ಮೈಸೂರು ದಸರಾ ಅಂಗವಾಗಿ ನಡೆಯುತ್ತಿರುವ ಯುವದಸರಾ ಕಾರ್ಯಕ್ರಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವಾಚ್ಯಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಬಿಜೆಪಿ ಮುಖಂಡ ಅಪ್ಪಣ್ಣ ವಿರುದ್ಧ ಮಹಿಳಾ ಪೊಲೀಸರೊಬ್ಬರು ದೂರು ನೀಡಿದ್ದಾರೆ.
ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಮಿತಾ ಎಂಬುವವರು ಬಿಜೆಪಿ ಮುಖಂಡ ಅಪ್ಪಣ್ಣ ವಿರುದ್ಧ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದು ಈ ಸಂಬಂಧ ಎಫ್ ಐಆರ್ ದಾಖಲಾಗಿದೆ.
ಯುವದಸರಾ ಕಾರ್ಯಕ್ರಮಕ್ಕೆ ಬಂದೋಬಸ್ತ್ ಗಾಗಿ ನನ್ನನ್ನ ನಿಯೋಜನೆ ಮಾಡಲಾಗಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಬಂದಿದ್ಧ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಾಯ್ದಿರಿಸಿದ ಜಾಗವನ್ನ ತೋರಿಸಿ ಕಳುಹಿಸಿದೆ. ಈ ಸಮಯದಲ್ಲಿ ಅಪ್ಪಣ್ಣ ಮತ್ತು ಬೆಂಬಲಿಗರನ್ನ ತಡೆದಾಗ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಹೀಗಾಗಿ ಅಪ್ಪಣ್ಣ ಮತ್ತು ಸಹಚರರ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಪಿಎಸ್ ಐ ಸ್ಮಿತಾ ಮನವಿ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


