nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    June 29, 2025

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾವು ಪ್ರಕೃತಿಯನ್ನು ರಕ್ಷಿಸಿದರೆ, ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ | ಸಚಿವ ಮಾಧುಸ್ವಾಮಿ
    ಗುಬ್ಬಿ December 11, 2021

    ನಾವು ಪ್ರಕೃತಿಯನ್ನು ರಕ್ಷಿಸಿದರೆ, ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ | ಸಚಿವ ಮಾಧುಸ್ವಾಮಿ

    By adminDecember 11, 2021No Comments2 Mins Read
    madhuswamy

    ಗುಬ್ಬಿ: ನೆಲ ಮತ್ತು ಜಲವನ್ನು ನಾವು ಸಂರಕ್ಷಣೆ ಮಾಡಿದರೆ,  ನಮ್ಮನ್ನು ಈ ಪ್ರಕೃತಿ ಸಂರಕ್ಷಣೆ ಮಾಡುತ್ತದೆ.  ನೀರನ್ನು ಮಿತವಾಗಿ ಬಳಸಿ ಅಂತರ್ಜಲವನ್ನು ಕಾಪಾಡುವ ಪ್ರಯತ್ನ ಮಾಡಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ.  ನೀರನ್ನು ಕೃತಕವಾಗಿ ತಯಾರಿಸಲು ಆಗುವುದಿಲ್ಲ ಎಂದು ಸಚಿವ ಮಾಧುಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.

    ತಾಲ್ಲೂಕಿನ ಸಿ.ಎಸ್.ಪುರ ಕೆರೆ ಹೇಮೆಯಿಂದ ತುಂಬಿ ಹರಿದ ಹಿನ್ನಲೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿ ನಂತರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿರಿಯ ಮುತ್ಸದ್ಧಿ ದೇವೇಗೌಡರ ನಿರೀಕ್ಷೆಯಂತೆ ನೀರು ಈ ಜಿಲ್ಲೆಗೆ ಸಿಗಲಿಲ್ಲ. ಇದಕ್ಕೆ ತಕ್ಕ ಉತ್ತರ ಜನರು ನೀಡಿದ್ದರು. ಆದರೆ ನೀರು ಹರಿಸುವ ಜವಾಬ್ದಾರಿ ನನ್ನ ಹೆಗಲಿಗೆ ಬಿತ್ತು. ಈ ನಿಟ್ಟಿನಲ್ಲಿ ಜವಾಬ್ದಾರಿ ಅರಿತು ಜಿಲ್ಲೆಗೆ ನೀರು ಹರಿಸುವ ಕೆಲಸ ನಿಯಾಮಾನುಸಾರ ನಡೆಸಿ ಮೂರು ಜಿಲ್ಲೆಗೆ ನ್ಯಾಯ ಒದಗಿಸಿದೆ. ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.


    Provided by

    ಹಾಸನದಿಂದ ತುಮಕೂರಿನತ್ತ ಹೇಮೆ ಹರಿಯುವ ವೇಳೆ ಸಾಕಷ್ಟು ಭಾಗದಲ್ಲಿ ನೀರು ವ್ಯರ್ಥವಾಗುವುದು. ಈ ನಿಟ್ಟಿನಲ್ಲಿ ಪೋಲಾಗುವ 38 ಕಡೆ ಗೇಟ್ ನಿರ್ಮಿಸಿ ನೀರು ಉಳಿಸುವ ಕೆಲಸ ಮಾಡಲಾಗುವುದು. ಅಮೂಲ್ಯ ವಸ್ತುಗಳಲ್ಲಿ ನೀರು ಪ್ರಮುಖ ಎನಿಸಿದೆ. ಇದರ ಬಳಕೆಯನ್ನು ಅರಿತು ಮಾಡಬೇಕಿದೆ. ನದಿ ನೀರು ಹರಿಸಿಕೊಳ್ಳುವ ಭರದಲ್ಲಿ ಸಾಕಷ್ಟು ವ್ಯರ್ಥವಾಗುವ ಬಗ್ಗೆ ಗಂಭೀರ ಚಿಂತನೆ ಮಾಡಿ, ಅಧಿಕಾರಿಗಳಿಗೆ ಸೂಚನೆ ನೀಡಿ ನಾಲೆಯಿಂದ ಪೋಲಾಗುವುದನ್ನು ತಡೆ ಹಿಡಿಯಬೇಕಿದೆ ಎಂದರು.

    ನೆಲ ಮತ್ತು ಜಲ ಜನರಲ್ಲಿ ಬಾಂಧವ್ಯ ಬೆಸೆಯುತ್ತದೆ. ಹಳೇ ಮೈಸೂರು ಭಾಗದಲ್ಲಿ ನೀರಿನ ಮಹತ್ವ ಅರಿತು ಹೇಮೆ ಹರಿಸುವ ಯೋಜನೆ ಕಾರ್ಯರೂಪಕ್ಕೆ ಬಂತು. ತೀರ ಸಂಕಷ್ಟದಲ್ಲಿದ್ದ ತುಮಕೂರು ಜಿಲ್ಲೆಗೆ ಹೇಮಾವತಿ ಜೀವ ಜಲವಾಯಿತು. ಈ ನೀರು 7 ಲಕ್ಷ ಹೆಕ್ಟೇರ್ ಭೂಮಿ ಉಳಿಸುವ ಯೋಜನೆಯಾಗಿ ನಂತರದಲ್ಲಿ 5 ಲಕ್ಷಕ್ಕೆ ಸೀಮಿತವಾಯಿತು. ಈಗ 3.80 ಲಕ್ಷ ಹೆಕ್ಟೇರ್ ಗೆ ಮಾತ್ರ ಬಳಕೆಗೆ ಮುಡಿಪಾಗಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರಿಗೆ ನೀರು ಉಳಿಸಿ ಮಿಕ್ಕ ನೀರು ಕೃಷಿಗೆ ಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಜತೆಗೆ ದೀರ್ಘಾವಧಿ ಬೆಳೆಗೆ ಕಡಿವಾಣ ಹಾಕಿ ಎರಡರಿಂದ ಮೂರು ತಿಂಗಳ ಬೆಳೆ ಬೆಳೆದುಕೊಳ್ಳಲು ರೈತರಲ್ಲಿ ಮನವಿ ಮಾಡಿದರು.

    ಈ ಜತೆಗೆ ಬೋರ್ ವೆಲ್ ಗೆ ಸುರಿದ ಹಣ ಉಳಿಸಿಕೊಳ್ಳಲು ರೈತರಿಗೆ ನೀರು ಮತ್ತು ವಿದ್ಯುತ್ ನೀಡಿದರೆ ಸಾಕು. ತಮ್ಮ ಸ್ವಾಭಿಮಾನ ಬದುಕು ಕಟ್ಟಿ ಕೊಳ್ಳುತ್ತಾರೆ. ಈ ಕೆಲಸ ಮಾಡಿದ ಶಾಸಕ ಜಯರಾಮ್ ಅವರನ್ನು ಮತ್ತೊಮ್ಮೆ ಗೆಲ್ಲಿಸುವ ಮೂಲಕ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡಿಕೊಳ್ಳಲು ಕರೆ ನೀಡಿದರು.

    ಮಾಜಿ ಸಚಿವ ಎಸ್.ಶಿವಣ್ಣ ಮಾತನಾಡಿ, ಜಿಲ್ಲೆಗೆ ಭಗೀರಥ ರೀತಿ ಬಂದ ಮಾಧುಸ್ವಾಮಿ ಅವರು ಕೈಗೆತ್ತಿಕೊಂಡ ಯೋಜನೆಗಳು ಮುಂದಿನ ದಿನಗಳಲ್ಲಿ ಜಿಲ್ಲೆಗೆ ನೀರಿನ ಹಾಹಾಕಾರ ತಪ್ಪುತ್ತದೆ. ಭದ್ರ ಮತ್ತು ಕೃಷ್ಣ ಮೇಲ್ದಂಡೆ ಯೋಜನೆಗಳು ಜಿಲ್ಲೆಯಲ್ಲಿ ಸಾಕಾರಗೊಳ್ಳಲಿದೆ. ರಾಜಕಾರಣಕ್ಕೆ ದುರ್ಬಳಕೆಯಾಗಿದ್ದ ಹೇಮೆ ನೀರು ಸದ್ಬಳಕೆಯ ಬಗ್ಗೆ ಜನರಿಗೆ ತಿಳಿಸಿದ ಸಚಿವರ ಕಾನೂನು ಬದ್ಧ ಕೆಲಸ ಜನ ಮನ್ನಣೆ ಗಳಿಸಿದೆ ಎಂದರು.

    ತುರುವೇಕೆರೆ ಶಾಸಕ ಮಸಾಲಾ ಜಯರಾಮ್ ಮಾತನಾಡಿ, ರಾಜಕೀಯ ಪುನರ್ಜನ್ಮ ನೀಡುವ ಕೆಲಸ ನೀರು ಹರಿಸುವುದಾಗಿದೆ. ಈ ಕೆಲಸಕ್ಕೆ ಸಚಿವ.ಮಾಧುಸ್ವಾಮಿ ಅವರ ಆಶೀರ್ವಾದ ಕಾರಣ. ನೂರರಷ್ಟು ಕೆರೆಕಟ್ಟೆಗಳು ಹೇಮೆಯಿಂದ ತುಂಬಿದೆ. ಮುಂದಿನ ದಿನದಲ್ಲಿ ನೀರು ಸರಾಗವಾಗಿ ಹರಿಯಲು ನಾಲೆ ಅಗಲೀಕರಣ ಯೋಜನೆಗೆ 1050 ಕೋಟಿ ರೂ ಮಂಜೂರಿಗೆ ಸಮ್ಮತಿಸಿದ್ದಾರೆ. ಈ ಹಿಂದೆ ಮಂಜೂರು ಮಾಡಿದ್ದ 650 ಕೋಟಿ ಪೈಪ್ ಲೈನ್ ಯೋಜನೆ ಕೈಬಿಟ್ಟು ನಾಲೆ ಮೂಲಕವೇ ಎಲ್ಲರಿಗೂ ನೀರು ನೀಡುವ ಕೆಲಸ ಮಾಡಿದರು. ಮುಂದೆ 2500 ಕ್ಯೂಸೆಕ್ಸ್ ನೀರು ನಾಲೆಯಲ್ಲಿ ಹರಿದು ಜಿಲ್ಲೆಗೆ ಸಾಕಷ್ಟು ನೀರು ಬರಲಿದೆ ಎಂದರು.

    ಇದೇ ಸಂದರ್ಭದಲ್ಲಿ ಸಚಿವರಿಗೆ ಹಾಗೂ ಶಾಸಕರಿಗೆ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಬಿಎಂಪಿ ಸದಸ್ಯ ಸಿ.ಕೆ.ರಾಮಮೂರ್ತಿ, ಗ್ರಾ.ಪಂ. ಅಧ್ಯಕ್ಷ ಕೆಂಪರಾಜು, ಉಪಾಧ್ಯಕ್ಷೆ ಮಂಜುಳ ರಘು, ಮುಖಂಡರಾದ ಕೊಂಡಜ್ಜಿ ವಿಶ್ವನಾಥ್, ಸಿದ್ದರಾಮಯ್ಯ, ಭಾನುಪ್ರಕಾಶ್, ಮಹೇಶ್, ಶಿವಲಿಂಗೇಗೌಡ, ಹಿಂಡಿಸ್ಕೆರೆ ಗ್ರಾ.ಪಂ. ಅಧ್ಯಕ್ಷ ಪ್ರಕಾಶ್, ಸದಾಶಿವಕುಮಾರ್ ಇತರರು ಇದ್ದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಸ್ನೇಹಿತನ ಜೊತೆ ಪತ್ನಿ ಪರಾರಿ : ಸೆಲ್ಫಿ ವಿಡಿಯೋ ಫೇಸ್ ಬುಕ್ ಗೆ ಹರಿಬಿಟ್ಟು ನೇಣಿಗೆ ಶರಣಾದ ಪತಿರಾಯ..!!.

    February 18, 2025

    ಕೆರೆಗೆ ಬಿದ್ದು ತಾಯಿ– ಮಗಳ ದಾರುಣ ಸಾವು

    January 10, 2025

    ಹಕ್ಕು ಪತ್ರ ವಿತರಣೆಯಲ್ಲಿ ಲೋಪ: ದಲಿತ ಕುಟುಂಬಗಳಿಂದ ಆಹೋರಾತ್ರಿ ಧರಣಿ

    December 4, 2024
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    ಸರಗೂರು:  ಶಾಲೆಯ ಹಳೆಯ ನೆನಪುಗಳು ಪರಿಶ್ರಮ, ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ ಎಂದು  ರಾಷ್ಟ್ರೀಯ  ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು,…

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    June 29, 2025

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.