ತುಮಕೂರು: ಡಿ ಕೊರಟಗೆರೆಯ ಜಾತ್ರೆಯಲ್ಲಿ ಹಾಲಿ ಶಾಸಕರ ಬ್ಯಾನರ್ ಕಟ್ಟಿದ್ದಕ್ಕೆ ಮಾಜಿ ಶಾಸಕರ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿರುವ ಘಟನೆ ನಡೆದಿದೆ.
ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ಜೆಡಿಎಸ್ ಮುಖಂಡ ಪಾಲನೇತ್ರಯ್ಯ ಗಂಭೀರ ಆರೋಪ ಮಾಡಿದ್ದು, ಶಾಸಕ ಡಿ.ಸಿ.ಗೌರಿಶಂಕರ್ ಫ್ಲಕ್ಸ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.
ಡಿ.ಕೊರಟಗೆರೆ ಜಾತ್ರಾ ಮಹೋತ್ಸವಕ್ಕೆ ಹಾಲಿ ಶಾಸಕ ಗೌರಿಶಂಕರ್ ಫ್ಲಕ್ ಕಟ್ಟಲು ಪಕ್ಷದ ಬೆಂಬಲಿಗರು ಮುಂದಾಗಿದ್ದರು. ಈ ವೇಳೆ 20 ಜನರ ಗುಂಪು ಹಲ್ಲೆ ನಡೆಸಿದ್ದು, ಪರಿಣಾಮವಾಗಿ ಜೆಡಿಎಸ್ ಕಾರ್ಯಕರ್ತ ಸಿರಾಜ್ ಹಾಗೂ ಮತ್ತೊರ್ವನಿಗೆ ಗಂಭೀರ ಗಾಯವಾಗಿದೆ.
ಉಮೇಶ್ ಚಂದ್ರು ಮತ್ತು ಬೆಂಬಲಿಗರ ಮೇಲೆ ಈ ಆರೋಪ ಕೇಳಿ ಬಂದಿದ್ದು, ಸದ್ಯ ಹಲ್ಲೆಗೊಳಗಾದವರು ತುಮಕೂರಿನ ವಿನಾಯಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವರದಿ : ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz