ತುಮಕೂರು: ಮಹೇಶ್ ಪಿಯು ಶಿಕ್ಷಣ ಸಂಸ್ಥೆಯು ರಾಜ್ಯದಲ್ಲಿ ಒಂದೊಳ್ಳೆ ಶಿಕ್ಷಣ ಸಂಸ್ಥೆಯಾಗಿದ್ದು, ತುಮಕೂರು ಜಿಲ್ಲೆಯಲ್ಲಿ ಹೆಸರಾಂತ ಶಿಕ್ಷಣ ಸಂಸ್ಥೆಯಾಗಿದೆ,ಎಂದು ತುಮಕೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಶ್ರೀ ವೀರೇಶಾನಂದ ಸ್ವಾಮೀಜಿಯವರು ತಿಳಿಸಿದರು.
ಪಟ್ಟಣದ ಅಶೋಕ ನಗರದಲ್ಲಿರುವ ಮಹೇಶ್ ಪಿಯು ಕಾಲೇಜಿನಲ್ಲಿ ಬುಧವಾರ “ವಿವೇಕಾನಂದ ಸ್ಟಡಿ ಸೆಂಟರ್” ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಂಡಿದ್ದ ಸಂದರ್ಭದಲ್ಲಿ, ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕತ್ತಲಿನಿಂದ ಬೆಳಕಿನ ನಡೆಗೆ, ಅಜ್ಞಾನದಿಂದ ಸುಜ್ಞಾನದ ಕಡೆಗೆ, ದಾರಿ ತೋರುವವನು ಗುರುವಾಗಿದ್ದಾನೆ. ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ. ಇಂದಿನ ಶಿಕ್ಷಣ ಕ್ಷೇತ್ರದಲ್ಲಿ, ಮಹೇಶ್ ಪಿಯು ಶಿಕ್ಷಣ ಸಂಸ್ಥೆಯು ರಾಜ್ಯ ವ್ಯಾಪ್ತಿಯಲ್ಲಿ ಉತ್ತಮ ಹೆಗ್ಗಳಿಕೆಗೆ ಪಾತ್ರವಾಗಿದ್ದು, ನಮ್ಮ ತುಮಕೂರು ಜಿಲ್ಲೆಯಲ್ಲಿಯೂ ಸಹ ಪ್ರತಿವರ್ಷವೂ ಉತ್ತಮ ಫಲಿತಾಂಶ ನೀಡುವ ಶಿಕ್ಷಣ ಸಂಸ್ಥೆಯಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಿಂದಲೇ ರಾಜ್ಯವ್ಯಾಪ್ತಿ ಸೇರಿದಂತೆ ರಾಷ್ಟ್ರವ್ಯಾಪ್ತಿಗಳಲ್ಲೂ ಉತ್ತಮ ವಿದ್ಯಾರ್ಥಿಗಳನ್ನು ತಮ್ಮ ಸಂಸ್ಥೆಯಿಂದ ಕೊಡುಗೆಯಾಗಿ ನೀಡಲಿ ಎಂದು ಆಶೀರ್ವದಿಸಿದರು.
ಪ್ರತಿಯೊಬ್ಬ ವಿದ್ಯಾರ್ಥಿಗಳು ಮತ್ತು ನಾಗರಿಕರು, ಭಾರತ ದೇಶ ಏನೆಂಬುದು ಮತ್ತು ಭವ್ಯ ಭಾರತದ ಕುರಿತು, ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬೇಕೆಂದರೆ, ಪ್ರತಿಯೊಬ್ಬರೂ ಸಹ ಶ್ರೀ ಸ್ವಾಮಿ ವಿವೇಕಾನಂದರ ಜೀವನಚರಿತ್ರೆಯನ್ನು ಓದಬೇಕು, ತದನಂತರ ಅವರ ಆದರ್ಶ, ತತ್ವ-ಸಿದ್ಧಾಂತಗಳನ್ನು ಪಾಲಿಸಬೇಕು. ಅದರಿಂದ ತಮ್ಮ ಜೀವನಶೈಲಿಯ ಬದಲಾವಣೆ ಏನೆಂಬುದು ತಮಗೆ ಅನುಭವವಾಗುತ್ತದೆ ಎಂದರು. ವಿದ್ಯಾರ್ಥಿಗಳು, ಪೋಷಕರಿಗೆ ಹಾಗೂ ಮುಖ್ಯವಾಗಿ ಶಿಕ್ಷಕರಿಗೆ ಬೆಲೆ ತರುವಂತಹ ಸಾಧನೆಯನ್ನು ಮಾಡಬೇಕು ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ತಮ್ಮೆಲ್ಲರ ಮುಂದಿನ ಶಿಕ್ಷಣ ಭವಿಷ್ಯ ಉತ್ತಮವಾಗಿರಲಿ ಎಂದು ಶುಭ ಹಾರೈಸಿದರು.
ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ಪಟೇಲ್. ಉಪನ್ಯಾಸಕರುಗಳಾದ ಶ್ರೀನಿವಾಸ ಕಲ್ಲೂರು. ಜೈರಾಮಯ್ಯ. ಹರೀಶ್. ನಾಗಲಕ್ಷ್ಮಿ. ಪ್ರಿಯಾಂಕ. ಸುರೇಶ್. ಉಷಾರಾಣಿ. ಸೇರಿದಂತೆ ಮುಂತಾದ ಉಪನ್ಯಾಸಕರು ಸಿಬ್ಬಂದಿ ವರ್ಗ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ ವೃಂದ ಸಮಾರಂಭವನ್ನು ನಿರೂಪಿಸಿ, ವಂದಿಸಿದರು.
ವರದಿ: ಸಚಿನ್ ಮಾಯಸಂದ್ರ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB