ಪಾವಗಡ: ಪಾವಗಡ ಗಡಿ ಭಾಗವಾದ ವೆಂಕಟಮ್ಮನಹಳ್ಳಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಹೆಲ್ಪ್ ಸೊಸೈಟಿ ವತಿಯಿಂದ ಶಾಲಾ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.
ಮಕ್ಕಳಿಗೆ ಬ್ಯಾಗ್ ವಿತರಿಸಿ ಮಾತನಾಡಿದ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್, ಮಕ್ಕಳ ಭವಿಷ್ಯದ ಬುನಾದಿಯೇ ಅಂಗನವಾಡಿ, ಇಂತಹ ಕೇಂದ್ರದಲ್ಲಿ ಒಳ್ಳೆ ವಾತಾವರಣ ಮೂಲಕ ಮಕ್ಕಳು ಬೆಳೆದು ವಿದ್ಯಾವಂತರಾಗಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೆಲ್ಪ್ ಸೊಸೈಟಿ ತಂಡ ತಾಲ್ಲೂಕಿನ ಹಲವಾರು ಅಂಗನವಾಡಿಗಳ ಶಾಲಾ ಮಕ್ಕಳ ಬಗ್ಗೆ ಹೆಚ್ಚಿನ ಒಲವು ತೋರಿ ಬ್ಯಾಗ್, ಲೇಖನ ಸಾಮಗ್ರಿಗಳನ್ನು ಹಾಗೂ ಕೆಲ ಪರಿಕರಗಳನ್ನು ವಿತರಿಸುತ್ತಿದೆ ಎಂದರು
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ವೆಂಕಟಸುಬ್ಬಯ್ಯ, ತಿರುಮಣಿ ಸಮುದಾಯ ಆರೋಗ್ಯ ಕೇಂದ್ರದ ಅರೋಗ್ಯ ನಿರೀಕ್ಷಣ ಅಧಿಕಾರಿಗಳಾದ ರಮೇಶ್, ಅಂಗನವಾಡಿ ಶಿಕ್ಷಕಿ ಈಶ್ವರಮ್ಮ, ಗೋವಿಂದಮ್ಮ, ಸಹಾಯಕಿಯರಾದ ಲಕ್ಷ್ಮೀದೇವಿ, ಕೃಷ್ಣವೇಣಿ, ಹೆಲ್ಪ್ ಸೊಸೈಟಿ ಪದಾಧಿಕಾರಿಗಳಾದ ಲತೀಶ್ ನಾಯ್ಡು, ಅಧಿಕೇಶವ, ಸಾಗರ್ ಹಾಗೂ ಗ್ರಾಮದ ಮುಖಂಡರು, ಪೋಷಕರು ಇದ್ದರು.
ವರದಿ: ರಾಮಪ್ಪ ಸಿ.ಕೆ.ಪುರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB