದ್ದಾಗ ನನಗೆ ಹಿಂಸೆ ಕೊಟ್ಟಿದ್ದಾರೆ ಎಂದು ಆರೋಪಿಸಿದರು.

    ಯಾವ ಮಹಿಳೆಯೂ ತನ್ನ ಮಗುವಿನ ಜನನದ ಬಗ್ಗೆ ಸುಳ್ಳು ಹೇಳುವುದಿಲ್ಲ. ಇಬ್ಬರಲ್ಲಿ ಒಬ್ಬ ಮಗ ಶಾಸಕರಿಗೆ ಹುಟ್ಟಿದ್ದು, ಇದನ್ನು ಹೇಳಲು ನನಗೆ ಯಾವುದೇ ಮುಜುಗರವೂ ಇಲ್ಲ ಎಂದು ಸ್ಪಷ್ಟಪಡಿಸಿದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಚುನಾವಣೆಗೆ 2 ವರ್ಷ ಬಾಕಿ ಇದೆ, ಎಸ್ ಐಆರ್ ಪ್ರಕ್ರಿಯೆ ಮುಗಿಸಲು ಆತುರ ಏಕೆ?: ನಟ ಪ್ರಕಾಶ್ ರಾಜ್ ಪ್ರಶ್ನೆ

    September 1, 2026

    ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ

    September 1, 2026

    ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ

    August 31, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸ್ಲಂ ನಿವಾಸಿಗಳಿಗೆ ಕಾಯಿದೆ ಅನ್ವಯ ಹಕ್ಕುಪತ್ರಕ್ಕೆ ಕ್ರಮ: ಜಿಲ್ಲಾಧಿಕಾರಿ ಶುಭಕಲ್ಯಾಣ್

    September 3, 2026

    ತುಮಕೂರು: ನಗರಪಾಲಿಕೆ ವ್ಯಾಪ್ತಿಯ ಸ್ಲಂ ಜನರ ಕುಂದುಕೊರತೆ ಸಭೆಯನ್ನು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರೆಯಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ…

    ಅನುಭವ, ಅಧ್ಯಯನದಿಂದ ಗುಣಮಟ್ಟದ ಸಾಹಿತ್ಯ ಸಾಧ್ಯತೆ: ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸಲಹೆ

    September 3, 2026

    ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!

    September 2, 2026

    ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ

    September 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.