ಕೋಲ್ಕತ್ತಾ: ಮಹಾಕುಂಭ ಮೇಳದಲ್ಲಿನ ಅವ್ಯವಸ್ಥೆ ವಿರುದ್ಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ ಮತ್ತು ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
‘ಮಹಾ ಕುಂಭವು ‘ಮೃತ್ಯು ಕುಂಭ’ವಾಗಿ ಮಾರ್ಪಟ್ಟಿದೆ. ನಾನು ಮಹಾಕುಂಭವನ್ನು ಗೌರವಿಸುತ್ತೇನೆ, ಪವಿತ್ರ ಗಂಗಾ ಮಾತೆಯನ್ನು ನಾನು ಗೌರವಿಸುತ್ತೇನೆ. ಆದರೆ, ಅಲ್ಲಿ ಯಾವುದೇ ರೀತಿಯ ವ್ಯವಸ್ಥೆಯನ್ನು ಕೈಗೊಂಡಿಲ್ಲ. ಶ್ರೀಮಂತರು, ವಿಐಪಿಗಳಿಗೆ ₹ 1 ಲಕ್ಷ ನೀಡಿ ಶಿಬಿರಗಳನ್ನು ಪಡೆಯಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಆದರೆ, ಬಡವರಿಗೆ ಕುಂಭದಲ್ಲಿ ಯಾವುದೇ ವ್ಯವಸ್ಥೆಗಳನ್ನು ಮಾಡಿಲ್ಲ. ‘ಮೇಳ’ದಲ್ಲಿ ಕಾಲ್ತುಳಿತದ ಪರಿಸ್ಥಿತಿ ಸಾಮಾನ್ಯವಾಗಿದೆ. ಆದರೆ, ನೀವು ಏನು ಮಾಡಿದ್ದೀರಿ ಎಂಬುದು ಮುಖ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಾಂಗ್ಲಾದೇಶದ ಮೂಲಭೂತವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪ ಸಾಬೀತುಪಡಿಸಲು ಬಿಜೆಪಿಗೆ ಇದೇ ವೇಳೆ ಅವರು ಸವಾಲೆಸೆದರು.
ಬಿಜೆಪಿ ತನ್ನ ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಿಕೊಳ್ಳಲು ಧರ್ಮವನ್ನು ಬಳಸುತ್ತಿದೆ. ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ಬಿಜೆಪಿ ಶಾಸಕರು ದ್ವೇಷವನ್ನು ಹರಡಲು ಮತ್ತು ಜನರನ್ನು ವಿಭಜಿಸಲು ಬಿಡುವುದಿಲ್ಲ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4