ಹಿರಿಯೂರು: ನಗರದ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಸುರೇಖಾಮಣಿ ಅವರ ನೇತೃತ್ವದಲ್ಲಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಮಾಜಿ ಸಚಿವ ಡಿ. ಸುಧಾಕರ್ ನೇಮಕಾತಿ ಪತ್ರ ವಿತರಿಸಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಾ. ಪುಷ್ಪಾ ಅಮರ್ ನಾಥ್ ಮತ್ತು ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗೀತಾನಂದಿನಿಗೌಡ ಆದೇಶದ ಮೇರೆಗೆ ನೇಮಕಾತಿ ಪತ್ರ ವಿತರಿಸಲಾಯಿತು.
ಹಿರಿಯೂರು ನಗರದ 31 ವಾರ್ಡ್ ಗಳು ಹಾಗೂ 31 ಗ್ರಾಮ ಪಂಚಾಯತಿಯ ಅಧ್ಯಕ್ಷರು , ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಗಳು ಹಾಗೂ ಪದಾಧಿಕಾರಿಗಳ ನೇಮಕಾತಿ ಆದೇಶ ಪತ್ರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಿ .ಸುಧಾಕರ್, ತಕ್ಷಣದಿಂದಲೇ ಈ ಆದೇಶ ಜಾರಿಯಾಗಿದ್ದು, ಪದಾಧಿಕಾರಿಗಳು ನಿಷ್ಠ ಹಾಗೂ ಪ್ರಾಮಾಣಿಕತೆಯಿಂದ ತಮಗೆ ವಹಿಸಿದ ಜವಾಬ್ದಾರಿಯನ್ನು ನಾಯಕರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಿರ್ವಹಿಸಿ ಎಂದು ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್, ಕಾಂಗ್ರೆಸ್ ಪಕ್ಷದ ಮಹಿಳಾ ಬ್ಲಾಕ್ ಸಮಿತಿಯ ಅಧ್ಯಕ್ಷರಾದ ಎಂ .ಸುರೇಖಾಮಣಿ, ಅಮೃತೇಶ್ , ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಎಮ್ ಎಸ್ ಗೌರಿ ಮುರುಳಿಧರನ್, ಹರಿಶ್ಚಂದ್ರ ಘಾಟ್ ಲಕ್ಷ್ಮೀದೇವಿ, ಮೇರಿರೋಡ್ ಜೂಲಿಯೆಟ್ ಮೇರಿ, ಸರಸ್ವತಿ, ಬ್ಯಾಡರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರೂಪ. ಸಿ . , ಖಂಡೇನಹಳ್ಳಿ ಗ್ರಾಮ ಪಂಚಾಯತಿಯ ಕಾಂಚನಾ , ಹರಿಯಬ್ಬೆ ಗ್ರಾಮದ ಶೃತಿ ಡಿ.ಎಸ್. , ಹಿರಿಯೂರು ನಗರಸಭೆಯ ಹಾಗೂ ಐಮಂಗಲ, ಧರ್ಮಪುರ, ಜವನಗೊಂಡನಹಳ್ಳಿಯ ಎಲ್ಲಾ ಗ್ರಾಮ ಪಂಚಾಯತಿಯ ಬ್ಲಾಕ್ ಕಾಂಗ್ರೆಸ್ ಪಕ್ಷದ ಸದಸ್ಯರುಗಳು, ಮುಖಂಡರುಗಳು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಆರ್ .ನಾಗೇಂದ್ರ ನಾಯ್ಕ, ಅಮೃತೇಶ್ವರ ಸ್ವಾಮಿ ಸಹ ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು (ಚಿತ್ರದುರ್ಗ- ದಾವಣಗೆರೆ)
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB