nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುದ್ರಾ ಲೋನ್ ನಡಿ ಹಣ ಮಂಜೂರು ಮಾಡದೇ ಮಹಿಳೆಯನ್ನು ಸತಾಯಿಸಿದ ಬ್ಯಾಂಕ್: ಅಡ್ವಕೇಟ್ ಗಳ ಪರಿಶ್ರಮದಿಂದ ಮಹಿಳೆಗೆ ನ್ಯಾಯ
    ತುಮಕೂರು January 6, 2023

    ಮುದ್ರಾ ಲೋನ್ ನಡಿ ಹಣ ಮಂಜೂರು ಮಾಡದೇ ಮಹಿಳೆಯನ್ನು ಸತಾಯಿಸಿದ ಬ್ಯಾಂಕ್: ಅಡ್ವಕೇಟ್ ಗಳ ಪರಿಶ್ರಮದಿಂದ ಮಹಿಳೆಗೆ ನ್ಯಾಯ

    By adminJanuary 6, 2023No Comments3 Mins Read
    laxminarasamma

    ನಮ್ಮತುಮಕೂರು ಎಕ್ಸ್’ಕ್ಲೂಸಿವ್ ರಿಪೋರ್ಟ್:  ಮೇಕೆ ಸಾಕಾಣಿಕೆಗಾಗಿ  ಮುದ್ರಾ ಲೋನ್ ಗೆ ಅರ್ಜಿ ಸಲ್ಲಿಸಿದ್ದ ಮಹಿಳೆಗೆ ಸರಿಯಾದ ಸಮಯಕ್ಕೆ ಲೋನ್ ನ ಹಣವನ್ನು ಬಿಡುಗಡೆ ಮಾಡದೇ ಸತಾಯಿಸಿದ ಮಧುಗಿರಿ ತಾಲೂಕಿನ  ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪುರವರ ಬ್ಯಾಂಕ್ ಶಾಖೆಗೆ ತುಮಕೂರು ಗ್ರಾಹಕರ ನ್ಯಾಯಾಲಯವು ಬಿಸಿ ಮುಟ್ಟಿಸಿದೆ.

    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನ ಪುರವರ ಬ್ರಾಂಚ್ ನ ಮುಂದೆ ಮಹಿಳೆಯೊಬ್ಬರು ತೀವ್ರವಾಗಿ ದುಃಖಿತರಾಗಿರುವುದನ್ನು ಕಂಡ ಅಡ್ವಕೇಟ್ ಎಂ.ಎಸ್.ಗಣೇಶ್ ಹಾಗೂ ಅಡ್ವಕೇಟ್ ಶಿವಕುಮಾರ್ ಮೇಷ್ಟ್ರುಮನೆ ಅವರು, ಮಹಿಳೆಯ ಬಳಿ ಏನು ಸಮಸ್ಯೆ ಎಂದು ವಿಚಾರಿಸಿದ್ದಾರೆ. ಈ ವೇಳೆ ತನ್ನ ಹೆಸರು ಲಕ್ಷ್ಮೀನರಸಮ್ಮ ಎಂದು ತಿಳಿಸಿದ್ದು, ತನಗೆ ಬ್ಯಾಂಕ್ ನಿಂದಾದ ಅನ್ಯಾಯವನ್ನು ವಿವರಿಸಿದ್ದಾರೆ…


    Provided by
    Provided by

    ಲಕ್ಷ್ಮೀನರಸಮ್ಮ ಮೇಕೆ ಸಾಕಾಣಿಕೆಗಾಗಿ 6 ಲಕ್ಷ ರೂಪಾಯಿಗಾಗಿ ಮುದ್ರಾ ಯೋಜನೆಯಡಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪುರವರ ಬ್ರಾಂಚ್ ಗೆ ಅರ್ಜಿ ಸಲ್ಲಿಸುತ್ತಾರೆ.  ಬ್ಯಾಂಕ್ ವೆರಿಫಿಕೇಷನ್ ಮಾಡಿ 3 ಲಕ್ಷ  ಮಂಜೂರು ಮಾಡ್ತೀವಿ ಎಂದು ಹೇಳಿ ಮಂಜೂರು ಮಾಡ್ತಾರೆ.

    ಗೋಡ್ ಶೆಡ್ , ಮೇಕೆ ಸಾಕಣಿಕೆಗೆ ಬೇಕಾದ ಪರಿಕರಗಳನ್ನು ತೆಗೆದುಕೊಳ್ಳುವುದಕ್ಕೆ ಮಹಿಳೆ ಹಣವನ್ನು ಬಂಡವಾಳ ಹಾಕುತ್ತಾರೆ. ಬಳಿಕ ಬ್ಯಾಂಕ್ ಮೇಕೆ ಸಾಕಣಿಕೆಗೆ ಅಪ್ರುವಲ್ ನೀಡಿದಾಗ ಮೇಕೆ ಮರಿಗಳನ್ನು ಮಾರಾಟಗಾರರಿಂದ 3 ಲಕ್ಷ ಬೆಲೆ ಬಾಳುವ ಮರಿಗಳನ್ನು ಮಹಿಳೆ ಖರೀದಿ ಮಾಡ್ತಾರೆ.  ನಂತರ ಬ್ಯಾಂಕ್ ನ ಮ್ಯಾನೇಜರ್ ಪಶು ವೈದ್ಯಾಧಿಕಾರಿಗಳ ಜೊತೆಗೆ ಬಂದು ಮೇಕೆಗಳನ್ನು ವೆರಿಫೈ ಮಾಡ್ತಾರೆ, ಮೇಕೆಗಳಿಗೆ ಟ್ಯಾಗ್ ಮಾಡಿದ ಬಳಿಕ ಬ್ಯಾಂಕ್ ಒಂದೂವರೆ ಲಕ್ಷ ರೂ. ಮಂಜೂರು ಮಾಡುತ್ತದೆ.  ಇನ್ನೂ ಉಳಿದ ಒಂದೂವರೆ ಲಕ್ಷ ಹಣವನ್ನು ಸ್ವಲ್ಪ ದಿನಗಳ ನಂತರ ಮಂಜೂರು ಮಾಡುವುದಾಗಿ ಬ್ಯಾಂಕ್ ಮ್ಯಾನೇಜರ್ ಹೇಳುತ್ತಾರೆ. ಈ ಹಣವನ್ನು ಮೇಕೆ ಮಾರಾಟಗಾರರ ಅಕೌಂಟ್ ಗೆ ನೇರವಾಗಿ ಪಾವತಿಸುವುದಾಗಿಯೂ ಹೇಳುತ್ತಾರೆ.

    ಇದಾದ ಬಳಿಕ ಬ್ಯಾಂಕ್ ಮ್ಯಾನೇಜರ್ ಉಳಿದ ಒಂದೂವರೆ ಲಕ್ಷ ಹಣವನ್ನು ಮಹಿಳೆಯ ಅಕೌಂಟ್ ಗೂ ಪಾವತಿ ಮಾಡದೇ, ಮೇಕೆ ಮಾರಾಟಗಾರರ ಅಕೌಂಟ್ ಗೂ ಪಾವತಿ ಮಾಡದೇ ಸತಾಯಿಸಿದ್ದಾರೆ. ಇತ್ತ ಮೇಕೆ ಮಾರಾಟಗಾರರು ಹಣ ನೀಡುವಂತೆ ಮಹಿಳೆಯನ್ನು ಕೇಳಿದಾಗ ಮಹಿಳೆ ತಿಂಗಳು ಗಟ್ಟಲೆ ಬ್ಯಾಂಕ್ ಗೆ ಬಂದು ಉಳಿದ ಹಣ ಮಂಜೂರು ಮಾಡುವಂತೆ ಮನವಿ ಮಾಡಿದರೂ ಮಂಜೂರು ಮಾಡದೇ ಸತಾಯಿಸಿದ್ದಾರೆ. ಅತ್ತ ಮೇಕೆ ಮಾರಾಟಗಾರ, ತನಗೆ ಪೂರ್ತಿ ಹಣ ನೀಡಿಲ್ಲ ಎಂದು ಮಹಿಳೆಗೆ ಕೊಟ್ಟಿದ್ದ ಮೇಕೆಗಳನ್ನು ವಾಪಸ್ ಕೊಂಡೊಯ್ಯುತ್ತಾನೆ.

    ಒಂದೆಡೆಯಲ್ಲಿ ಸಾಲ ಪಡೆದ ಮೊತ್ತವನ್ನು ಬ್ಯಾಂಕ್ ಗೆ ಪಾವತಿಸಬೇಕು, ಮತ್ತೊಂದೆಡೆಯಲ್ಲಿ ಸಾಲ ಮಾಡಿ ಖರೀದಿಸಿ ಸಾಕಿದ್ದ ಮೇಕೆಗಳನ್ನೂ ತೆಗೆದುಕೊಂಡು ಹೋಗಲಾಗಿದೆ. ಅತ್ತ ಹಣವೂ ಇಲ್ಲ, ಇತ್ತ ತಲೆಯ ಮೇಲೆ ಸಾಲದ ಹೊರೆಯೂ ಬಿದ್ದಿದ್ದು, ಇದರಿಂದ ಮಹಿಳೆ ಕಂಗಾಲಾಗಿದ್ದಾರೆ.

    ಮಹಿಳೆಯ ಸಮಸ್ಯೆಯನ್ನು ಕೇಳಿದ ಅಡ್ವಕೇಟ್ ಗಳು,  ಬ್ಯಾಂಕ್ ಗೆ ಈ ಬಗ್ಗೆ ಕೋರ್ಟ್ ನೋಟಿಸ್ ಇಶ್ಯು ಮಾಡುತ್ತಾರೆ. ಇತ್ತ ನೋಟಿಸ್ ಬರುತ್ತಿದ್ದಂತೆಯೇ ಬ್ಯಾಂಕ್ ಉಳಿಕೆ ಹಣವನ್ನು ಬ್ಯಾಂಕ್ ಬಿಡುಗಡೆ ಮಾಡುತ್ತದೆ. ಆದರೆ, ಈ ಹಣ ಮಹಿಳೆಯ ಲೋನ್ ಅಕೌಂಟ್ ನಲ್ಲಿ ಕಾಣಿಸುತ್ತದೆ. ಆದರೆ, ಮಹಿಳೆಯ ಅಕೌಂಟ್ ಗೂ ಬಾರದೇ, ಮೇಕೆ ಮಾರಿರುವ ವ್ಯಕ್ತಿಯ ಅಕೌಂಟ್ ಗೆ ಹೋಗದ ಸ್ಥಿತಿಯಲ್ಲಿರುತ್ತದೆ. ಇದು ಒಂದು ರೀತಿಯಲ್ಲಿ ಮೋಸದ ವಹಿವಾಟಾಗಿರುತ್ತದೆ. ಇದನ್ನು ಮನಗಂಡ ಅಡ್ವಕೇಟ್ ಮಹಿಳೆಯ ಪರವಾಗಿ ಗ್ರಾಹಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುತ್ತಾರೆ.

    ಗ್ರಾಹಕರ ನ್ಯಾಯಾಲಯವು ಮಹಿಳೆ ಸಲ್ಲಿಸಿರುವ ದೂರನ್ನು ಪರಾಮರ್ಶಿಸಿ, ಆ ಮಹಿಳೆಗೆ ನೀಡಲಾಗಿರುವ ಒಂದೂವರೆ ಲಕ್ಷ ಸಾಲಕ್ಕೆ ಯಾವುದೇ ಬಡ್ಡಿ ತೆಗೆಯ ಬಾರದು ಎಂದು ಬ್ಯಾಂಕ್ ಗೆ ನಿರ್ದೇಶನ ಮಾಡಿ, ಕಂತುಗಳಲ್ಲಿ ಒಂದೂವರೆ ಲಕ್ಷ ರೂ.ಗಳನ್ನು ಮರುಪಾವತಿ ಮಾಡುವಂತೆ ಆದೇಶ ಮಾಡಿದೆ. ಮಹಿಳೆಗೆ ಆಗಿರುವ ನಷ್ಟಕ್ಕೆ ಒಂದೂವರೆ ಲಕ್ಷ ಪರಿಹಾರ ನೀಡಬೇಕು ಎಂದು ನಿರ್ದೇಶನ ನೀಡಿದೆ. ಸಮಯಕ್ಕೆ ಸರಿಯಾಗಿ ಹಣ ಪಾವತಿಸದಕ್ಕೆ 50 ಸಾವಿರ ದಂಡ ವಿಧಿಸಿದೆ. ಜೊತೆಗೆ ವ್ಯಾಜ್ಯ ಪರಿಹಾರಕ್ಕೆ 10 ಸಾವಿರ ನೀಡುವಂತೆ ಆದೇಶ ನೀಡುವ ಮೂಲಕ ಮಹಿಳೆಗೆ ನ್ಯಾಯ ನೀಡಿದೆ.

    ಬ್ಯಾಂಕ್ ಗಳಿಗೆ ಹೋಗುವ ಗ್ರಾಹಕರನ್ನು ಇನ್ನಿಲ್ಲದ ಕಾರಣಗಳನ್ನು ನೀಡಿ ಸತಾಯಿಸುವ ಬ್ಯಾಂಕ್ ಗಳಿಗೆ ಈ ಪ್ರಕರಣವು ಎಚ್ಚರಿಕೆಯ ಕರೆ ಘಂಟೆಯಾಗಿದೆ. ತುಮಕೂರು ಗ್ರಾಹಕರ ನ್ಯಾಯಾಲಯದ ಈ ಆದೇಶವು ಇತರ ಬ್ಯಾಂಕ್ ಗಳಿಗೂ ಸಂದೇಶ ನೀಡಿದಂತಾಗಿದೆ. ಜೊತೆಗೆ ಸಂಕಷ್ಟದಲ್ಲಿದ್ದ ಮಹಿಳೆಯ ಸಮಸ್ಯೆಯನ್ನು ಬಗೆಹರಿಸಲು ಕಾನೂನಿನ ನೆರವು ನೀಡಿದ ಅಡ್ವಕೇಟ್ ಎಂ.ಎಸ್.ಗಣೇಶ್ ಹಾಗೂ ಅಡ್ವಕೇಟ್ ಶಿವಕುಮಾರ್ ಮೇಷ್ಟ್ರುಮನೆ ಅವರ ಪರಿಶ್ರಮ ಅಭಿನಂದನೀಯವಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಬೆಂಗಳೂರು: ಹಿರಿಯ ಪತ್ರಕರ್ತ ಹಾಗು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ (93)ಅವರು ಇಂದು ನಿಧನರಾಗಿದ್ದಾರೆ . ಬೆಂಗಳೂರಿನ ಮಲ್ಲಿಗೆ…

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.