ತುರುವೇಕರೆ: ಕಳೆದ ಹಲವು ವರ್ಷಗಳಿಂದ ಮಾಯಸಂದ್ರ ಹೋಬಳಿ ಘಟಕದ ಕನ್ನಡ ಸಾಹಿತ್ಯ ಪರಿಷತ್’ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎನ್.ಆರ್.ಜಯರಾಮ್’ರವರನ್ನು ಕ.ಸಾ.ಪ ತುರುವೇಕೆರೆ ಘಟಕದ “ಮಹಾಪೋಷಕ “ರನ್ನಾಗಿ ಆಯ್ಕೆ ಮಾಡಲಾಗಿದೆ.
ಮಾಯಸಂದ್ರದ ಕನ್ನಡ ಭವನದಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ಕ.ಸಾ.ಪ. ತಾಲ್ಲೂಕು ಘಟಕದ ಅಧ್ಯಕ್ಷರಾದ ಡಿ.ಪಿ.ರಾಜುರವರು ” ಎನ್.ಆರ್.ಜಯರಾಮ್’ರವರು ಹೋಬಳಿ ಘಟಕದ ಅಧ್ಯಕ್ಷರಾಗಿ ಮಾಡಿದ ಕನ್ನಡ ತಾಯಿಯ ಸೇವೆಯನ್ನು ಗುರುತಿಸಿ ಅವರ ಸೇವೆ ತಾಲ್ಲೂಕಿಗೂ ದೊರೆಯಲಿ ಎಂಬ ಆಶಯದಿಂದ ಅವರಿಗೆ ಈ ಸ್ಥಾನ ನೀಡಲಾಗಿದೆ ” ಎಂದು ತಿಳಿಸಿದರು.
ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB