ತುಮಕೂರು: ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದ ವ್ಯಕ್ತಿಗೆ ಆರ್ ಟಿಒ ಅಧಿಕಾರಿಯೊಬ್ಬರು ನೆರವಾಗಿದ್ದು, ತಮ್ಮ ಜೀಪಿನಲ್ಲೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಆರ್ ಟಿ ಓ ಇನ್ಸ್ ಪೆಕ್ಟರ್ ಇದಾಯತ್ ಷರೀಫ್ ಮಾನವೀಯತೆ ಮೆರೆದ ಅಧಿಕಾರಿಯಾಗಿದ್ದಾರೆ. ತುಮಕೂರು ತಾಲೂಕಿನ ಬೆಳದರ ಬಳಿ ಅಪಘಾತವಾಗಿ ಬಿಹಾರ ಮೂಲದ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದರು. ಅವರ ಕಾಲಿಗೆ ತೀವ್ರವಾದ ಏಟು ತಗಲಿತ್ತು.
ಆಂಬುಲೆನ್ಸ್ ಬರುವುದು ತಡವಾದ ಹಿನ್ನೆಲೆಯಲ್ಲಿ ವ್ಯಕ್ತಿ ಸ್ಥಳದಲ್ಲಿ ನರಳುತ್ತಿದ್ದ. ಇದನ್ನು ಕಂಡ ಇದಾಯತ್ ಷರೀಫ್ ತಡಮಾಡದೇ ತಮ್ಮ ಜೀಪಿನಲ್ಲೇ ಗಾಯಾಳುವನ್ನು ಕೂರಿಸಿ ತುಮಕೂರು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದು, ಸಕಾಲಕ್ಕೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.
ಇನ್ನೂ ಇದಾಯತ್ ಷರೀಫ್ ಅವರ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಂಬುಲೆನ್ಸ್ ಗೆ ಕಾಯದೇ, ಯಾವುದೇ ಅಡೆತಡೆಗಳನ್ನು ಗಮನಿಸಿದೇ ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಅವರು ಸಾರ್ವಜನಿಕರಿಗೆ ಮಾದರಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂದ ಹಾಗೆ ಈ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವರದಿ: ಟೈಗರ್ ನಾಗ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5