nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    May 20, 2026

    ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ

    May 20, 2026

    ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ

    May 20, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
    • ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
    • ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
    • ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
    • ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
    • ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
    • “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ
    • ಕುಣಿಗಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಉರುಳಿ ತಾಯಿ–ಮಗಳು ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
    ತುಮಕೂರು May 20, 2026

    ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ

    By adminMay 20, 2026No Comments2 Mins Read
    dr g parameshwar

    ತುಮಕೂರು: ರಾಜ್ಯದಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ತುಮಕೂರನ್ನು ಬೆಂಗಳೂರಿನ ಭಾಗವಾಗಿಸಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರು ಸರ್ಕಾರದ ಸಾಧನಾ ಸಮಾವೇಶದ ವೇದಿಕೆಯಲ್ಲಿ ಪ್ರಸ್ತಾಪಿಸಿ ಸಿಎಂ, ಡಿಸಿಎಂ ಅವರಲ್ಲಿ ಮನವಿ ಮಾಡಿದರು.

    ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಕರ್ನಾಟಕ ಸರ್ಕಾರದ 3ನೇ ವರ್ಷದ ಸಾಧನ ಸಮಾವೇಶದಲ್ಲಿ ಮಾತನಾಡಿದ ಅವರು, ತುಮಕೂರು ಬೆಂಗಳೂರಿಗೆ ಕೇವಲ 60 ಕಿ.ಮೀ ದೂರವಿದೆ. ರಾಜಧಾನಿ ಜನದಟ್ಟಣೆ ನಿಯಂತ್ರಣ, ತುಮಕೂರು ಅಭಿವೃದ್ಧಿ ದೃಷ್ಟಿಯಿಂದ ತುಮಕೂರನ್ನು ಬೆಂಗಳೂರಿಗೆ ಸೇರಿಸಿ ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು.


    Provided by
    Provided by

    ಸಮಾವೇಶದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಗೃಹಸಚಿವ ಪರಮೇಶ್ವರ್ ಅವರು ಸ್ಮರಣಿಕೆ ನೀಡಿ ಗೌರವಿಸಿದರು. ಸಚಿವ ಕೃಷ್ಣ ಬೈರೇಗೌಡ ಇದ್ದರು.

    ಬೆಂಗಳೂರು ಬಿಟ್ಟರೆ ಸನಿಹದ ತುಮಕೂರಿಗೆ ಒಂದು ದೊಡ್ಡ ಇತಿಹಾಸ. ಶಿಕ್ಷಣ ಕಾಶಿ, ಕಲ್ಪತರು ನಾಡು, ಧಾರ್ಮಿಕ, ಐತಿಹಾಸಿಕ, ದಕ್ಷಿಣದ ಕಾಶಿಯಂತೆ ಕಂಗೊಳಿಸುತ್ತಿದೆ. ಅನ್ನ, ಅಕ್ಷರ, ಆಶ್ರಯ ನೀಡಿದಂತಹ ಒಂದು ಪವಿತ್ರವಾದಂತಹ ಭೂಮಿ. ಸಹೋದ್ಯೋಗಿ ಪರಮೇಶ್ವರ್ ಅವರು, ರಾಮನಗರವನ್ನು ಬೆಂಗಳೂರು ದಕ್ಷಿಣವಾಗಿಸಿದಂತೆ ಬೆಂಗಳೂರಿನ ಉತ್ತರ ಭಾಗದಲ್ಲಿ ಇರುವ ತುಮಕೂರನ್ನು ಎರಡನೇ ಬೆಂಗಳೂರಾಗಿ ಪರಿವರ್ತನೆ ಮಾಡಬೇಕು ಎಂದಿದ್ದಾರೆ. ಅವರ ಮಾತಿಗೆ ನನ್ನ ಬೆಂಬಲವಿದೆ.

    — ಡಿ.ಕೆ.ಶಿವಕುಮಾರ್, ಡಿಸಿಎಂ.

    ವಿಪಕ್ಷಗಳಿಗೆ ಟೀಕೆಗಳಿಗೆ 1.52 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಸವಲತ್ತು, ಹಕ್ಕು ಪತ್ರ ವಿತರಿಸುತ್ತಿರುವ ಸರ್ಕಾರದ ಸಾಧನೆಯ ಈ ಸಮರ್ಪಣ ಸಮಾವೇಶವೇ ಉತ್ತರ ಎಂದು ಸಚಿವ ಪರಮೇಶ್ವರ್ ಅವರು 3 ಲಕ್ಷ ಕೋಟಿಯಿದ್ದ ರಾಜ್ಯದ ಬಜೆಟ್ ಅನ್ನು 4.30 ಲಕ್ಷ ಕೋಟಿಗೆ ಏರಿಕೆ ಮಾಡಿ ಪಂಚ ಗ್ಯಾರಂಟಿಗಳೊಂದಿಗೆ ಅಭಿವೃದ್ಧಿಗೂ ಹಣ ಮೀಸಲಿಟ್ಟಿದ್ದನ್ನು ವಿಪಕ್ಷದವರಿಗೆ ಸಹಿಸಲು ಆಗುತ್ತಿಲ್ಲ. ಬಡವರ ಕಲ್ಯಾಣಕ್ಕಾಗಿ 2 ಲಕ್ಷ ಕೋಟಿ ವೆಚ್ಚ ಮಾಡಿರುವುದನ್ನು ಸಹಿಸಲಾಗದೆ ವಿಪಕ್ಷ ಬಿಜೆಪಿ ಶಾಸಕರು ಲಘುವಾಗಿ ಮಾತನಾಡಿದ್ದಾರೆ. ಅಸಹಿಷ್ಣುತೆಗೆ ಅವರು ಉತ್ತರ ನೀಡಬೇಕು ಎಂದು ಆಗ್ರಹಿಸಿ ತುಮಕೂರು ಜಿಲ್ಲೆಯೊಂದರಲ್ಲೇ 22 ಸಾವಿರ ಕಂದಾಯ ಗ್ರಾಮಗಳ ಹಕ್ಕುಪತ್ರ ನೀಡಿರುವುದು ಗಿನ್ನಿಸ್ ದಾಖಲೆಯಾಗಿದೆ. 682 ಕೋಟಿ ವೆಚ್ಚದ ಕಾಮಗಾರಿಗೂ ಚಾಲನೆ ನೀಡಿದ್ದೇವೆ ಎಂದು ತಮ್ಮ ಸರ್ಕಾರದ ಸಾಧನೆಯನ್ನು ಪ್ರಶಂಸಿಸಿದ್ದಾರೆ.

    ಸಚಿವರ ಮನವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಹಮತ ವ್ಯಕ್ತಪಡಿಸಿ ಎರಡನೇ ಬೆಂಗಳೂರಾಗಿ ತುಮಕೂರು ಅಭಿವೃದ್ಧಿಗೆ ನನ್ನ ಸಹಮತ, ಬೆಂಬಲವಿದೆ ಎಂದರು. ಕಳೆದ ವರ್ಷವೂ ಪರಮೇಶ್ವರ್ ಅವರು ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಹೇಳಿದ್ದರು. ಇದಕ್ಕೆ ಸಾರ್ವಜನಿಕರು ಸಾಹಿತಿಗಳಿಂದ ವಿರೋಧ ವ್ಯಕ್ತವಾದ ಬಳಿಕ ಪ್ರಸ್ತಾಪವನ್ನು ಕೈಬಿಟ್ಟಿದ್ದರು. ಈಗ ಮತ್ತೆ ಪುನರುಚ್ಚರಿಸಿರುವ ಡಾ. ಜಿ. ಪರಮೇಶ್ವರ್ ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಮತ್ತು ಡಿಸಿಎಂ ಅವರಲ್ಲಿ ಮನವಿ ಮಾಡಿದ್ದು, ಚರ್ಚೆಗೆ ಆಸ್ಪದ ಒದಗಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    May 20, 2026

    ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ

    May 20, 2026

    ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ

    May 20, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    May 20, 2026

    ತುಮಕೂರು: ಸ್ಕೈ ಆರ್ಟ್ ಮೀಡಿಯಾ ಅರ್ಪಿಸುತ್ತಿರುವ ರಾಜಶೇಖರ್ ರಚಿಸಿ ನಿರ್ದೇಶಿಸುತ್ತಿರುವ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಮುಹೂರ್ತ ಸಮಾರಂಭ ತುಮಕೂರಿನ ಕೋಟೆ…

    ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ

    May 20, 2026

    ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ

    May 20, 2026

    ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ

    May 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.