ಮಧುಗಿರಿ: ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಮ್ಮಲಾಪುರ ಗ್ರಾಮದ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟರಮಣಪ್ಪನವರು ಗುರುವಾರ ನಿಧನ ಹೊಂದಿದರು.
ದೊಡ್ಡೇರಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯ 25/11/22ರ ನಿರ್ಣಾಯದಂತೆ ಗ್ರಾಮ ಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರು ನಿಧನ ಹೊಂದಿದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಂಚಾಯತ್ ಅಭಿವೃದ್ಧಿಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಮೃತ ಗ್ರಾಮ ಪಂಚಾಯತ್ ಮಾಜಿ ಸದಸ್ಯ ವೆಂಕಟರಮಣಪ್ಪ ರವರ ಮೃತ ದೇಹಕ್ಕೆ ಪುಷ್ಪಮಾಲಿಕೆ ಗೌರವ ಸಲ್ಲಿಸಲಾಯಿತು. ಬಳಿಕ ಮೃತರ ಕುಟುಂಬಕ್ಕೆ ಅಂತ್ಯಕ್ರಿಯೆ ಖರ್ಚಿಗೆ ಐದು ಸಾವಿರ ಸಹಾಯಧನ ವರ್ಗ 1 ಅನುಧಾನದಲ್ಲಿ ಚೆಕ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರು ನಾಗಮಣಿ ರಂಗಸ್ವಾಮಿ, ಉಪಾಧ್ಯಕ್ಷ ಹರೀಶ್, ಸದಸ್ಯರಾದ ವಿಜಯ್ ಪ್ರಕಾಶ್, ಶ್ರೀದೇವಮ್ಮ, ಶಾರದಮ್ಮ, ಮಂಜಮ್ಮ ಗಂಗಾಧರ್ ಕಾರ್ಯದರ್ಶಿ ದಿವಾಕರ್ ಬಿಲ್ ಕಲೆಕ್ಟರ್ ವಿಜಯ್ ಕುಮಾರ್, DEO ಕರಿಯಣ್ಣ ವಾಟರ್ ಮ್ಯಾನ್ ಪ್ರಭಾಕರ್, ಹಾಗೂ ಗ್ರಾಮಸ್ಥರು ಇದ್ದರು.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA