ಮಧುಗಿರಿ: ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜಣ್ಣ ಅವರ 72ನೇ ಹುಟ್ಟು ಹಬ್ಬದ ಪ್ರಯುಕ್ತ ಕೆ.ಎನ್.ಆರ್. ಅಭಿಮಾನಿ ಬಳಗ ಹಾಗೂ ಆರ್.ಆರ್ ಅಭಿಮಾನಿ ಬಳಗದ ವತಿಯಿಂದ ಪಟ್ಟಣದ ಕೆ.ಎಸ್.ಆರ್.ಟಿ.ಸಿ. ಬಸ್ಟ್ಯಾಂಡ್ ಮುಂಭಾಗ ಟ್ಯಾಕ್ಸಿ ಚಾಲಕರಿಗೆ ಉಚಿತ ಸಮವಸ್ತ್ರ ನೀಡಲಾಯಿತು.
ರಾಜ್ಯ ಸಹಕಾರ ಮಹಾಮಂಡಲದ ಮಾಜಿ ಅಧ್ಯಕ್ಷ ಎನ್.ಗಂಗಣ್ಣ ಮಾತನಾಡಿ, ಕೆ.ಎನ್.ರಾಜಣ್ಣ ಅವರು ಶಾಸಕರಾಗಿದ್ದ ಅವಧಿಯಲ್ಲಿ ಮಧುಗಿರಿ ಕ್ಷೇತ್ರವು ಬಹಳಷ್ಟು ಅಭಿವೃದ್ಧಿಗೊಂಡಿತ್ತು. ತೀವ್ರ ಬರಗಾಲಕ್ಕೆ ತುತ್ತಾಗಿದ್ದ ಕ್ಷೇತ್ರದಲ್ಲಿ ಅವರು ಹಮ್ಮಿಕೊಂಡಿದ್ದ ಅನೇಕ ಜನಪರ ಕೆಲಸಗಳಿಂದ ಜನರ ಜೀವನಮಟ್ಟ ಸಾಕಷ್ಟು ಸುಧಾರಣೆಗೊಂಡಿತ್ತು. ಅಂತಹ ನಾಯಕನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ದೇವರು ಅವರಿಗೆ ಇನ್ನಷ್ಟು ಆರೋಗ್ಯ ಅಧಿಕಾರ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹೆಸರು ಬೇಳೆ ಪಾನಕ ಹಾಗೂ ಊಟದ ವ್ಯವಸ್ಥೆ ಏರ್ಪಡಿಸಲಾಗಿತ್ತು ಹಾಗೂ ಕಾರ್ಯಕ್ರಮದಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡರಾಜು, ಪುರಸಭಾ ಸದಸ್ಯರುಗಳಾದ ಎಂ.ಎಸ್.ಚಂದ್ರಶೇಖರ್, ಲಾಲಾಪೇಟೆ ಮಂಜುನಾಥ್, ಅಲೀಮ್, ಮಾಜಿ ಸದಸ್ಯರಾದ ಎಂ.ಜಿ.ರಾಮು ತಲ್ಲಿ ಮಂಜುನಾಥ್, ಮುಖಂಡರುಗಳಾದ ವಿ.ಆರ್.ಭಾಸ್ಕರ್ ಸುರೇಶ, ಆನಂದ್, ಶಿವಣ್ಣ, ಆನಂದ್, ಪ್ರಸಾದ್, ರಘು, ಬಾಬ ಫಕೃದ್ದಿನ್, ಬಾಳೆ ಮಂಜುನಾಥ್, ಲಿಂಗರಾಜು, ನಾಗರಾಜು, ರಾಜಣ್ಣ, ಗುಂಡಣ್ಣ ಹಾಗೂ ಮುಂತಾದವರು ಇದ್ದರು.
ಮಧುಗಿರಿ ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜಣ್ಣ ಅವರ 72ನೇ ಹುಟ್ಟು ಹಬ್ಬದ ಪ್ರಯುಕ್ತ ಕೆ.ಎನ್.ಆರ್ ಅಭಿಮಾನಿ ಬಳಗ ಹಾಗೂ ಆರ್.ಆರ್ ಅಭಿಮಾನಿ ಬಳಗದ ವತಿಯಿಂದ ಪಟ್ಟಣದ ಕೆಎಸ್ಆರ್ಟಿಸಿ ಬಸ್ಟ್ಯಾಂಡ್ ಮುಂಭಾಗ ಟ್ಯಾಕ್ಸಿ ಚಾಲಕರಿಗೆ ಉಚಿತ ಸಮವಸ್ತ್ರ ನೀಡಲಾಯಿತು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5