nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಗು ನನ್ನದಲ್ಲ ಎಂದು ಮನೆ ದೇವರ ಮೇಲೆ ಪ್ರಮಾಣ ಮಾಡುವಂತೆ ಶಾಸಕರಿಗೆ ಮಹಿಳೆ ಸವಾಲು
    ರಾಜ್ಯ ಸುದ್ದಿ February 9, 2022

    ಮಗು ನನ್ನದಲ್ಲ ಎಂದು ಮನೆ ದೇವರ ಮೇಲೆ ಪ್ರಮಾಣ ಮಾಡುವಂತೆ ಶಾಸಕರಿಗೆ ಮಹಿಳೆ ಸವಾಲು

    By adminFebruary 9, 2022No Comments2 Mins Read
    rajkumar

    Provided by
    Provided by

    ಬಾಲ್ಯದಿಂದಲೂ ಅವರು ನನಗೆ ಸ್ನೇಹಿತರು. ಅವರ ಜೊತೆ ಸಂಪರ್ಕ ಇಟ್ಟುಕೊಂಡಿದ್ದರಿಂದಲೇ ನನಗೆ ಮಗುವಾಗಿದೆ. ಈ ಮಗು ಅವರದಲ್ಲವೆಂಬುದಾದರೆ ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಲಿ ಎಂದು ಸಂತ್ರಸ್ತ ಮಹಿಳೆಯು ಶಾಸಕ ರಾಜ್‍ ಕುಮಾರ್ ಪಾಟೀಲ್ ತೇಲ್ಕೂರ್‍ಗೆ ಸವಾಲು ಹಾಕಿದ್ದಾರೆ.ನಗರದ ಖಾಸಗಿ ಹೋಟೆಲ್‍ನಲ್ಲಿ ವಕೀಲ ಜಗದೀಶ್ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ನನ್ನ ಜೊತೆ ಹಲವು ವರ್ಷಗಳಿಂದ ಅವರು ಒಡನಾಟ ಇಟ್ಟುಕೊಂಡಿದ್ದರು. ಅದರ ಪರಿಣಾಮವೇ ನನಗೆ ಮಗು ಜನಿಸಿದೆ. ಈಗ ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳುತ್ತಿದ್ದಾರೆ. ಅವರ ಮನೆ ದೇವರಾದ ವೀರಭದ್ರಸ್ವಾಮಿಯ ಮೇಲೆ ಆಣೆ ಮಾಡಿ ಹೇಳಲಿ ಎಂದು ಒತ್ತಾಯಿಸಿದರು.

    ನನಗೆ ಮಹಿಳೆ ಗೊತ್ತೇ ಇಲ್ಲ ಎಂದು ಹೇಳುವ ಶಾಸಕರು ಬೆಂಗಳೂರಿನ ಶಾಂಗ್ರೀಲಾ ಹೋಟೆಲ್‍ಗೆ ತಮ್ಮ ಪತ್ನಿಯನ್ನು ಕರೆದುಕೊಂಡು ಮಾತುಕತೆಗೆ ಬಂದಿದ್ದಾದರೂ ಏಕೆ? ಪರಿಚಯವಿಲ್ಲ ಎಂದ ಮೇಲೆ ಬರುವ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದರು. ನಾನು ಶಾಸಕರಿಗೆ ಯಾವುದೇ ರೀತಿಯಲ್ಲೂ ಬ್ಲಾಕ್‍ಮೇಲ್ ಮಾಡುತ್ತಿಲ್ಲ. ಪ್ರಸ್ತುತ ನಾನು ಬ್ಯೂಟಿಪಾರ್ಲರ್ ನಡೆಸುತ್ತಿದ್ದೇನೆ. ಜೀವನ ನಿರ್ವಹಣೆ ಕಷ್ಟವಾಗಿದೆ. ಕಡೇ ಪಕ್ಷ ಅದರ ಪೋಷಣೆಗಾದರೂ ಜೀವನಾಂಶ ಕೊಡಿ ಎಂದು ನೊಂದ ಮಹಿಳೆ ಸೇಡಂ ಶಾಸಕರನ್ನು ಒತ್ತಾಯಿಸಿದ್ದಾರೆ.ನನ್ನ ಜೊತೆ ಸಂಬಂಧ ಇಟ್ಟುಕೊಂಡಿರುವುದು ಅವರ ಪತ್ನಿಗೆ ಗೊತ್ತಾಗಿ ವಿಷಯ ರಂಪಾಟವಾಗಬಾರದು ಎಂದು ಖಾಸಗಿ ಹೋಟೆಲ್‍ನಲ್ಲಿ ಮಾತುಕತೆಗೆ ಬಂದಿದ್ದರು. ಬೇಕಿದ್ದರೆ ಇಲ್ಲಿನ ಸಿಸಿ ಕ್ಯಾಮೆರಾಗಳ ವಿಶ್ಯುಯಲ್ ನೋಡಿದರೆ ಎಲ್ಲವೂ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.ನನಗೆ ಅವರ ಜೊತೆ ಮಾತುಕತೆ ಇಲ್ಲವೇ ಸಂಧಾನ ಬೇಕಿಲ್ಲ. ನಾನು ಬ್ಲಾಕ್‍ಮೇಲ್ ಮಾಡುವ ಅಗತ್ಯವೂ ನನಗಿಲ್ಲ. ನನಗೆ ಅನ್ಯಾಯವಾಗಿದ್ದು, ಶಾಸಕರಿಂದ ನ್ಯಾಯಬೇಕು. ಈಗ ನಾನು ಒಬ್ಬಂಟಿಯಾಗಿದ್ದು ಜೀವನ ಹೇಗೆ ನಿರ್ವಹಿಸಲಿ ಎಂದು ಪ್ರಶ್ನಿಸಿದ್ದಾರೆ. ಖಂಡಿತವಾಗಿಯೂ ನಾನು ಮಾಧ್ಯಮದವರ ಮುಂದೆ ಬರಬೇಕೆಂದುಕೊಂಡಿರಲಿಲ್ಲ. ನನ್ನ ಮೇಲೆ ಶಾಸಕರು, ಅವರ ಕುಟುಂಬದವರು ಹಾಗೂ ಬೆಂಬಲಿಗರು ದಬ್ಬಾಳಿಕೆ ಮಾಡುತ್ತಿರುವುದರಿಂದ ಮಾಧ್ಯಮದ ಮುಂದೆ ಬರಬೇಕಾಯಿತು ಎಂದು ಅಳಲು ತೋಡಿಕೊಂಡರು.ವಿಧಾನಸೌಧ ಠಾಣೆಯಲ್ಲಿ ನನಗೆ ತುಂಬ ಹಿಂಸೆ ಕೊಟ್ಟಿದ್ದಾರೆ. ಠಾಣೆಯಲ್ಲಿ ವಿಜಯ್ ಎಂಬುವರ ಮುಂದೆ ಕಾಲಿಗೆ ಬೀಳಲು ಮುಂದಾದೆ. ಆದರೂ ಕೇಳಲಿಲ್ಲ ಎಂದು ಕಣ್ಣೀರು ಹಾಕಿದರು.

    ನಾವು ನಿಮಗೆ ಎಲ್ಲ ಸಹಾಯ ಮಾಡುತ್ತೇವೆ. ನೀವು ನಾವು ಹೇಳಿದ ಹಾಗೆ ನಡೆದುಕೊಳ್ಳಬೇಕು. ಇದಕ್ಕೆಲ್ಲ ಕಾಂಗ್ರೆಸ್‍ನವರ ಕುಮ್ಮಕ್ಕಿದೆ ಎಂದು ನಾವು ಬರೆದುಕೊಟ್ಟ ಪತ್ರಕ್ಕೆ ಸಹಿ ಹಾಕಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಒಪ್ಪದಿದ್ದಾಗ ನನಗೆ ಹಿಂಸೆ ಕೊಟ್ಟಿದ್ದಾರೆ ಎಂದು ಆರೋಪಿಸಿದರು.

    ಯಾವ ಮಹಿಳೆಯೂ ತನ್ನ ಮಗುವಿನ ಜನನದ ಬಗ್ಗೆ ಸುಳ್ಳು ಹೇಳುವುದಿಲ್ಲ. ಇಬ್ಬರಲ್ಲಿ ಒಬ್ಬ ಮಗ ಶಾಸಕರಿಗೆ ಹುಟ್ಟಿದ್ದು, ಇದನ್ನು ಹೇಳಲು ನನಗೆ ಯಾವುದೇ ಮುಜುಗರವೂ ಇಲ್ಲ ಎಂದು ಸ್ಪಷ್ಟಪಡಿಸಿದರು.


    Provided by
    Provided by

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬೆಂಗಳೂರು: ಪ್ರಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ. ಶ್ರೀನಿವಾಸ್ (ಬೆಂ.ಕೋ.ಶ್ರೀ) ಅವರ ಸಿನಿಮಾ ಜಗತ್ತಿನ ಪಯಣ, ವ್ಯಾಪಾರ, ಹೋರಾಟ ಹಾಗೂ ಅವರ…

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.