nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!

    July 19, 2026

    ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026
    Facebook Twitter Instagram
    ಟ್ರೆಂಡಿಂಗ್
    • ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!
    • ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ
    • ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
    • ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ
    • ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್
    • ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ
    • ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ
    • ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾವು ಪ್ರಕೃತಿಯನ್ನು ರಕ್ಷಿಸಿದರೆ, ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ | ಸಚಿವ ಮಾಧುಸ್ವಾಮಿ
    ಗುಬ್ಬಿ December 11, 2021

    ನಾವು ಪ್ರಕೃತಿಯನ್ನು ರಕ್ಷಿಸಿದರೆ, ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ | ಸಚಿವ ಮಾಧುಸ್ವಾಮಿ

    By adminDecember 11, 2021No Comments2 Mins Read
    madhuswamy

    ಗುಬ್ಬಿ: ನೆಲ ಮತ್ತು ಜಲವನ್ನು ನಾವು ಸಂರಕ್ಷಣೆ ಮಾಡಿದರೆ,  ನಮ್ಮನ್ನು ಈ ಪ್ರಕೃತಿ ಸಂರಕ್ಷಣೆ ಮಾಡುತ್ತದೆ.  ನೀರನ್ನು ಮಿತವಾಗಿ ಬಳಸಿ ಅಂತರ್ಜಲವನ್ನು ಕಾಪಾಡುವ ಪ್ರಯತ್ನ ಮಾಡಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ.  ನೀರನ್ನು ಕೃತಕವಾಗಿ ತಯಾರಿಸಲು ಆಗುವುದಿಲ್ಲ ಎಂದು ಸಚಿವ ಮಾಧುಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.

    ತಾಲ್ಲೂಕಿನ ಸಿ.ಎಸ್.ಪುರ ಕೆರೆ ಹೇಮೆಯಿಂದ ತುಂಬಿ ಹರಿದ ಹಿನ್ನಲೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿ ನಂತರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿರಿಯ ಮುತ್ಸದ್ಧಿ ದೇವೇಗೌಡರ ನಿರೀಕ್ಷೆಯಂತೆ ನೀರು ಈ ಜಿಲ್ಲೆಗೆ ಸಿಗಲಿಲ್ಲ. ಇದಕ್ಕೆ ತಕ್ಕ ಉತ್ತರ ಜನರು ನೀಡಿದ್ದರು. ಆದರೆ ನೀರು ಹರಿಸುವ ಜವಾಬ್ದಾರಿ ನನ್ನ ಹೆಗಲಿಗೆ ಬಿತ್ತು. ಈ ನಿಟ್ಟಿನಲ್ಲಿ ಜವಾಬ್ದಾರಿ ಅರಿತು ಜಿಲ್ಲೆಗೆ ನೀರು ಹರಿಸುವ ಕೆಲಸ ನಿಯಾಮಾನುಸಾರ ನಡೆಸಿ ಮೂರು ಜಿಲ್ಲೆಗೆ ನ್ಯಾಯ ಒದಗಿಸಿದೆ. ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

    ಹಾಸನದಿಂದ ತುಮಕೂರಿನತ್ತ ಹೇಮೆ ಹರಿಯುವ ವೇಳೆ ಸಾಕಷ್ಟು ಭಾಗದಲ್ಲಿ ನೀರು ವ್ಯರ್ಥವಾಗುವುದು. ಈ ನಿಟ್ಟಿನಲ್ಲಿ ಪೋಲಾಗುವ 38 ಕಡೆ ಗೇಟ್ ನಿರ್ಮಿಸಿ ನೀರು ಉಳಿಸುವ ಕೆಲಸ ಮಾಡಲಾಗುವುದು. ಅಮೂಲ್ಯ ವಸ್ತುಗಳಲ್ಲಿ ನೀರು ಪ್ರಮುಖ ಎನಿಸಿದೆ. ಇದರ ಬಳಕೆಯನ್ನು ಅರಿತು ಮಾಡಬೇಕಿದೆ. ನದಿ ನೀರು ಹರಿಸಿಕೊಳ್ಳುವ ಭರದಲ್ಲಿ ಸಾಕಷ್ಟು ವ್ಯರ್ಥವಾಗುವ ಬಗ್ಗೆ ಗಂಭೀರ ಚಿಂತನೆ ಮಾಡಿ, ಅಧಿಕಾರಿಗಳಿಗೆ ಸೂಚನೆ ನೀಡಿ ನಾಲೆಯಿಂದ ಪೋಲಾಗುವುದನ್ನು ತಡೆ ಹಿಡಿಯಬೇಕಿದೆ ಎಂದರು.

    ನೆಲ ಮತ್ತು ಜಲ ಜನರಲ್ಲಿ ಬಾಂಧವ್ಯ ಬೆಸೆಯುತ್ತದೆ. ಹಳೇ ಮೈಸೂರು ಭಾಗದಲ್ಲಿ ನೀರಿನ ಮಹತ್ವ ಅರಿತು ಹೇಮೆ ಹರಿಸುವ ಯೋಜನೆ ಕಾರ್ಯರೂಪಕ್ಕೆ ಬಂತು. ತೀರ ಸಂಕಷ್ಟದಲ್ಲಿದ್ದ ತುಮಕೂರು ಜಿಲ್ಲೆಗೆ ಹೇಮಾವತಿ ಜೀವ ಜಲವಾಯಿತು. ಈ ನೀರು 7 ಲಕ್ಷ ಹೆಕ್ಟೇರ್ ಭೂಮಿ ಉಳಿಸುವ ಯೋಜನೆಯಾಗಿ ನಂತರದಲ್ಲಿ 5 ಲಕ್ಷಕ್ಕೆ ಸೀಮಿತವಾಯಿತು. ಈಗ 3.80 ಲಕ್ಷ ಹೆಕ್ಟೇರ್ ಗೆ ಮಾತ್ರ ಬಳಕೆಗೆ ಮುಡಿಪಾಗಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರಿಗೆ ನೀರು ಉಳಿಸಿ ಮಿಕ್ಕ ನೀರು ಕೃಷಿಗೆ ಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಜತೆಗೆ ದೀರ್ಘಾವಧಿ ಬೆಳೆಗೆ ಕಡಿವಾಣ ಹಾಕಿ ಎರಡರಿಂದ ಮೂರು ತಿಂಗಳ ಬೆಳೆ ಬೆಳೆದುಕೊಳ್ಳಲು ರೈತರಲ್ಲಿ ಮನವಿ ಮಾಡಿದರು.

    ಈ ಜತೆಗೆ ಬೋರ್ ವೆಲ್ ಗೆ ಸುರಿದ ಹಣ ಉಳಿಸಿಕೊಳ್ಳಲು ರೈತರಿಗೆ ನೀರು ಮತ್ತು ವಿದ್ಯುತ್ ನೀಡಿದರೆ ಸಾಕು. ತಮ್ಮ ಸ್ವಾಭಿಮಾನ ಬದುಕು ಕಟ್ಟಿ ಕೊಳ್ಳುತ್ತಾರೆ. ಈ ಕೆಲಸ ಮಾಡಿದ ಶಾಸಕ ಜಯರಾಮ್ ಅವರನ್ನು ಮತ್ತೊಮ್ಮೆ ಗೆಲ್ಲಿಸುವ ಮೂಲಕ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡಿಕೊಳ್ಳಲು ಕರೆ ನೀಡಿದರು.

    ಮಾಜಿ ಸಚಿವ ಎಸ್.ಶಿವಣ್ಣ ಮಾತನಾಡಿ, ಜಿಲ್ಲೆಗೆ ಭಗೀರಥ ರೀತಿ ಬಂದ ಮಾಧುಸ್ವಾಮಿ ಅವರು ಕೈಗೆತ್ತಿಕೊಂಡ ಯೋಜನೆಗಳು ಮುಂದಿನ ದಿನಗಳಲ್ಲಿ ಜಿಲ್ಲೆಗೆ ನೀರಿನ ಹಾಹಾಕಾರ ತಪ್ಪುತ್ತದೆ. ಭದ್ರ ಮತ್ತು ಕೃಷ್ಣ ಮೇಲ್ದಂಡೆ ಯೋಜನೆಗಳು ಜಿಲ್ಲೆಯಲ್ಲಿ ಸಾಕಾರಗೊಳ್ಳಲಿದೆ. ರಾಜಕಾರಣಕ್ಕೆ ದುರ್ಬಳಕೆಯಾಗಿದ್ದ ಹೇಮೆ ನೀರು ಸದ್ಬಳಕೆಯ ಬಗ್ಗೆ ಜನರಿಗೆ ತಿಳಿಸಿದ ಸಚಿವರ ಕಾನೂನು ಬದ್ಧ ಕೆಲಸ ಜನ ಮನ್ನಣೆ ಗಳಿಸಿದೆ ಎಂದರು.

    ತುರುವೇಕೆರೆ ಶಾಸಕ ಮಸಾಲಾ ಜಯರಾಮ್ ಮಾತನಾಡಿ, ರಾಜಕೀಯ ಪುನರ್ಜನ್ಮ ನೀಡುವ ಕೆಲಸ ನೀರು ಹರಿಸುವುದಾಗಿದೆ. ಈ ಕೆಲಸಕ್ಕೆ ಸಚಿವ.ಮಾಧುಸ್ವಾಮಿ ಅವರ ಆಶೀರ್ವಾದ ಕಾರಣ. ನೂರರಷ್ಟು ಕೆರೆಕಟ್ಟೆಗಳು ಹೇಮೆಯಿಂದ ತುಂಬಿದೆ. ಮುಂದಿನ ದಿನದಲ್ಲಿ ನೀರು ಸರಾಗವಾಗಿ ಹರಿಯಲು ನಾಲೆ ಅಗಲೀಕರಣ ಯೋಜನೆಗೆ 1050 ಕೋಟಿ ರೂ ಮಂಜೂರಿಗೆ ಸಮ್ಮತಿಸಿದ್ದಾರೆ. ಈ ಹಿಂದೆ ಮಂಜೂರು ಮಾಡಿದ್ದ 650 ಕೋಟಿ ಪೈಪ್ ಲೈನ್ ಯೋಜನೆ ಕೈಬಿಟ್ಟು ನಾಲೆ ಮೂಲಕವೇ ಎಲ್ಲರಿಗೂ ನೀರು ನೀಡುವ ಕೆಲಸ ಮಾಡಿದರು. ಮುಂದೆ 2500 ಕ್ಯೂಸೆಕ್ಸ್ ನೀರು ನಾಲೆಯಲ್ಲಿ ಹರಿದು ಜಿಲ್ಲೆಗೆ ಸಾಕಷ್ಟು ನೀರು ಬರಲಿದೆ ಎಂದರು.

    ಇದೇ ಸಂದರ್ಭದಲ್ಲಿ ಸಚಿವರಿಗೆ ಹಾಗೂ ಶಾಸಕರಿಗೆ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಬಿಎಂಪಿ ಸದಸ್ಯ ಸಿ.ಕೆ.ರಾಮಮೂರ್ತಿ, ಗ್ರಾ.ಪಂ. ಅಧ್ಯಕ್ಷ ಕೆಂಪರಾಜು, ಉಪಾಧ್ಯಕ್ಷೆ ಮಂಜುಳ ರಘು, ಮುಖಂಡರಾದ ಕೊಂಡಜ್ಜಿ ವಿಶ್ವನಾಥ್, ಸಿದ್ದರಾಮಯ್ಯ, ಭಾನುಪ್ರಕಾಶ್, ಮಹೇಶ್, ಶಿವಲಿಂಗೇಗೌಡ, ಹಿಂಡಿಸ್ಕೆರೆ ಗ್ರಾ.ಪಂ. ಅಧ್ಯಕ್ಷ ಪ್ರಕಾಶ್, ಸದಾಶಿವಕುಮಾರ್ ಇತರರು ಇದ್ದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700


    Provided by
    Provided by
    admin
    • Website

    Related Posts

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಕ್ಯಾನ್ಸರ್: ನ್ಯಾಯಾಧೀಶೆ ಅನುಪಮ ಡಿ. ಆತಂಕ

    July 7, 2026

    Leave A Reply Cancel Reply

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!

    July 19, 2026

    ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ಇಂದಿನ ದುಬಾರಿ ದಿನಗಳಲ್ಲಿ ಹೋಟೆಲ್‌ ನಲ್ಲಿ ಒಂದು ಹೊತ್ತು ಹೊಟ್ಟೆತುಂಬಾ ಊಟ ಮಾಡಬೇಕಾದರೆ ಜೇಬಿನಲ್ಲಿ ನೂರಾರು…

    ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ

    July 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.