nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ

    June 21, 2026

    ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ

    June 21, 2026
    Facebook Twitter Instagram
    ಟ್ರೆಂಡಿಂಗ್
    • ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
    • ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
    • ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
    • ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
    • ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
    • ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
    • ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನಸ್ಸುಗಳನ್ನು ಬೆಸೆಯುವ ಸೌಹಾರ್ದದ ಕನಸುಗಾರ ಇಬ್ರಾಹಿಂ ಸುತಾರ | ಬಿ.ವಾಮದೇವಪ್ಪ ಕಂಬನಿ
    ಜಿಲ್ಲಾ ಸುದ್ದಿ February 12, 2022

    ಮನಸ್ಸುಗಳನ್ನು ಬೆಸೆಯುವ ಸೌಹಾರ್ದದ ಕನಸುಗಾರ ಇಬ್ರಾಹಿಂ ಸುತಾರ | ಬಿ.ವಾಮದೇವಪ್ಪ ಕಂಬನಿ

    By adminFebruary 12, 2022No Comments3 Mins Read
    kannada sahithya

    Provided by
    Provided by

    ದಾವಣಗೆರೆ: ಕನ್ನಡದ ಕಬೀರ್ ಎಂದೇ  ಹೆಸರಾಗಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರರು ಮನಸ್ಸುಗಳನ್ನು ಬೆಸೆಯುವ ಸೌಹಾರ್ದದ ಕನಸುಗಾರರಾಗಿದ್ದರು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಅವರು   ಕಂಬನಿ ಮಿಡಿದರು.

    ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕುವೆಂಪು ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಪದ್ಮಶ್ರೀ ಇಬ್ರಾಹಿಂ ಸುತಾರ ಹಾಗೂ ಭಾರತ ರತ್ನ ಲತಾ ಮಂಗೇಶ್ಕರ್ ಅವರ ನಿಧನದ ಗೌರವಾರ್ಥ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುತ್ತಿದ್ದ ಅವರು , ನೀ ಎಂತಾದರೂ ಇರು, ನೀ ಹೇಗಾದರೂ ಇರು. ಆದರೆ ನೀತಿವಂತನಾಗಿ ಬಾಳು. ನಿನ್ನ ಬದುಕಿನಲ್ಲಿ, ವ್ಯವಹಾರದಲ್ಲಿ ನೀತಿ ತಪ್ಪಿ ಬದುಕಬೇಡ ಎಂದು ತಮ್ಮ ಪ್ರವಚನದಲ್ಲಿ ಸದಾ ಹೇಳುತ್ತಿದ್ದರು  ಎಂದು ವಾಮದೇವಪ್ಪ ಅವರು ಇಬ್ರಾಹಿಂ ಸುತಾರ ಅವರ ವ್ಯಕ್ತಿತ್ವವನ್ನು ಶ್ಲಾಘಿಸಿದರು.

    ಹಿರಿಯ ಪತ್ರಕರ್ತ, ರಂಗಕರ್ಮಿ ಭಾ.ಮ.ಬಸವರಾಜಯ್ಯ ಮಾತನಾಡಿ   ಇಬ್ರಾಹಿಂ ಎನ್. ಸುತಾರ ಅವರು ದಿನಾಂಕ 10-05-1940 ರಲ್ಲಿ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಬಡಕುಟುಂಬದಲ್ಲಿ ಜನಿಸಿದರು. 1970 ರಲ್ಲಿ “ಭಾವೈಕ್ಯ ಜನಪದ ಸಂಗೀತ ಮೇಳ” ವನ್ನು ಸ್ಥಾಪಿಸಿ ಕಳೆದ ಐದು ದಶಕಗಳಿಂದ ನಿರಂತರವಾಗಿ ನಾಡಿನಾದ್ಯಂತ ಸಾಹಿತ್ಯವಾಚನ, ಪ್ರವಚನ, ಭಜನೆ ಮತ್ತು ಸಮಾಜಸೇವೆಯ ಮುಖಾಂತರ ಸರ್ವಮಹಾತ್ಮರ ಸಾಹಿತ್ಯವನ್ನು ಬಳಸಿ ಭಾವೈಕ್ಯತೆ ಸಂದೇಶವನ್ನು ಬೀರಿದ್ದರು. ಪ್ರತಿವರ್ಷ ನೂರಾರು ಕಾರ್ಯಕ್ರಮಗಳನ್ನು ನೀಡುತ್ತ, ಹಿಂದು-ಮುಸ್ಲಿಂ ರಲ್ಲಿ ಭಾವೈಕ್ಯತೆ ಬೆಸೆಯುವ ಪವಿತ್ರ ಕಾಯಕದಲ್ಲಿ ತೊಡಗಿದ್ದರು ಎಂದು ನುಡಿನಮನವನ್ನು ಸಲ್ಲಿಸಿದರು‌.

    ಜಿಲ್ಲಾ ಕಸಾಪ ಗೌರವ ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ಮಾತನಾಡಿ, ಇಬ್ರಾಹಿಂ ಸುತಾರ ಅವರು ತಮ್ಮ ಜೀವನದುದ್ದಕ್ಕೂ ಸಮಾಜದಲ್ಲಿ ಭಾವೈಕ್ಯತೆಯ ಸಂದೇಶವನ್ನು ಸಾರುತ್ತ ವಿಶ್ವ ಪ್ರೇಮವನ್ನು ಬೆಳೆಸುವುದನ್ನೇ ತಮ್ಮ ಏಕೈಕ ಗುರಿಯಾಗಿರಿಸಿಕೊಂಡಿದ್ದರು.  ನಾವು ನಂಬಿರುವ ಧರ್ಮವನ್ನು ಹಾಗೂ ಸಿದ್ಧಾಂತವನ್ನು ಸರಿಯಾಗಿ ಅರ್ಥೈಸಿಕೊಳ್ಳುವುದು ಮತ್ತು ಅನುಷ್ಠಾನಕ್ಕೆ ತರುವುದು ಹಾಗೆಯೇ ಅನ್ಯ ಧರ್ಮಗಳನ್ನು ಪ್ರಾಮಾಣಿಕವಾಗಿ ಗೌರವಿಸುವುದು ಮತ್ತು ಅವುಗಳನ್ನು ಅಧ್ಯಯನ ಮಾಡುವುದೇ ನಿಜವಾದ ಭಾವೈಕ್ಯತೆ ಎಂದವರು ಸದಾ ಹೇಳುತ್ತಿದ್ದರು ಎಂದು ಶ್ರದ್ಧಾಂಜಲಿ ಸಲ್ಲಿಸಿದರು.

    ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಜಿ.ಎಂ.ಆರ್.ಆರಾಧ್ಯ ಮಾತನಾಡಿ, ಇಡೀ ದೇಶವೇ ಇಂದು ಜಾತಿ, ಮತ, ಪಂಥ, ತತ್ವವನ್ನು ಮೀರಿ ಲತಾ ಅವರಿಗೆ ಗೌರವವನ್ನು ಸಲ್ಲಿಸುತ್ತಿದೆ ಎಂದರೆ,  ಅವರು ದೇಶಕ್ಕೆ ನೀಡಿರುವ ಕೊಡುಗೆ ಅರಿವಾಗುತ್ತದೆ. ಭಾರತ ಸರಕಾರವು ಸಂಗೀತ ಕ್ಷೇತ್ರಕ್ಕೆ ಇವರು ಸಲ್ಲಿಸಿದ ಅನುಪಮ ಸೇವೆಯನ್ನು ಗುರುತಿಸಿ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು ಎಂದು ಆರಾಧ್ಯ ಅವರು ತಿಳಿಸಿದರು‌.

     ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎ.ಆರ್.ಉಜ್ಜನಪ್ಪ ಮಾತನಾಡಿ,  ಲತಾ ಮಂಗೇಶ್ಕರ್ ಅವರು ಭಾರತೀಯ ಸಂಗೀತ ಲೋಕ ಕಂಡ ಅನುಪಮ ಗಾಯಕಿಯಾಗಿದ್ದರು.  ಭಾರತೀಯ  ಚಿತ್ರರಂಗದ ಶ್ರೇಷ್ಠ ಗಾಯಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಲತಾ ಮಂಗೇಶ್ಕರ್ ಅವರು ಹಲವಾರು ಭಾರತೀಯ ಭಾಷೆಗಳಲ್ಲಿ ಸುಮಾರು 30,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಭಾರತದ ನೈಟಿಂಗೇಲ್ ಎಂಬ ಅಭಿದಾನದೊಂದಿಗೆ ಏಳೂವರೆ ದಶಕಗಳ ಕಾಲ ಸಂಗೀತ ಲೋಕದ ಮಹಾರಾಣಿಯಾಗಿ ಮೆರೆದಾಡಿದರು.  ಅವರು ಸಂತೋಷದ ಹಾಡನ್ನು ಹಾಡಿದಾಗ ನಮ್ಮನ್ನು ನಗಿಸಿ, ದುಃಖದ ಗೀತೆಯನ್ನು ಹಾಡುವಾಗ ನಮ್ಮನ್ನು ಅಳುವಂತೆ ಮಾಡುತ್ತಿದ್ದ  ಅದ್ವಿತೀಯ ಪ್ರತಿಭಾನ್ವಿತ ಗಾಯಕಿಯಾಗಿದ್ದರು. ಲತಾ ಮಂಗೇಶ್ಕರ್ ಅವರ  ಚಿತ್ರರಂಗದಲ್ಲಿನ ಸೇವೆಗೆ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ನೀಡಲಾಗಿತ್ತು. ಇದಲ್ಲದೆ ಪದ್ಮಭೂಷಣ, ಪದ್ಮವಿಭೂಷಣ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಮೂರು ಬಾರಿ  ರಾಷ್ಟ್ರ ಪ್ರಶಸ್ತಿಯನ್ನೂ ಸಹ ಪಡದಿದ್ದರು‌. ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ, ಪದ್ಮ ಭೂಷಣ, ಪದ್ಮ ವಿಭೂಷಣ, ಭಾರತ ರತ್ನ ಪ್ರಶಸ್ತಿಗಳು ಲತಾ ಮಂಗೇಶ್ಕರ್ ಮುಡಿಗೇರಿದೆ. ಅವರು ಹಾಡಿದ ‘ಲಗ್ ಜಾ ಗಲೇ’, ‘ಯೇ ಗಲಿಯಾನ್ ಯೇ ಚೌಬಾರಾ’, ‘ಪ್ಯಾರ್ ಕಿಯಾ ತೊ ಡರ್ನಾ ಕ್ಯಾ’, ‘ಬಹೋನ್ ಮೇ ಚಲೇ ಆವೋ’, ‘ವೀರ್ ಜರಾ’ದ ‘ತೇರೆ ಲಿ’ ಮತ್ತು ಇನ್ನೂ ಅನೇಕ ಗೀತೆಗಳು ಈಗಲೂ ಸಂಗೀತ ಪ್ರಿಯರ ಹೃದಯದಲ್ಲಿ ಹಚ್ಚಹಸರಾಗಿವೆ ಎಂದರು.

    ಈ ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷೆ ಸುಮತಿ ಜಯಪ್ಪ, ಎಲ್.ನಾಗವೇಣಿ,  ಪ್ರೊ.ದಾದಾಪೀರ್ ನವಿಲೇಹಾಳ್, ಪ್ರೊ.ಜಿ.ಬಿ.ಚಂದ್ರಶೇಖರಪ್ಪ, ಎಸ್.ಎಮ್.ಮಲ್ಲಮ್ಮ, ದಾಗಿನಕಟ್ಟೆ ಪರಮೇಶ್ವರಪ್ಪ ಮತ್ತಿತರರು ತಮ್ಮ ನುಡಿ ನಮನವನ್ನು ಸಲ್ಲಿಸಿದರು.

    ಕಾರ್ಯಕ್ರಮದ ಆರಂಭದಲ್ಲಿ ಲತಾ ಮಂಗೇಶ್ಕರ್ ಅವರು “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ಕನ್ನಡ ಚಲನ ಚಿತ್ರದಲ್ಲಿ  ಹಾಡಿದ್ದ “ಬೆಳ್ಳನೆ ಬೆಳಗಾಯಿತು” ಹಾಡನ್ನು ಜಾನಪದ ಅಕಾಡೆಮಿ ಸದಸ್ಯೆ ರುದ್ರಾಕ್ಷಿ ಬಾಯಿ ಪುಟ್ಟ ನಾಯ್ಕ್  ಅವರು ಹಾಡುವ ಮೂಲಕ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ಕಾರ್ಯಕ್ರಮ ನಿರೂಪಿಸಿದರು ಮತ್ತು ಕಸಾಪ ಗೌರವ ಕಾರ್ಯದರ್ಶಿ ರೇವಣಸಿದ್ದಪ್ಪ ಅಂಗಡಿ ಧನ್ಯವಾದ ಸಮರ್ಪಣೆ ಮಾಡಿದರು.

    ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಲೆಮಾರಿ ದೊಂಬಿ ದಾಸರ ಯುವಸೇನೆ ರಾಜ್ಯ ಮಹಿಳಾಕಾರ್ಯಧ್ಯಕ್ಷರಾದ ಎಸ್ ಆರ್ ಇಂದಿರಾ ಗುರುಸ್ವಾಮಿ , ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎ.ಆರ್‌.ಉಜ್ಜನಪ್ಪ, ಗೌರವ ಕಾರ್ಯದರ್ಶಿಗಳಾದ ಬಿ.ದಿಳ್ಯೆಪ್ಪ,  ಕೆ.ವೀಣಾ,  ಎಲ್.ನಾಗವೇಣಿ,  ಪಾಲಾಕ್ಷಪ್ಪ ಗೋಪನಾಳ್, ಭೈರವೇಶ್ವರ,  ಕಿರ್ಲೋಸ್ಕರ್ ರಾಜಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.

    ವರದಿ:  ಮುರುಳಿಧರನ್ ಆರ್., ಹಿರಿಯೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026

    ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

    June 20, 2026

    ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ

    June 20, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ತುಮಕೂರು: ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯು ಶೇ. 100.63ರಷ್ಟು ಪ್ರಗತಿ ಸಾಧಿಸಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ…

    ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ

    June 21, 2026

    ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ

    June 21, 2026

    ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ

    June 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.