nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆಹಾನಿ ದುರಸ್ಥಿಗೆ ಶೀಘ್ರ  ನೆರವು ನೀಡಲಾಗುವುದು: ಸಚಿವ ಜೆ.ಸಿ.ಮಾಧುಸ್ವಾಮಿ ಭರವಸೆ
    ಮಧುಗಿರಿ September 4, 2022

    ಮಳೆಹಾನಿ ದುರಸ್ಥಿಗೆ ಶೀಘ್ರ  ನೆರವು ನೀಡಲಾಗುವುದು: ಸಚಿವ ಜೆ.ಸಿ.ಮಾಧುಸ್ವಾಮಿ ಭರವಸೆ

    By adminSeptember 4, 2022No Comments2 Mins Read
    maduswamy

    ಮಧುಗಿರಿ: ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಾನಿಗೀಡಾಗಿರುವ ಸೇತುವೆ ಹಾಗೂ ರಸ್ತೆಗಳ ದುರಸ್ಥಿಗೆ ಅಧಿಕಾರಿಗಳಿಂದ ವರದಿ ಪಡೆದುಕೊಂಡು ಶೀಘ್ರ ನೆರವು ನೀಡಲಾಗುವುದು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

    ತಾಲೂಕಿನ ಕಸಬಾ ಬೆಲ್ಲದಮಡುಗು ಕೆರೆ ಕೋಡಿ ಒಡೆದ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಪಟ್ಟಣದ ಚೊಳೇನಹಳ್ಳಿ ಕೆರೆ ಕೋಡಿ ದುರಸ್ಥಿ ಕಾರ್ಯ ಹಾಗೂ ಕಾಳೇನಹಳ್ಳಿಯ ಬೃಹತ್ ಸೇತುವೆಗೆ ಆದ ಹಾನಿಯನ್ನು  ಪರಿಶೀಲಿಸಿದ ಸಚಿವರು ಬಳಿಕ ಇಮ್ಮಡಗೊಂಡನಹಳ್ಳಿಯಲ್ಲಿ ಉಂಟಾದ ನೆರೆ ಹಾನಿಯನ್ನು ವೀಕ್ಷಿಸಿದರು.


    Provided by

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸಣ್ಣ ನೀರಾವರಿ ಇಲಾಖೆಯ ಎಲ್ಲ ಕೆರೆಗಳು ತುಂಬಿದ್ದು, ನದಿಗಳಿಂದ ಹೆಚ್ಚುವರಿ ನೀರು ಹರಿದ ಪರಿಣಾಮ, ಕೆಲವೆಡೆ ಸೇತುವೆ ಹಾಗೂ ರಸ್ತೆಗಳಿಗೆ ಹಾನಿಯಾಗಿದೆ. ಇದಕ್ಕಾಗಿ ಅಗತ್ಯ ನೆರವನ್ನು ಅಧಿಕಾರಿಗಳ ವರದಿ ಬಂದಾಕ್ಷಣ ಬಿಡುಗಡೆ ಮಾಡಲಾಗುವುದು ಎಂದರು.

    ಸಣ್ಣ ನೀರಾವರಿ ಇಲಾಖೆಯ ಕೆರೆಗಳೆಲ್ಲ ತುಂಬಿದ್ದು, ಬೆಲ್ಲದಮಡುಗು ಕೆರೆ ಹೊರತು ಪಡಿಸಿ ಉಳಿದವು ಸುಭದ್ರವಾಗಿವೆ. ಬೆಲ್ಲದಮಡುಗು ಕೆರೆ ಕೋಡಿ, ಚೊಳೇನಹಳ್ಳಿ ಕೆರೆ ಕೋಡಿಯ ದುರಸ್ಥಿಕಾರ್ಯವನ್ನು ಶೀಘ್ರವಾಗಿ ಕೈಗೊಂಡು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು. ಚನ್ನಸಾಗರ, ಇಮ್ಮಡಗೊಂಡನಹಳ್ಳಿ ಹಾಗೂ ಕಾಳೇನಹಳ್ಳಿ ಸೇತುವೆಗೆ ಭಾರಿ ಹಾನಿಯಾಗಿದ್ದು, ಈ ಭಾಗದ ಜನರ ಸಮಸ್ಯೆಗೆ ಶೀಘ್ರ ಮುಂದಾಗಬೇಕೆಂದು ಎಪಿಎಂಸಿ ಮಾಜಿ ಅಧ್ಯಕ್ಷ ಡಾ.ಎಂ.ಜಿ.ಶ್ರೀನಿವಾಸಮೂರ್ತಿ ಸಚಿವರನ್ನು ಒತ್ತಾಯಿಸಿದರು.

    ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿ, ಮಳೆಯಿಂದಾಗಿ ಹಲವು ಕಡೆ ಮನೆಗಳು, ಸೇತುವೆ ಹಾಗೂ ರಸ್ತೆಗಳಿಗೆ ಹಾನಿಯಾಗಿದೆ. ಈಗಾಗಲೇ ಜಿಲ್ಲಾಧಿಕಾರಿಗಳನ್ನು ಕರೆಸಿದ್ದು ಇಂದು ಸಚಿವರನ್ನು ಕರೆತಂದು ಎಲ್ಲ ಸಮಸ್ಯೆಗಳನ್ನು ಖುದ್ದು ತೋರಿಸಿದ್ದೇನೆ. ನಾನು ಹೇಳದೆ ಕೆಲಸ ಮಾಡುವವನು. ನನ್ನ ಜನರ ಕಷ್ಟಗಳಿಗೆ ಯಾವ ರೀತಿ ಪರಿಹಾರ ಕೊಡಿಸಬೇಕು ಎನ್ನುವುದು ತಿಳಿದಿದ್ದು, ಅದು ಶೀಘ್ರ ಕಾರ್ಯಗತವಾಗಲಿದೆ. ಪಟ್ಟಣದ ರಸ್ತೆಗಳಿಗೆ ನೂತನ ಸ್ಪರ್ಶ ನೀಡಲು ಮಳೆಯು ಅಡ್ಡಿಯಾಗಿದ್ದು ಮಳೆಗಾಲ ನಿಂತಾಕ್ಷಣ ಸುಂದರ ರಸ್ತೆ ನಿರ್ಮಿಸಲು ಮುಂದಾಗುತ್ತೇವೆ ಎಂದರು.

    ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ, ತಹಶೀಲ್ದಾರ್ ಸುರೇಶ್ ಆಚಾರ್, ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ಮೃತ್ಯಂಜಯ ಸ್ವಾಮಿ, ಸಿಇ ರಾಘವನ್, ಎಸ್ಇ ಸಂಜೀವರಾಜು, ಇಇ ರವಿ ಸೂರನ್, ಎಇಇ ರಂಗನಾಥ್, ಎಇಗಳಾದ ಮಂಜುಕಿರಣ್, ಜ್ಞಾನಮೂರ್ತಿ, ರಮೇಶ್ ಕುಮಾರ್, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಇದ್ದರು.

    ವರದಿ :ಅಬಿದ್ ಮಧುಗಿರಿ 


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಹಿಟ್ಲರ್ ರಾಜಕಾರಣ ಮಾಡಬೇಡಿ, ನಿಮ್ಮ ದರ್ಪಕ್ಕೆ, ಧಮ್ಕಿಗೆ ಯಾರು ಹೆದರುವುದಿಲ್ಲ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    June 19, 2025

    ಮಧುಗಿರಿ: ಪ್ರೋತ್ಸಾಹ ಧನ ಸೌಲಭ್ಯಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    June 7, 2025

    ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಡ್ಲಾಪುರ ಪಿಡಿಓ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

    May 14, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.