nammatumakuru

    Subscribe to Updates

    Get the latest creative news from FooBar about art, design and business.

    What's Hot

    16ರಿಂದ 22ರವರೆಗೆ ಕರ್ನಾಟಕ ಕ್ರೀಡಾಕೂಟ: ತುಮಕೂರು ಜಿಲ್ಲೆಯ ಕ್ರೀಡಾಸಕ್ತರಿಗೆ, ನಾಗರಿಕರಿಗೆ ಹೆಮ್ಮೆಯ ವಿಷಯ: ಸಚಿವ ಡಾ.ಜಿ. ಪರಮೇಶ್ವರ್

    January 9, 2026

    ತುಮಕೂರು: ಬಾಲಕಿಗೆ ಲೈಂಗಿಕ ಕಿರುಕುಳ: ಅಪರಾಧಿಗೆ 5 ವರ್ಷ ಜೈಲು

    January 9, 2026

    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!

    January 8, 2026
    Facebook Twitter Instagram
    ಟ್ರೆಂಡಿಂಗ್
    • 16ರಿಂದ 22ರವರೆಗೆ ಕರ್ನಾಟಕ ಕ್ರೀಡಾಕೂಟ: ತುಮಕೂರು ಜಿಲ್ಲೆಯ ಕ್ರೀಡಾಸಕ್ತರಿಗೆ, ನಾಗರಿಕರಿಗೆ ಹೆಮ್ಮೆಯ ವಿಷಯ: ಸಚಿವ ಡಾ.ಜಿ. ಪರಮೇಶ್ವರ್
    • ತುಮಕೂರು: ಬಾಲಕಿಗೆ ಲೈಂಗಿಕ ಕಿರುಕುಳ: ಅಪರಾಧಿಗೆ 5 ವರ್ಷ ಜೈಲು
    • ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!
    • ಎಐ ಕ್ಷೇತ್ರದಲ್ಲಿ ತುಮಕೂರಿನ ಟಿ.ಎಸ್.ಪ್ರತೀಕ್ ಸಾಧನೆ: ಗಿನ್ನೆಸ್ ವರ್ಲ್ಡ್ ರೆಕಾರ್ಡ್
    • ಧರ್ಮಸ್ಥಳಕ್ಕೆ ಪಾದಯಾತ್ರೆ: ಮತ್ತಿಹಳ್ಳಿ ಗ್ರಾಮಸ್ಥರ ಭಕ್ತಿಗೆ ಯೋಜನಾಧಿಕಾರಿ ಉದಯ್ ಕೆ. ಮೆಚ್ಚುಗೆ
    • ದೇಹದಂತೆ ಪ್ರತಿನಿತ್ಯ ಬಾಯಿಯನ್ನು ಸ್ವಚ್ಛವಾಗಿಡಬೇಕು: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ
    • ಮುದ್ರಣ ಮಾಧ್ಯಮಗಳು ಇಂದಿಗೂ ಜನರ ವಿಶ್ವಾಸರ್ಹತೆ ಉಳಿಸಿಕೊಂಡಿವೆ: ಅಂಶಿ ಪ್ರಸನ್ನ ಕುಮಾರ್ ಅಭಿಮತ
    • ನೂತನ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶೇಷಚೇತನರಿಗಾಗಿ ಕಡ್ಡಾಯವಾಗಿ ಶೇ.5ರಷ್ಟು ಅನುದಾನ ಮೀಸಲಿಡಬೇಕು: ದಾಸ್ ಸೂರ್ಯವಂಶಿ
    ತುಮಕೂರು October 22, 2024

    ವಿಶೇಷಚೇತನರಿಗಾಗಿ ಕಡ್ಡಾಯವಾಗಿ ಶೇ.5ರಷ್ಟು ಅನುದಾನ ಮೀಸಲಿಡಬೇಕು: ದಾಸ್ ಸೂರ್ಯವಂಶಿ

    By adminOctober 22, 2024No Comments2 Mins Read
    das suryavamshi

    ತುಮಕೂರು: ಸರ್ಕಾರ ಜಾರಿಗೆ ತರುವ ವಿವಿಧ ಯೋಜನೆ ಮತ್ತು ಅನುದಾನಗಳಲ್ಲಿ ಕಡ್ಡಾಯವಾಗಿ ಎಲ್ಲಾ ಇಲಾಖೆಗಳು ವಿಶೇಷಚೇತನರಿಗಾಗಿ ಶೇ.5ರಷ್ಟು ಅನುದಾನವನ್ನು ಮೀಸಲಿಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮ ಆಯುಕ್ತ ದಾಸ್ ಸೂರ್ಯವಂಶಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲೆಯ ವಿಕಲಚೇತನರ ಪುನರ್ವಸತಿ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸರ್ಕಾರದ ಅನುದಾನದಲ್ಲಿ ಶೇ.5ರಷ್ಟು ವಿಶೇಷಚೇತನರಿಗಾಗಿ ಮೀಸಲಿಡಬೇಕೆಂದು ಸರ್ಕಾರದ ಆದೇಶವಿದ್ದರೂ ಸಹ ಕೆಲವು ಇಲಾಖೆಗಳಲ್ಲಿ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.


    Provided by
    Provided by

    ಜಿಲ್ಲೆಯಲ್ಲಿ 3,554 ವಿಶೇಷಚೇತನ ವಿದ್ಯಾರ್ಥಿಗಳು 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಎಲ್ಲಾ ಶಾಲೆಗಳಲ್ಲೂ ವಿಶೇಷಚೇತನ ಮಕ್ಕಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

    ಅಂಧ ಮತ್ತು ವಿಕಲಚೇತನ ಮಕ್ಕಳಿಗಾಗಿ ಎಲ್ಲಾ ಶಾಲೆಗಳಲ್ಲೂ ರ‍್ಯಾಂಪ್ ಹಾಗೂ ಅಡೆ–ತಡೆ ರಹಿತ ಶೌಚಾಲಯಗಳನ್ನು ನಿರ್ಮಿಸಬೇಕು. ವಿಶೇಷಚೇತನ ಮಕ್ಕಳ ತರಗತಿಗಳನ್ನು ಕೆಳಮಹಡಿಯ ಕೊಠಡಿಗಳಲ್ಲಿ ನಡೆಸಬೇಕು. ಜಿಲ್ಲೆಯಲ್ಲಿರುವ ಎಲ್ಲಾ ವಸತಿ ಶಾಲೆಗಳಲ್ಲಿ ಶೇ.10ರಷ್ಟು ವಿಕಲಚೇತನ ಮಕ್ಕಳಿಗೆ ಪ್ರವೇಶಾತಿ ನೀಡಬೇಕು ಎಂದು ನಿರ್ದೇಶನ ನೀಡಿದರು.

    ಗ್ರಾಮ ಪಂಚಾಯಿತಿಗಳಲ್ಲಿ ವಿಕಲಚೇತನರ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ವೈದ್ಯಕೀಯ ಹಾಗೂ ಪುನರ್ವಸತಿ ಸೌಲಭ್ಯಗಳಿಗೆ ಅನುದಾನ ಬಳಕೆಯಾಗುವಂತೆ ಕ್ರಿಯಾಯೋಜನೆ ತಯಾರಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಶೇಷಚೇತನರ ಸಂಜೀವಿನಿ ಸ್ವಸಹಾಯ ಸಂಘಗಳನ್ನು ಸ್ಥಾಪಿಸುವ ಮೂಲಕ ವಿಕಲಚೇತನರನ್ನು ಆರ್ಥಿಕವಾಗಿ ಸಬಲರನ್ನಾಗಿಸಬೇಕು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಜಿಲ್ಲಾ ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ. ದೊಡ್ಮನಿ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಕಲಚೇತನರ ಮೀಸಲಾತಿ ಪ್ರಮಾಣವನ್ನು ಶೇ.3 ರಿಂದ ಶೇ.5ಕ್ಕೆ ಏರಿಕೆ ಮಾಡಲಾಗಿದ್ದು, ಎಲ್ಲಾ ಇಲಾಖೆಗಳಲ್ಲೂ ಮುಂಬರುವ ಯೋಜನೆಗಳಲ್ಲಿ ಈ ಮೀಸಲಾತಿ ಪ್ರಮಾಣವನ್ನು ಅನುಷ್ಠಾನಗೊಳಿಸುವಂತೆ ಈಗಾಗಲೇ ಎಲ್ಲಾ ಇಲಾಖೆಗಳಿಗೂ ಸೂಚಿಸಲಾಗಿದೆ. ಅಧಿಕಾರಿಗಳು ವ್ಯಾಪಕವಾಗಿ ಈ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡು ವಿಕಲಚೇತನ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಮಾಡಬೇಕು ಎಂದು ತಿಳಿಸಲಾಗಿದೆ ಎಂದರಲ್ಲದೆ, ಜಿಲ್ಲಾಸ್ಪತ್ರೆಯಲ್ಲಿ ವಿಕಲಚೇತನರ ಚಿಕಿತ್ಸೆಗಾಗಿ ಪ್ರತ್ಯೇಕ ಚಿಕಿತ್ಸಾ ಕೊಠಡಿ ತೆರೆಯಲಾಗಿದೆ ಎಂದು ತಿಳಿಸಿದರು.

    ಜಿಲ್ಲೆಯ ವಿಕಲಚೇತನರಿಗೆ ಸರ್ಕಾರದ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಒದಗಿಸಲು 320 ಗ್ರಾಮೀಣ ಪುನರರ್ವಸತಿ ಕಾರ್ಯಕರ್ತರನ್ನು ನೇಮಿಸಲಾಗಿದೆ. ವಿಕಲಚೇತನ ಮತ್ತು ಅಶಕ್ತ ವೃದ್ಧರನ್ನು ಆರೈಕೆ ಮಾಡುವವರಿಗೆ ಪ್ರತಿ ತಿಂಗಳು 1000 ಪಿಂಚಣಿ ನೀಡುವ ವಿಶೇಷ ಯೋಜನೆಯನ್ನು ಜಾರಿಯಾಗಿದೆ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    16ರಿಂದ 22ರವರೆಗೆ ಕರ್ನಾಟಕ ಕ್ರೀಡಾಕೂಟ: ತುಮಕೂರು ಜಿಲ್ಲೆಯ ಕ್ರೀಡಾಸಕ್ತರಿಗೆ, ನಾಗರಿಕರಿಗೆ ಹೆಮ್ಮೆಯ ವಿಷಯ: ಸಚಿವ ಡಾ.ಜಿ. ಪರಮೇಶ್ವರ್

    January 9, 2026

    ತುಮಕೂರು: ಬಾಲಕಿಗೆ ಲೈಂಗಿಕ ಕಿರುಕುಳ: ಅಪರಾಧಿಗೆ 5 ವರ್ಷ ಜೈಲು

    January 9, 2026

    ಎಐ ಕ್ಷೇತ್ರದಲ್ಲಿ ತುಮಕೂರಿನ ಟಿ.ಎಸ್.ಪ್ರತೀಕ್ ಸಾಧನೆ: ಗಿನ್ನೆಸ್ ವರ್ಲ್ಡ್ ರೆಕಾರ್ಡ್

    January 8, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    16ರಿಂದ 22ರವರೆಗೆ ಕರ್ನಾಟಕ ಕ್ರೀಡಾಕೂಟ: ತುಮಕೂರು ಜಿಲ್ಲೆಯ ಕ್ರೀಡಾಸಕ್ತರಿಗೆ, ನಾಗರಿಕರಿಗೆ ಹೆಮ್ಮೆಯ ವಿಷಯ: ಸಚಿವ ಡಾ.ಜಿ. ಪರಮೇಶ್ವರ್

    January 9, 2026

    ತುಮಕೂರು: ತುಮಕೂರು ನಗರದಲ್ಲಿ 2026 ಜನವರಿ 16 ರಿಂದ 22ರವರೆಗೆ ಕರ್ನಾಟಕ ಕ್ರೀಡಾಕೂಟ 2025–26 ನಡೆಯಲಿದೆ. ತುಮಕೂರು ಜಿಲ್ಲಾಡಳಿತ, ಯುವ…

    ತುಮಕೂರು: ಬಾಲಕಿಗೆ ಲೈಂಗಿಕ ಕಿರುಕುಳ: ಅಪರಾಧಿಗೆ 5 ವರ್ಷ ಜೈಲು

    January 9, 2026

    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!

    January 8, 2026

    ಎಐ ಕ್ಷೇತ್ರದಲ್ಲಿ ತುಮಕೂರಿನ ಟಿ.ಎಸ್.ಪ್ರತೀಕ್ ಸಾಧನೆ: ಗಿನ್ನೆಸ್ ವರ್ಲ್ಡ್ ರೆಕಾರ್ಡ್

    January 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.