ಬೆಂಗಳೂರು: ನೇಪಾಳಿ ಮಹಿಳೆ ಮಹಾಲಕ್ಷ್ಮೀ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ರೀತಿಯ ವರದಿಗಳು ಆಶ್ಚರ್ಯಕರ ಸಂಗತಿಗಳನ್ನು ಬಯಲು ಮಾಡಿದೆ.
ಮಹಾಲಕ್ಷ್ಮೀ ಪ್ಲಾನ್ ಮಾಡಿದ್ದೇ ಬೇರೆ ಆದ್ರೆ ಆಗಿದ್ದೇ ಬೇರೆ ಎಂದು ಹೇಳಲಾಗಿದೆ. ಮಹಾಲಕ್ಷ್ಮಿ ಮೊದಲೇ ಮದುವೆಯಾಗಿದ್ದರೂ ಪ್ರೇಮಿ ಮುಕ್ತಿ ರಂಜನ್ ಪ್ರತಾಪ್ ರಾಯ್ ನಿಂದ ವಿಚಾರ ಮುಚ್ಚಿಟ್ಟಿದ್ದಳಂತೆ. ಇದಲ್ಲದೇ ಬೇರೆ ಹುಡುಗರ ಸಂಗವನ್ನೂ ಮಾಡಿರುವುದಾಗಿ ವರದಿ ತಿಳಿಸಿದೆ.
ಈ ವಿಚಾರ ತಿಳಿದು ಮುಕ್ತಿ ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದ. ತನಗೆ ಕಿರಿ ಕಿರಿ ಮಾಡುತ್ತಿದ್ದ ಮುಕ್ತಿಯನ್ನು ಮುಗಿಸಲು ಆಕೆಯೇ ಮೊದಲು ಪ್ಲ್ಯಾನ್ ಮಾಡಿದ್ದಳು ಎಂದು ಕೆಲವು ವರದಿಗಳು ಹೇಳುತ್ತಿವೆ.
ಮಹಾಲಕ್ಷ್ಮಿ ಹಂತ ಮುಕ್ತಿ ರಂಜನ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಸಾವಿಗೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದ. ಇದರಲ್ಲಿ ಮಹಾಲಕ್ಷ್ಮಿಯನ್ನು ಯಾಕೆ ಕೊಂದೆ ಎಂದು ವಿವರವಾಗಿ ಬರೆದಿದ್ದಾನಂತೆ.
ತನ್ನ ಬಳಿ ಮಹಾಲಕ್ಷ್ಮಿ ಹಣ ವಸೂಲಿ ಮಾಡಿದ್ದಳು. ಆದರೆ ಮದುವೆ ವಿಚಾರವನ್ನು ಮುಚ್ಚಿಟ್ಟಿದ್ದಳು. ಈ ವಿಚಾರವಾಗಿ ತಮ್ಮಿಬ್ಬರ ನಡುವೆ ಗಲಾಟೆಯಾಗಿತ್ತು ಎಂದು ಬರೆದುಕೊಂಡಿದ್ದಾನೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296