nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 

    November 14, 2025

    ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!

    November 14, 2025

    ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ

    November 14, 2025
    Facebook Twitter Instagram
    ಟ್ರೆಂಡಿಂಗ್
    • ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 
    • ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!
    • ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ
    • ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ
    • ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸದಿದ್ದರೆ ಹೋರಾಟ: ಭಾರತೀಯ ಕಿಸಾನ್‌ ಸಂಘ
    • ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ: ಪತ್ತೆಯಾಗದ ಹುಲಿಯ ಗುರುತು!
    • ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ
    • ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಾಡ ಸತ್ಯಾಗ್ರಹ: ದಲಿತ ಚಳುವಳಿಗೆ ಅಡಿಪಾಯ ಹಾಕಿದ ಅಂಬೇಡ್ಕರ್– ಮಾವಳ್ಳಿ ಶಂಕರ್
    ಜಿಲ್ಲಾ ಸುದ್ದಿ March 27, 2025

    ಮಹಾಡ ಸತ್ಯಾಗ್ರಹ: ದಲಿತ ಚಳುವಳಿಗೆ ಅಡಿಪಾಯ ಹಾಕಿದ ಅಂಬೇಡ್ಕರ್– ಮಾವಳ್ಳಿ ಶಂಕರ್

    By adminMarch 27, 2025No Comments2 Mins Read
    ambedkar

    ಸರಗೂರು: ಮಹಾಡ ಸತ್ಯಾಗ್ರಹ ಆಧುನಿಕ ಭಾರತದ ಇತಿಹಾಸದಲ್ಲಿ ಅತ್ಯಂತ ಮಹತ್ವದ್ದು, ಇದನ್ನು ಭಾರತದ ಮಟ್ಟದಲ್ಲಿ ದಲಿತ ಚಳುವಳಿಗೆ ಅಡಿಪಾಯ ಹಾಕಿದ ಅಂಬೇಡ್ಕರ್ ರವರು ಎಂದು ಕರೆಯಲಾಗುತ್ತದೆ ಎಂದು ದಸಂಸ ಅಂಬೇಡ್ಕರ್ ಸಂಘಟನೆಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದರು.

    ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ದಸಂಸ ಅಂಬೇಡ್ಕರ್ ವಾದ ಸಂಘಟನೆ ವತಿಯಿಂದ ಭಾರತದ ಅಸ್ಪೃಶ್ಯರ ಪ್ರತಿರೋಧ ಚಳವಳಿ, ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ ಶೋಷಿತರ ಸಂಘರ್ಷ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಕುಡಿಯುವ ನೀರಿಗಾಗಿ ಅಂಬೇಡ್ಕರ್ ಕೈಗೊಂಡ ಮಹಾಡ್ ‌ಸತ್ಯಾಗ್ರಹ ಭಾರತದ ಅಸ್ಪೃಶ್ಯರ ಮೊದಲ ಪ್ರತಿರೋಧ ಚಳುವಳಿ. ಸಾರ್ವಜನಿಕವಾಗಿ ಕೆರೆಯ ನೀರನ್ನು ಸ್ಪರ್ಶಿಸುವ ಮೂಲಕ ಇದು ಎಲ್ಲರಿಗೂ ಸೇರಿದ್ದು ಎಂದು ಸಾರಿ ಹೇಳಿ ಮಾನವ ಹಕ್ಕುಗಳನ್ನು ಎತ್ತಿಹಿಡಿದರು.

    ಡಾ.ಬಿ.ಆರ್.ಅಂಬೇಡ್ಕರ್ ಅವರು ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿರುವ ಮಹಾಡ್‌ ದಲ್ಲಿ 1927ರ ಮಾರ್ಚ್‌ 20ರಂದು ಸಾರ್ವಜನಿಕವಾಗಿ ಕೆರೆಯ ನೀರನ್ನು ಸ್ಪರ್ಶಿಸುವ ಮೂಲಕ ಇದು ಎಲ್ಲರಿಗೂ ಸೇರಿದ್ದು ಎಂದು ಸಾರಿ ಹೇಳಿ ಮಾನವ ಹಕ್ಕುಗಳನ್ನು ಎತ್ತಿಹಿಡಿದಿದ್ದರು ಎಂದರು.

    ಅಂಬೇಡ್ಕರ್ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಜೆ.ಸೋಮಶೇಖರ್ ಮಾತನಾಡಿ, ಸ್ವಾತಂತ್ರ್ಯ ಬಂದು 78 ವರ್ಷ ಕಳೆದು, ಆಧುನಿಕ ತಂತ್ರಜ್ಞಾನ ಬೆಳೆದರು ಜಾತಿ ವ್ಯವಸ್ಥೆ ಗಟ್ಟಿಯಾಗಿ ಉಳಿದಿದೆ ಎಂದು   ಬೇಸ ವ್ಯಕ್ತಪಡಿಸಿದರು.

    ಅಂಬೇಡ್ಕರ್ ಎಂದರೆ ಜ್ಞಾನ ಮತ್ತು ಪ್ರಜ್ಞೆ, ಮುಂಬಯಿಯಲ್ಲಿ 1923ರಲ್ಲಿ ಅಲ್ಲಿನ ಪುರಸಭೆ ಕೆರೆ ಕಟ್ಟೆಗಳನ್ನು ಸಾರ್ವಜನಿಕ ಸ್ಥಳ ಎಂದು ಘೋಷಣೆ ಮಾಡಲಾಗಿತ್ತು.  1927ರಲ್ಲಿ ಚೌದರ್ ಕೆರೆಯ ನೀರನ್ನು ಮುಟ್ಟುವ ಮೂಲಕ ನವ ಭಾರತದ ಹೊಸ ಚರಿತ್ರೆ ಸೃಷ್ಟಿಸಿದರು ಎಂದರು.

    ಸಂವಿಧಾನದ ಮೂಲಕ ಶಿಕ್ಷಣದ ಹಕ್ಕು, ಮಾತನಾಡುವ ಹಕ್ಕು ಸಿಕ್ಕಿದೆ, ದೌರ್ಜನ್ಯ ವಿರುದ್ಧ ಕಾಯ್ದೆ ಇದ್ದರು ಸಮಾಜದಲ್ಲಿ ಶೋಷಣೆ ನಡೆಯುತ್ತಿದೆ ಎಂದರು.

    ಶೋಷಿತರನ್ನು ವಿಶ್ವಾಸದಿಂದ ಜೊತೆಯಲ್ಲಿ ಕರೆದುಕೊಂಡು ಹೋಗುವ ಮನಸ್ಥಿತಿ ಎಲ್ಲರಲ್ಲೂ ಬರಬೇಕು ಎಂದು ತಿಳಿಸಿದರು. ದೇಶಕ್ಕೆ ರಾಜಕೀಯ ಸ್ವಾತಂತ್ರ್ಯಕಿಂತಲ್ಲೂ, ಸಾಮಾಜಿಕ ಸ್ವಾತಂತ್ರ್ಯ ಮುಖ್ಯ ಎಂಬುದು ಅಂಬೇಡ್ಕರ್ ಆಶಯವಾಗಿತ್ತು ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷ ಬಡಗಲಪುರ ನಾಗೇಂದ್ರ, ದಸಂಸ ಜಿಲ್ಲಾ ಸಂಚಾಲಕ ಮಲ್ಲಳ್ಳಿ ನಾರಾಯಣ್, ಸಂಘಟನ ಸಂಚಾಲಕ ದೊಡ್ಡಸಿದ್ದು ಹಾದನೂರು, ವಿಭಾಗಿಯ ಸಂ ಸಂಚಾಲಕ ಬನ್ನಹಳ್ಳಿಸೋಮಣ್ಣ, ರಾಜ್ಯ ಸಮಿತಿ ಸದಸ್ಯ ಅಂಬುಗ ಮಲ್ಲೇಶ್, ವಿಭಾಗಿಯ ಸಂಚಾಲಕ ಹಾಲೇಶಪ್ಪ, ಜಿಲ್ಲಾ ದಲಿತ ವಿದ್ಯಾರ್ಥಿ ಒಕ್ಕೂಟ ಸಂಚಾಲಕ ಧಮ್ಮ ಆಶೋಕ್, ಜಿಲ್ಲಾ ಸಂಚಾಲಕಿ ಅನುಷಾ, ಬೊಮ್ಮನಹಳ್ಳಿ ಕುಮಾರ್, ಕಳ್ಳಿ ಮುದ್ದನಹಳ್ಳಿ ಚಂದ್ರ, ವಾಟಾಳು ನಾಗರಾಜು, ಕರಡಿಪುರ ಕುಮಾರ್, ದೆವರಸಹಳ್ಳಿ ಬಸವರಾಜು, ಎಚ್ ಡಿ ಕೋಟೆ ಮತ್ತು ಸರಗೂರು ತಾಲೂಕು ಸಂಚಾಲಕರಾದ ಸಣ್ಣ ಕುಮಾರ್, ಕೂಡಗಿ ಗೋವಿಂದರಾಜು, ಸಂಘಟನಾ ಸಂಚಾಲಕರಾದ ಭೋಗೇಶ್ವರ ಕಾಲೋನಿ ಕಾಳಪ್ಪಾಜಿ, ರಾಚಪ್ಪ, ಮಹೇಶ್, ಆನಂದ, ಉದಯ್, ಶಮಿವುಲ್ಲಾ, ಚೆಲುವರಾಜು, ಕುಮಾರ್, ಹಾದನೂರು ಚಂದ್ರ, ಮಹದೇವಸ್ವಾಮಿ, ನಾಗೇಂದ್ರ, ಕೃಷ್ಣ ಕುರ್ಣೆಗಾಲ, ಶಿವರಾಜು, ಕೆಂಪರಾಜು,ಶಿವರುದ್ರ, ರಾಣಿ, ಪಾರ್ವತಿ, ಸೀರಮ್ಮ, ಸ್ವಪ್ನಾ,ಕಾವ್ಯ. ಇನ್ನೂ ಮುಖಂಡರು ಹಾಗೂ ರೈತ ಸಂಘದ ಪದಾಧಿಕಾರಿಗಳು ಇದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 

    November 14, 2025

    ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ: ಪತ್ತೆಯಾಗದ ಹುಲಿಯ ಗುರುತು!

    November 14, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 

    November 14, 2025

    ಸರಗೂರು:  ಕನ್ನಡ ನಮ್ಮ ನಾಡಿನ ಹೆಮ್ಮೆಯ ಭಾಷೆ ಈ ಭಾಷೆ ಹಲವಾರು ಭಾಷೆಗಳಿಗೆ ತಾಯಿಯಾಗಿದೆ ಎಂದು ಪಶು ಸಂಗೋಪನಾ ಇಲಾಖೆ…

    ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!

    November 14, 2025

    ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ

    November 14, 2025

    ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ

    November 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.