nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ

    August 12, 2026

    ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!

    August 12, 2026

    ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ

    August 12, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ
    • ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
    • ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ
    • ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ
    • ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆ: ದರ್ಶನ್ ಬ್ಯಾರಕ್‌ ನಲ್ಲೂ ಸಿಸಿಬಿ ಶೋಧ!
    • ವಿಬಿ ಜಿ ರಾಮ್‌ ಜಿ ಹಣ ಬರುತ್ತಿಲ್ಲ,  ಕೆಲಸ ಕೊಟ್ಟು ಗುಳೆ ತಪ್ಪಿಸುವ ಸ್ಥಿತಿ ರಾಜ್ಯ ಸರ್ಕಾರಕ್ಕೆ ಬಂದಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
    • ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾವು ಪ್ರಕೃತಿಯನ್ನು ರಕ್ಷಿಸಿದರೆ, ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ | ಸಚಿವ ಮಾಧುಸ್ವಾಮಿ
    ಗುಬ್ಬಿ December 11, 2021

    ನಾವು ಪ್ರಕೃತಿಯನ್ನು ರಕ್ಷಿಸಿದರೆ, ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ | ಸಚಿವ ಮಾಧುಸ್ವಾಮಿ

    By adminDecember 11, 2021No Comments2 Mins Read
    madhuswamy

    ಗುಬ್ಬಿ: ನೆಲ ಮತ್ತು ಜಲವನ್ನು ನಾವು ಸಂರಕ್ಷಣೆ ಮಾಡಿದರೆ,  ನಮ್ಮನ್ನು ಈ ಪ್ರಕೃತಿ ಸಂರಕ್ಷಣೆ ಮಾಡುತ್ತದೆ.  ನೀರನ್ನು ಮಿತವಾಗಿ ಬಳಸಿ ಅಂತರ್ಜಲವನ್ನು ಕಾಪಾಡುವ ಪ್ರಯತ್ನ ಮಾಡಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ.  ನೀರನ್ನು ಕೃತಕವಾಗಿ ತಯಾರಿಸಲು ಆಗುವುದಿಲ್ಲ ಎಂದು ಸಚಿವ ಮಾಧುಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.

    ತಾಲ್ಲೂಕಿನ ಸಿ.ಎಸ್.ಪುರ ಕೆರೆ ಹೇಮೆಯಿಂದ ತುಂಬಿ ಹರಿದ ಹಿನ್ನಲೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿ ನಂತರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿರಿಯ ಮುತ್ಸದ್ಧಿ ದೇವೇಗೌಡರ ನಿರೀಕ್ಷೆಯಂತೆ ನೀರು ಈ ಜಿಲ್ಲೆಗೆ ಸಿಗಲಿಲ್ಲ. ಇದಕ್ಕೆ ತಕ್ಕ ಉತ್ತರ ಜನರು ನೀಡಿದ್ದರು. ಆದರೆ ನೀರು ಹರಿಸುವ ಜವಾಬ್ದಾರಿ ನನ್ನ ಹೆಗಲಿಗೆ ಬಿತ್ತು. ಈ ನಿಟ್ಟಿನಲ್ಲಿ ಜವಾಬ್ದಾರಿ ಅರಿತು ಜಿಲ್ಲೆಗೆ ನೀರು ಹರಿಸುವ ಕೆಲಸ ನಿಯಾಮಾನುಸಾರ ನಡೆಸಿ ಮೂರು ಜಿಲ್ಲೆಗೆ ನ್ಯಾಯ ಒದಗಿಸಿದೆ. ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

    ಹಾಸನದಿಂದ ತುಮಕೂರಿನತ್ತ ಹೇಮೆ ಹರಿಯುವ ವೇಳೆ ಸಾಕಷ್ಟು ಭಾಗದಲ್ಲಿ ನೀರು ವ್ಯರ್ಥವಾಗುವುದು. ಈ ನಿಟ್ಟಿನಲ್ಲಿ ಪೋಲಾಗುವ 38 ಕಡೆ ಗೇಟ್ ನಿರ್ಮಿಸಿ ನೀರು ಉಳಿಸುವ ಕೆಲಸ ಮಾಡಲಾಗುವುದು. ಅಮೂಲ್ಯ ವಸ್ತುಗಳಲ್ಲಿ ನೀರು ಪ್ರಮುಖ ಎನಿಸಿದೆ. ಇದರ ಬಳಕೆಯನ್ನು ಅರಿತು ಮಾಡಬೇಕಿದೆ. ನದಿ ನೀರು ಹರಿಸಿಕೊಳ್ಳುವ ಭರದಲ್ಲಿ ಸಾಕಷ್ಟು ವ್ಯರ್ಥವಾಗುವ ಬಗ್ಗೆ ಗಂಭೀರ ಚಿಂತನೆ ಮಾಡಿ, ಅಧಿಕಾರಿಗಳಿಗೆ ಸೂಚನೆ ನೀಡಿ ನಾಲೆಯಿಂದ ಪೋಲಾಗುವುದನ್ನು ತಡೆ ಹಿಡಿಯಬೇಕಿದೆ ಎಂದರು.

    ನೆಲ ಮತ್ತು ಜಲ ಜನರಲ್ಲಿ ಬಾಂಧವ್ಯ ಬೆಸೆಯುತ್ತದೆ. ಹಳೇ ಮೈಸೂರು ಭಾಗದಲ್ಲಿ ನೀರಿನ ಮಹತ್ವ ಅರಿತು ಹೇಮೆ ಹರಿಸುವ ಯೋಜನೆ ಕಾರ್ಯರೂಪಕ್ಕೆ ಬಂತು. ತೀರ ಸಂಕಷ್ಟದಲ್ಲಿದ್ದ ತುಮಕೂರು ಜಿಲ್ಲೆಗೆ ಹೇಮಾವತಿ ಜೀವ ಜಲವಾಯಿತು. ಈ ನೀರು 7 ಲಕ್ಷ ಹೆಕ್ಟೇರ್ ಭೂಮಿ ಉಳಿಸುವ ಯೋಜನೆಯಾಗಿ ನಂತರದಲ್ಲಿ 5 ಲಕ್ಷಕ್ಕೆ ಸೀಮಿತವಾಯಿತು. ಈಗ 3.80 ಲಕ್ಷ ಹೆಕ್ಟೇರ್ ಗೆ ಮಾತ್ರ ಬಳಕೆಗೆ ಮುಡಿಪಾಗಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರಿಗೆ ನೀರು ಉಳಿಸಿ ಮಿಕ್ಕ ನೀರು ಕೃಷಿಗೆ ಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಜತೆಗೆ ದೀರ್ಘಾವಧಿ ಬೆಳೆಗೆ ಕಡಿವಾಣ ಹಾಕಿ ಎರಡರಿಂದ ಮೂರು ತಿಂಗಳ ಬೆಳೆ ಬೆಳೆದುಕೊಳ್ಳಲು ರೈತರಲ್ಲಿ ಮನವಿ ಮಾಡಿದರು.

    ಈ ಜತೆಗೆ ಬೋರ್ ವೆಲ್ ಗೆ ಸುರಿದ ಹಣ ಉಳಿಸಿಕೊಳ್ಳಲು ರೈತರಿಗೆ ನೀರು ಮತ್ತು ವಿದ್ಯುತ್ ನೀಡಿದರೆ ಸಾಕು. ತಮ್ಮ ಸ್ವಾಭಿಮಾನ ಬದುಕು ಕಟ್ಟಿ ಕೊಳ್ಳುತ್ತಾರೆ. ಈ ಕೆಲಸ ಮಾಡಿದ ಶಾಸಕ ಜಯರಾಮ್ ಅವರನ್ನು ಮತ್ತೊಮ್ಮೆ ಗೆಲ್ಲಿಸುವ ಮೂಲಕ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡಿಕೊಳ್ಳಲು ಕರೆ ನೀಡಿದರು.

    ಮಾಜಿ ಸಚಿವ ಎಸ್.ಶಿವಣ್ಣ ಮಾತನಾಡಿ, ಜಿಲ್ಲೆಗೆ ಭಗೀರಥ ರೀತಿ ಬಂದ ಮಾಧುಸ್ವಾಮಿ ಅವರು ಕೈಗೆತ್ತಿಕೊಂಡ ಯೋಜನೆಗಳು ಮುಂದಿನ ದಿನಗಳಲ್ಲಿ ಜಿಲ್ಲೆಗೆ ನೀರಿನ ಹಾಹಾಕಾರ ತಪ್ಪುತ್ತದೆ. ಭದ್ರ ಮತ್ತು ಕೃಷ್ಣ ಮೇಲ್ದಂಡೆ ಯೋಜನೆಗಳು ಜಿಲ್ಲೆಯಲ್ಲಿ ಸಾಕಾರಗೊಳ್ಳಲಿದೆ. ರಾಜಕಾರಣಕ್ಕೆ ದುರ್ಬಳಕೆಯಾಗಿದ್ದ ಹೇಮೆ ನೀರು ಸದ್ಬಳಕೆಯ ಬಗ್ಗೆ ಜನರಿಗೆ ತಿಳಿಸಿದ ಸಚಿವರ ಕಾನೂನು ಬದ್ಧ ಕೆಲಸ ಜನ ಮನ್ನಣೆ ಗಳಿಸಿದೆ ಎಂದರು.

    ತುರುವೇಕೆರೆ ಶಾಸಕ ಮಸಾಲಾ ಜಯರಾಮ್ ಮಾತನಾಡಿ, ರಾಜಕೀಯ ಪುನರ್ಜನ್ಮ ನೀಡುವ ಕೆಲಸ ನೀರು ಹರಿಸುವುದಾಗಿದೆ. ಈ ಕೆಲಸಕ್ಕೆ ಸಚಿವ.ಮಾಧುಸ್ವಾಮಿ ಅವರ ಆಶೀರ್ವಾದ ಕಾರಣ. ನೂರರಷ್ಟು ಕೆರೆಕಟ್ಟೆಗಳು ಹೇಮೆಯಿಂದ ತುಂಬಿದೆ. ಮುಂದಿನ ದಿನದಲ್ಲಿ ನೀರು ಸರಾಗವಾಗಿ ಹರಿಯಲು ನಾಲೆ ಅಗಲೀಕರಣ ಯೋಜನೆಗೆ 1050 ಕೋಟಿ ರೂ ಮಂಜೂರಿಗೆ ಸಮ್ಮತಿಸಿದ್ದಾರೆ. ಈ ಹಿಂದೆ ಮಂಜೂರು ಮಾಡಿದ್ದ 650 ಕೋಟಿ ಪೈಪ್ ಲೈನ್ ಯೋಜನೆ ಕೈಬಿಟ್ಟು ನಾಲೆ ಮೂಲಕವೇ ಎಲ್ಲರಿಗೂ ನೀರು ನೀಡುವ ಕೆಲಸ ಮಾಡಿದರು. ಮುಂದೆ 2500 ಕ್ಯೂಸೆಕ್ಸ್ ನೀರು ನಾಲೆಯಲ್ಲಿ ಹರಿದು ಜಿಲ್ಲೆಗೆ ಸಾಕಷ್ಟು ನೀರು ಬರಲಿದೆ ಎಂದರು.

    ಇದೇ ಸಂದರ್ಭದಲ್ಲಿ ಸಚಿವರಿಗೆ ಹಾಗೂ ಶಾಸಕರಿಗೆ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಬಿಎಂಪಿ ಸದಸ್ಯ ಸಿ.ಕೆ.ರಾಮಮೂರ್ತಿ, ಗ್ರಾ.ಪಂ. ಅಧ್ಯಕ್ಷ ಕೆಂಪರಾಜು, ಉಪಾಧ್ಯಕ್ಷೆ ಮಂಜುಳ ರಘು, ಮುಖಂಡರಾದ ಕೊಂಡಜ್ಜಿ ವಿಶ್ವನಾಥ್, ಸಿದ್ದರಾಮಯ್ಯ, ಭಾನುಪ್ರಕಾಶ್, ಮಹೇಶ್, ಶಿವಲಿಂಗೇಗೌಡ, ಹಿಂಡಿಸ್ಕೆರೆ ಗ್ರಾ.ಪಂ. ಅಧ್ಯಕ್ಷ ಪ್ರಕಾಶ್, ಸದಾಶಿವಕುಮಾರ್ ಇತರರು ಇದ್ದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    Leave A Reply Cancel Reply

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ

    August 12, 2026

    ಸರಗೂರು: ಕ್ಷೇತ್ರದ ಕಾಡಂಚಿನ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಬಹುತೇಕ ಗ್ರಾಮಗಳಲ್ಲಿ ಸಿಸಿ ರಸ್ತೆ, ಚರಂಡಿ ಹಾಗೂ ಡಾಂಬರೀಕರಣ…

    ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!

    August 12, 2026

    ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ

    August 12, 2026

    ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ

    August 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.