nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ

    January 1, 2026
    Facebook Twitter Instagram
    ಟ್ರೆಂಡಿಂಗ್
    • ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
    • ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
    • ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
    • ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
    • ತುಮಕೂರು: ಗಾಜಿನ ಮನೆಯಲ್ಲಿ  ‘ಸಿರಿಧಾನ್ಯ ಖಾದ್ಯಗಳ’ ಘಮಲು!
    • 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್‌ ಗೆ ಪದೋನ್ನತಿ
    • ತುಮಕೂರು ಡಿಸಿ ಶುಭಕಲ್ಯಾಣ್‌  ರಿಗೆ ಸಿಇಒ ಹೆಚ್ಚುವರಿ ಹೊಣೆ: ಸಿಇಒ ಜಿ.ಪ್ರಭು  ಡಿಸಿಯಾಗಿ ವರ್ಗಾವಣೆ
    • ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹರ್ಷಿ ವಾಲ್ಮೀಕಿ ಸಮುದಾಯವನ್ನ ಕಡೆಗಣನೆ ಮಾಡಿದ ಅಧಿಕಾರಿಗಳ ವಿರುದ್ಧ ತರಾಟೆ ತೆಗೆದುಕೊಂಡ ಸಮುದಾಯದ ಮುಖಂಡರು
    ಕೊರಟಗೆರೆ October 20, 2023

    ಮಹರ್ಷಿ ವಾಲ್ಮೀಕಿ ಸಮುದಾಯವನ್ನ ಕಡೆಗಣನೆ ಮಾಡಿದ ಅಧಿಕಾರಿಗಳ ವಿರುದ್ಧ ತರಾಟೆ ತೆಗೆದುಕೊಂಡ ಸಮುದಾಯದ ಮುಖಂಡರು

    By adminOctober 20, 2023No Comments2 Mins Read
    valmiki

    ಕೊರಟಗೆರೆ : ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ದಿನಾಂಕ 28 ರಂದು ನಡೆಯುವ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯನ್ನ ಏರ್ಪಡಿಸಲಾಗಿತ್ತು.

    ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಗೈರು ಹಾಜರಿಯನ್ನ ಕಂಡು ಹೈರಾಣಾದ ಸಮುದಾಯದ ಮುಖಂಡರುಗಳು. ಕೊರಟಗೆರೆ ಪಟ್ಟಣದಲ್ಲಿ ಸುಮಾರು 10 ವರ್ಷಗಳಿಂದ ಹಳ್ಳ ಹಿಡಿದಿರುವ 1 ಕೋಟಿ ವೆಚ್ಚದ ವಾಲ್ಮೀಕಿ ಭವನ ನಿರ್ಮಾಣ ಕಾಮಗಾರಿಯು  2011-12 ನೇ ಸಾಲಿನಲ್ಲಿ ಅನುಮೋದನೆಗೊಂಡ ಒಂದು ಕೋಟಿ ಅನುದಾನದ ಕಾಮಗಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಳ್ಳ ಹಿಡಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ಈ ಸಭೆಗೆ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಾಗದೇ ಸಮುದಾಯವನ್ನು ಅವಮಾನಿಸುತ್ತಿದ್ದಾರೆ ಹಾಗೂ ಅಧಿಕಾರಿಗಳು ಸಭೆಗೆ ಹಾಜರಾಗದೆ ತಮ್ಮ ಅಧೀನದಲ್ಲಿರುವ ಸಿಬ್ಬಂದಿಗಳನ್ನು ಸಭೆಗೆ ಕಳಿಸುತ್ತಾರೆ ಎಂದು ಸಭೆಯನ್ನು ಮೊಟುಕುಗೊಳಿಸಿ ಹೊರ ನಡೆದ ಘಟನೆಯು ಸಹ ನಡೆಯಿತು.

    ಕೊರಟಗೆರೆ ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿದ್ದು, ಇಂತಹ ಮೀಸಲು ಕ್ಷೇತ್ರದಲ್ಲಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಸಮುದಾಯವನ್ನು ಗೃಹ ಸಚಿವರ ಕ್ಷೇತ್ರದಲ್ಲೇ ಕಡೆಗಣಿಸುತ್ತಿರುವ ಅಧಿಕಾರಿಗಳು. ವಾಲ್ಮೀಕಿ ಭವನವನದ ಕಾಮಗಾರಿಯನ್ನು ಮಂದಗತಿಯಲ್ಲಿ ಸಾಗಿಸುತ್ತಿರುವುದು ಶಾಸಕರ ಗಮನಕ್ಕೆ ಬರಬೇಕು. ಈಗಾಗಲೇ 55 ಲಕ್ಷ ಹಣ ಬಳಕೆಯಾಗಿದೆ. ಆದರೆ ಕಾಮಗಾರಿ ಪ್ರಗತಿಯಲ್ಲಿಲ್ಲ ಎಂದು ನಾಯಕ ಸಮಾಜದ ಮುಖಂಡ ಓಬಳರಾಜು ಆಕ್ರೋಶ ವ್ಯಕ್ತಪಡಿಸಿದರು.

    ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ ವಿ ಮಂಜುನಾಥ್ ಮಾತನಾಡಿ ಪಟ್ಟಣದಲ್ಲಿ ವಾಲ್ಮೀಕಿ ಭವನ ವಾಲ್ಮೀಕಿ ಪುತ್ತಲಿ ಸೇರಿದಂತೆ ಸಮುದಾಯದವರಿಗೆ ಕನಿಷ್ಠ ಸ್ಮಶಾನ ಇರುವುದಿಲ್ಲ ಸರ್ಕಾರ ಪರಿಶಿಷ್ಟ ಪಂಗಡದವರಿಗೆ ಕೋಟ್ಯಂತರ ರೂಪಾಯಿಗಳ ಅನುದಾನವನ್ನು ನೀಡುತ್ತಿದ್ದರು ತಾಲ್ಲೂಕು ಆಡಳಿತವು ಹಾಗೂ ಸಂಬಂದಿಸಿದ ಇಲಾಖಾ ಅಧಿಕಾರಿಗಳು ನಿರ್ಲಕ್ಷ ತೋರುತ್ತಿದ್ದಾರೆ ಹಾಗೂ ಪಟ್ಟಣ ಪಂಚಾಯಿತಿಯಲ್ಲಿ ಪರಿಶಿಷ್ಟ ಪಂಗಡದ ಜಾತಿಗೆ ಮೀಸಲಿಟ್ಟ ಲಕ್ಷಾಂತರ ರೂಪಾಯಿ ಅನುದಾನವನ್ನು ಬೇರೆ ಬೇರೆ ಕಾಮಗಾರಿಗಳಿಗೆ ಬಳಕೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿಲ್ಲವೇ ಅಥವಾ ಈ ಭ್ರಷ್ಟ ಅಧಿಕಾರಿಗಳು ಗುತ್ತಿಗೆದಾರದ ಪರ ಶಾಮೀಲಾಗಿದಾರೆಯೇ ಎಂದು ಪ್ರಶ್ನಿಸಿದರು.

    ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ನಾಮಕವಸ್ತೆಗಷ್ಟೇ ವಾಲ್ಮೀಕಿ ಜಯಂತಿಯನ್ನು ಆಚರಿಸುತ್ತಿದ್ದಾರೆ, ಪರಿಶಿಷ್ಟ ಪಂಗಡದ ಜಾತಿಯವರು ಕಾಡಿನಲ್ಲಿ ವಾಸವಿರುವುದು ಅವರು ನಾಡಿಗೆ ಬರುವುದಿಲ್ಲ ಅವರನ್ನು ಒಂದು ದಿನ ನಾಡಿಗೆ ಕರೆಯಿಸಿ ಖುಷಿ ಪಡಿಸುವುದರಲ್ಲಿ ಅಧಿಕಾರಿಗಳು ನಿಸುಮಾರಾದ್ದಾರೆ ಎಂದು ಸಮಾಜದ ಮುಖಂಡ ವಿನಯ್ ಕುಮಾರ್ ಗುಡುಗಿದರು.

    ವಾಲ್ಮೀಕಿ ಜಯಂತಿಯನ್ನು ಎಲ್ಲ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಗ್ರಾಮೀಣ ಪ್ರದೇಶದ ಜನರು ಸೇರಿ ಅದ್ದೂರಿಯಾಗಿ ಮಹರ್ಷಿ ವಾಲ್ಮೀಕಿರವರ ಭಾವಚಿತ್ರವನ್ನು ಪಟ್ಟಣದ ಕಣ್ಣಪ್ಪ ದೇವಾಲಯದಿಂದ ರಾಜ ಬೀದಿಗಳಲ್ಲಿ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ಮಾಡಿ ಜಯಂತಿಯನ್ನು ಅತ್ಯಂತ ವೈಭವದಿಂದ ಆಚರಿಸಲು ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಯಿತು.

    ಈ ಸಭೆಯಲ್ಲಿ ಪ್ರಭಾರ ತಹಶೀಲ್ದಾರ್ ರಂಜಿತ್ ಕುಮಾರ್ , ಗ್ರೇಡ್ 2 ತಹಶೀಲ್ದಾರ್
    ನರಸಿಂಹಮೂರ್ತಿ,  ಇ ಓ ದೊಡ್ಡ ಸಿದ್ದಪ್ಪ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಭಾಗ್ಯಮ್ಮ, ಸಮಾಜ ಕಲ್ಯಾಣಧಿಕಾರಿ ಶಿವಣ್ಣ, ಬಿ ಇ ಓ ನಟರಾಜು,ಬಿಸಿಎಂ ಇಲಾಖೆಯ ಅನಂತರಾಜು,  ಪಶು ಇಲಾಖೆ ನಾಗಭೂಷಣ, ಎ ಇ ಇ ರವಿಕುಮಾರ್, ಸಬ್ ರಿಜಿಸ್ಟರ್ ಗಿರೀಶ್, ತಾ ಪಂ ಮಧುಸೂಧನ್, ತೋಟಗಾರಿಕೆ ಇಲಾಖೆಯ ನಾಗರಾಜು, ಎ ಇ ಇ ಕೀರ್ತಿ ನಾಯಕ್, ಎ ಎಸ್ ಐ ಧರ್ಮೆಗೌಡ, ರಾಜಸ್ವ ನಿರೀಕ್ಷಕ ಬಸವರಾಜು ಹಾಜರಿದ್ದರು.

    ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.

    admin
    • Website

    Related Posts

    ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ

    December 29, 2025

    ಅಟಲ್‌ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ

    December 27, 2025

    ಪಿ.ಎನ್.ಕೃಷ್ಣ ಮೂರ್ತಿ ಹುಟ್ಟು ಹಬ್ಬ:   ಪೌರ ಕಾರ್ಮಿಕರಿಗೆ ಬೆಚ್ಚನೆಯ ಹೊದಿಕೆ ವಿತರಣೆ

    December 27, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026

    ತುಮಕೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ…

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ

    January 1, 2026

    ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ

    January 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.