ಮಕ್ಕಳಿಲ್ಲದ ಕೊರತೆ ನೀಗಿಸಲು ಹರಕೆ ಹೊತ್ತು ಬರುತ್ತಿದ್ದ ದಂಪತಿ ಅಪಘಾತದಲ್ಲಿ ಮೃತಪಟ್ಟ ಘಟನೆ ಗದಗ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದೆ.
ನರಗುಂದ ತಾಲ್ಲೂಕಿನ ಬೈರನಹಟ್ಟಿ ಬಳಿ ಸಂಭವಿಸಿದ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಹುಬ್ಬಳ್ಳಿ ಮೂಲದ ಸಹದೇವಪ್ಪ ಮತ್ತು ದೀಪಾ ದೇವರಮನೆ (36) ಮೃತಪಟ್ಟ ದುರ್ದೈವಿಗಳು.
15 ವರ್ಷಗಳಿಂದ ಮಕ್ಕಳಿಲ್ಲದ ಕಾರಣಕ್ಕೆ ದೇವರಿಗೆ ಹರಕೆ ಹೊತ್ತು ಬೈಕ್ ನಲ್ಲಿ ಬರುತ್ತಿದ್ದ ದಂಪತಿಗೆ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ಬೆಂಕಿ ಹೊತ್ತಿಕೊಂಡು ಎರಡೂ ವಾಹನಗಳು ಭಸ್ಮಗೊಂಡಿವೆ.
ಮಕ್ಕಳಿಗಾಗಿ ಹರಕೆ ಹೊರಲು ಸಹದೇವಪ್ಪ ಮತ್ತು ದೀಪಾ ಬೈಕ್ ನಲ್ಲಿ ಬಾದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮದ ದೇವರಿಗೆ ಪ್ರತಿ ಅಮವಾಸ್ಯೆಗೆ ಹೋಗುತ್ತಿದ್ದರು. ಬುಧವಾರ ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದ ಮಹಿಂದ್ರಾ TUV-300 ಕಾರು ಸರ್ವಿಸ್ಗಾಗಿ ಹುಬ್ಬಳ್ಳಿಗೆ ಹೊರಟಿತ್ತು. ಎರಡೂ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ.
ಕಾರಿನಲ್ಲಿದ್ದ ಇಬ್ಬರು ಸಹ ಗಾಯಗೊಂಡಿದ್ದು, ಅವರನ್ನ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗದಗ ಜಿಲ್ಲೆ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy