ತುರುವೇಕೆರೆ: ತಾಲ್ಲೂಕಿನ ಜೋಡಿಲಿಂಗೇಶ್ವರ ಕ್ಷೇತ್ರವಾದ ಕೋಡಿನಾಗಸಂದ್ರದಲ್ಲಿ ಇಂದು ಶ್ರೀ ಕೋಡಿಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬಹಳ ವೈಭವದ ಮತ್ತು ವಿಜೃಂಭಣೆಯಿಂದ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಕಳೆದ 14 ವರ್ಷಗಳಿಂದ ಇಲ್ಲಿ ಮಹಾಶಿವರಾತ್ರಿ ಹಬ್ಬ ನಡೆಯುತ್ತಿದೆ. ಈ ವಿಶೇಷ ಪೂಜಾ ಕಾರ್ಯಕ್ಕೆ ಸಾವಿರಾರು ಜನರು ಸೇರುತ್ತಿದ್ದಾರೆ. ಈ ಬಾರಿ ಪೂಜಾ ಕಾರ್ಯಕ್ಕೆ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪನವರು ಆಗಮಿಸಿ ದೇವರ ದರ್ಶನ ಪಡೆದುಕೊಂಡರು.
ಮಹಾಶಿವರಾತ್ರಿಯ ಪ್ರಯುಕ್ತ ಪಕ್ಕದ ಕೆರೆಯಲ್ಲಿ ವಿಶೇಷವಾಗಿ ಲಿಂಗವನ್ನು ಪ್ರತಿಷ್ಠಾಪನೆ ಮಾಡಿದ್ದು, ಇದು ಪೂಜಾ ಕಾರ್ಯದ ಕೇಂದ್ರ ಬಿಂದುವಾಗಿತ್ತು. ಮೆರವಣಿಗೆ ಮತ್ತು ಪೂಜಾ ಕಾರ್ಯಕ್ರಮ ಮುಗಿದ ಮೇಲೆ, ನೆರೆದಿದ್ದ ಸಾವಿರಾರು ಭಕ್ತರಿಗೆ ಗ್ರಾಮಸ್ಥರಿಂದ ಅನ್ನ ಸಂತರ್ಪಣೆ ಕಾರ್ಯ ನಡೆಯಿತು.
ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB