nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026
    Facebook Twitter Instagram
    ಟ್ರೆಂಡಿಂಗ್
    • ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ
    • ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ
    • ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್
    • ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ
    • ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ
    • ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು
    • ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು
    • ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾವು ಪ್ರಕೃತಿಯನ್ನು ರಕ್ಷಿಸಿದರೆ, ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ | ಸಚಿವ ಮಾಧುಸ್ವಾಮಿ
    ಗುಬ್ಬಿ December 11, 2021

    ನಾವು ಪ್ರಕೃತಿಯನ್ನು ರಕ್ಷಿಸಿದರೆ, ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ | ಸಚಿವ ಮಾಧುಸ್ವಾಮಿ

    By adminDecember 11, 2021No Comments2 Mins Read
    madhuswamy

    ಗುಬ್ಬಿ: ನೆಲ ಮತ್ತು ಜಲವನ್ನು ನಾವು ಸಂರಕ್ಷಣೆ ಮಾಡಿದರೆ,  ನಮ್ಮನ್ನು ಈ ಪ್ರಕೃತಿ ಸಂರಕ್ಷಣೆ ಮಾಡುತ್ತದೆ.  ನೀರನ್ನು ಮಿತವಾಗಿ ಬಳಸಿ ಅಂತರ್ಜಲವನ್ನು ಕಾಪಾಡುವ ಪ್ರಯತ್ನ ಮಾಡಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ.  ನೀರನ್ನು ಕೃತಕವಾಗಿ ತಯಾರಿಸಲು ಆಗುವುದಿಲ್ಲ ಎಂದು ಸಚಿವ ಮಾಧುಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.

    ತಾಲ್ಲೂಕಿನ ಸಿ.ಎಸ್.ಪುರ ಕೆರೆ ಹೇಮೆಯಿಂದ ತುಂಬಿ ಹರಿದ ಹಿನ್ನಲೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿ ನಂತರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿರಿಯ ಮುತ್ಸದ್ಧಿ ದೇವೇಗೌಡರ ನಿರೀಕ್ಷೆಯಂತೆ ನೀರು ಈ ಜಿಲ್ಲೆಗೆ ಸಿಗಲಿಲ್ಲ. ಇದಕ್ಕೆ ತಕ್ಕ ಉತ್ತರ ಜನರು ನೀಡಿದ್ದರು. ಆದರೆ ನೀರು ಹರಿಸುವ ಜವಾಬ್ದಾರಿ ನನ್ನ ಹೆಗಲಿಗೆ ಬಿತ್ತು. ಈ ನಿಟ್ಟಿನಲ್ಲಿ ಜವಾಬ್ದಾರಿ ಅರಿತು ಜಿಲ್ಲೆಗೆ ನೀರು ಹರಿಸುವ ಕೆಲಸ ನಿಯಾಮಾನುಸಾರ ನಡೆಸಿ ಮೂರು ಜಿಲ್ಲೆಗೆ ನ್ಯಾಯ ಒದಗಿಸಿದೆ. ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.


    Provided by
    Provided by

    ಹಾಸನದಿಂದ ತುಮಕೂರಿನತ್ತ ಹೇಮೆ ಹರಿಯುವ ವೇಳೆ ಸಾಕಷ್ಟು ಭಾಗದಲ್ಲಿ ನೀರು ವ್ಯರ್ಥವಾಗುವುದು. ಈ ನಿಟ್ಟಿನಲ್ಲಿ ಪೋಲಾಗುವ 38 ಕಡೆ ಗೇಟ್ ನಿರ್ಮಿಸಿ ನೀರು ಉಳಿಸುವ ಕೆಲಸ ಮಾಡಲಾಗುವುದು. ಅಮೂಲ್ಯ ವಸ್ತುಗಳಲ್ಲಿ ನೀರು ಪ್ರಮುಖ ಎನಿಸಿದೆ. ಇದರ ಬಳಕೆಯನ್ನು ಅರಿತು ಮಾಡಬೇಕಿದೆ. ನದಿ ನೀರು ಹರಿಸಿಕೊಳ್ಳುವ ಭರದಲ್ಲಿ ಸಾಕಷ್ಟು ವ್ಯರ್ಥವಾಗುವ ಬಗ್ಗೆ ಗಂಭೀರ ಚಿಂತನೆ ಮಾಡಿ, ಅಧಿಕಾರಿಗಳಿಗೆ ಸೂಚನೆ ನೀಡಿ ನಾಲೆಯಿಂದ ಪೋಲಾಗುವುದನ್ನು ತಡೆ ಹಿಡಿಯಬೇಕಿದೆ ಎಂದರು.

    ನೆಲ ಮತ್ತು ಜಲ ಜನರಲ್ಲಿ ಬಾಂಧವ್ಯ ಬೆಸೆಯುತ್ತದೆ. ಹಳೇ ಮೈಸೂರು ಭಾಗದಲ್ಲಿ ನೀರಿನ ಮಹತ್ವ ಅರಿತು ಹೇಮೆ ಹರಿಸುವ ಯೋಜನೆ ಕಾರ್ಯರೂಪಕ್ಕೆ ಬಂತು. ತೀರ ಸಂಕಷ್ಟದಲ್ಲಿದ್ದ ತುಮಕೂರು ಜಿಲ್ಲೆಗೆ ಹೇಮಾವತಿ ಜೀವ ಜಲವಾಯಿತು. ಈ ನೀರು 7 ಲಕ್ಷ ಹೆಕ್ಟೇರ್ ಭೂಮಿ ಉಳಿಸುವ ಯೋಜನೆಯಾಗಿ ನಂತರದಲ್ಲಿ 5 ಲಕ್ಷಕ್ಕೆ ಸೀಮಿತವಾಯಿತು. ಈಗ 3.80 ಲಕ್ಷ ಹೆಕ್ಟೇರ್ ಗೆ ಮಾತ್ರ ಬಳಕೆಗೆ ಮುಡಿಪಾಗಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರಿಗೆ ನೀರು ಉಳಿಸಿ ಮಿಕ್ಕ ನೀರು ಕೃಷಿಗೆ ಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಜತೆಗೆ ದೀರ್ಘಾವಧಿ ಬೆಳೆಗೆ ಕಡಿವಾಣ ಹಾಕಿ ಎರಡರಿಂದ ಮೂರು ತಿಂಗಳ ಬೆಳೆ ಬೆಳೆದುಕೊಳ್ಳಲು ರೈತರಲ್ಲಿ ಮನವಿ ಮಾಡಿದರು.

    ಈ ಜತೆಗೆ ಬೋರ್ ವೆಲ್ ಗೆ ಸುರಿದ ಹಣ ಉಳಿಸಿಕೊಳ್ಳಲು ರೈತರಿಗೆ ನೀರು ಮತ್ತು ವಿದ್ಯುತ್ ನೀಡಿದರೆ ಸಾಕು. ತಮ್ಮ ಸ್ವಾಭಿಮಾನ ಬದುಕು ಕಟ್ಟಿ ಕೊಳ್ಳುತ್ತಾರೆ. ಈ ಕೆಲಸ ಮಾಡಿದ ಶಾಸಕ ಜಯರಾಮ್ ಅವರನ್ನು ಮತ್ತೊಮ್ಮೆ ಗೆಲ್ಲಿಸುವ ಮೂಲಕ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡಿಕೊಳ್ಳಲು ಕರೆ ನೀಡಿದರು.

    ಮಾಜಿ ಸಚಿವ ಎಸ್.ಶಿವಣ್ಣ ಮಾತನಾಡಿ, ಜಿಲ್ಲೆಗೆ ಭಗೀರಥ ರೀತಿ ಬಂದ ಮಾಧುಸ್ವಾಮಿ ಅವರು ಕೈಗೆತ್ತಿಕೊಂಡ ಯೋಜನೆಗಳು ಮುಂದಿನ ದಿನಗಳಲ್ಲಿ ಜಿಲ್ಲೆಗೆ ನೀರಿನ ಹಾಹಾಕಾರ ತಪ್ಪುತ್ತದೆ. ಭದ್ರ ಮತ್ತು ಕೃಷ್ಣ ಮೇಲ್ದಂಡೆ ಯೋಜನೆಗಳು ಜಿಲ್ಲೆಯಲ್ಲಿ ಸಾಕಾರಗೊಳ್ಳಲಿದೆ. ರಾಜಕಾರಣಕ್ಕೆ ದುರ್ಬಳಕೆಯಾಗಿದ್ದ ಹೇಮೆ ನೀರು ಸದ್ಬಳಕೆಯ ಬಗ್ಗೆ ಜನರಿಗೆ ತಿಳಿಸಿದ ಸಚಿವರ ಕಾನೂನು ಬದ್ಧ ಕೆಲಸ ಜನ ಮನ್ನಣೆ ಗಳಿಸಿದೆ ಎಂದರು.

    ತುರುವೇಕೆರೆ ಶಾಸಕ ಮಸಾಲಾ ಜಯರಾಮ್ ಮಾತನಾಡಿ, ರಾಜಕೀಯ ಪುನರ್ಜನ್ಮ ನೀಡುವ ಕೆಲಸ ನೀರು ಹರಿಸುವುದಾಗಿದೆ. ಈ ಕೆಲಸಕ್ಕೆ ಸಚಿವ.ಮಾಧುಸ್ವಾಮಿ ಅವರ ಆಶೀರ್ವಾದ ಕಾರಣ. ನೂರರಷ್ಟು ಕೆರೆಕಟ್ಟೆಗಳು ಹೇಮೆಯಿಂದ ತುಂಬಿದೆ. ಮುಂದಿನ ದಿನದಲ್ಲಿ ನೀರು ಸರಾಗವಾಗಿ ಹರಿಯಲು ನಾಲೆ ಅಗಲೀಕರಣ ಯೋಜನೆಗೆ 1050 ಕೋಟಿ ರೂ ಮಂಜೂರಿಗೆ ಸಮ್ಮತಿಸಿದ್ದಾರೆ. ಈ ಹಿಂದೆ ಮಂಜೂರು ಮಾಡಿದ್ದ 650 ಕೋಟಿ ಪೈಪ್ ಲೈನ್ ಯೋಜನೆ ಕೈಬಿಟ್ಟು ನಾಲೆ ಮೂಲಕವೇ ಎಲ್ಲರಿಗೂ ನೀರು ನೀಡುವ ಕೆಲಸ ಮಾಡಿದರು. ಮುಂದೆ 2500 ಕ್ಯೂಸೆಕ್ಸ್ ನೀರು ನಾಲೆಯಲ್ಲಿ ಹರಿದು ಜಿಲ್ಲೆಗೆ ಸಾಕಷ್ಟು ನೀರು ಬರಲಿದೆ ಎಂದರು.

    ಇದೇ ಸಂದರ್ಭದಲ್ಲಿ ಸಚಿವರಿಗೆ ಹಾಗೂ ಶಾಸಕರಿಗೆ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಬಿಎಂಪಿ ಸದಸ್ಯ ಸಿ.ಕೆ.ರಾಮಮೂರ್ತಿ, ಗ್ರಾ.ಪಂ. ಅಧ್ಯಕ್ಷ ಕೆಂಪರಾಜು, ಉಪಾಧ್ಯಕ್ಷೆ ಮಂಜುಳ ರಘು, ಮುಖಂಡರಾದ ಕೊಂಡಜ್ಜಿ ವಿಶ್ವನಾಥ್, ಸಿದ್ದರಾಮಯ್ಯ, ಭಾನುಪ್ರಕಾಶ್, ಮಹೇಶ್, ಶಿವಲಿಂಗೇಗೌಡ, ಹಿಂಡಿಸ್ಕೆರೆ ಗ್ರಾ.ಪಂ. ಅಧ್ಯಕ್ಷ ಪ್ರಕಾಶ್, ಸದಾಶಿವಕುಮಾರ್ ಇತರರು ಇದ್ದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026

    ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ

    May 1, 2026

    ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು

    April 27, 2026

    Leave A Reply Cancel Reply

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ಕೆಂಗೇರಿ: ಉಪನಗರದಲ್ಲಿರುವ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ಕಾಲೇಜಿನಲ್ಲಿ ಮಂಗಳವಾರದಂದು “ಸಶಕ್ತ ಭಾರತಕ್ಕಾಗಿ ಸಮಾನ ಅವಕಾಶಗಳು” ಎಂಬ ವಿಷಯದಡಿ…

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026

    ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.