nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    June 20, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
    • ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    • ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ
    • ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ
    • ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್
    • ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ
    • ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶೇಷಚೇತನರಿಗಾಗಿ ಕಡ್ಡಾಯವಾಗಿ ಶೇ.5ರಷ್ಟು ಅನುದಾನ ಮೀಸಲಿಡಬೇಕು: ದಾಸ್ ಸೂರ್ಯವಂಶಿ
    ತುಮಕೂರು October 22, 2024

    ವಿಶೇಷಚೇತನರಿಗಾಗಿ ಕಡ್ಡಾಯವಾಗಿ ಶೇ.5ರಷ್ಟು ಅನುದಾನ ಮೀಸಲಿಡಬೇಕು: ದಾಸ್ ಸೂರ್ಯವಂಶಿ

    By adminOctober 22, 2024No Comments2 Mins Read
    das suryavamshi

    Provided by
    Provided by

    ತುಮಕೂರು: ಸರ್ಕಾರ ಜಾರಿಗೆ ತರುವ ವಿವಿಧ ಯೋಜನೆ ಮತ್ತು ಅನುದಾನಗಳಲ್ಲಿ ಕಡ್ಡಾಯವಾಗಿ ಎಲ್ಲಾ ಇಲಾಖೆಗಳು ವಿಶೇಷಚೇತನರಿಗಾಗಿ ಶೇ.5ರಷ್ಟು ಅನುದಾನವನ್ನು ಮೀಸಲಿಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮ ಆಯುಕ್ತ ದಾಸ್ ಸೂರ್ಯವಂಶಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲೆಯ ವಿಕಲಚೇತನರ ಪುನರ್ವಸತಿ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸರ್ಕಾರದ ಅನುದಾನದಲ್ಲಿ ಶೇ.5ರಷ್ಟು ವಿಶೇಷಚೇತನರಿಗಾಗಿ ಮೀಸಲಿಡಬೇಕೆಂದು ಸರ್ಕಾರದ ಆದೇಶವಿದ್ದರೂ ಸಹ ಕೆಲವು ಇಲಾಖೆಗಳಲ್ಲಿ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.

    ಜಿಲ್ಲೆಯಲ್ಲಿ 3,554 ವಿಶೇಷಚೇತನ ವಿದ್ಯಾರ್ಥಿಗಳು 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಎಲ್ಲಾ ಶಾಲೆಗಳಲ್ಲೂ ವಿಶೇಷಚೇತನ ಮಕ್ಕಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

    ಅಂಧ ಮತ್ತು ವಿಕಲಚೇತನ ಮಕ್ಕಳಿಗಾಗಿ ಎಲ್ಲಾ ಶಾಲೆಗಳಲ್ಲೂ ರ‍್ಯಾಂಪ್ ಹಾಗೂ ಅಡೆ–ತಡೆ ರಹಿತ ಶೌಚಾಲಯಗಳನ್ನು ನಿರ್ಮಿಸಬೇಕು. ವಿಶೇಷಚೇತನ ಮಕ್ಕಳ ತರಗತಿಗಳನ್ನು ಕೆಳಮಹಡಿಯ ಕೊಠಡಿಗಳಲ್ಲಿ ನಡೆಸಬೇಕು. ಜಿಲ್ಲೆಯಲ್ಲಿರುವ ಎಲ್ಲಾ ವಸತಿ ಶಾಲೆಗಳಲ್ಲಿ ಶೇ.10ರಷ್ಟು ವಿಕಲಚೇತನ ಮಕ್ಕಳಿಗೆ ಪ್ರವೇಶಾತಿ ನೀಡಬೇಕು ಎಂದು ನಿರ್ದೇಶನ ನೀಡಿದರು.

    ಗ್ರಾಮ ಪಂಚಾಯಿತಿಗಳಲ್ಲಿ ವಿಕಲಚೇತನರ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ವೈದ್ಯಕೀಯ ಹಾಗೂ ಪುನರ್ವಸತಿ ಸೌಲಭ್ಯಗಳಿಗೆ ಅನುದಾನ ಬಳಕೆಯಾಗುವಂತೆ ಕ್ರಿಯಾಯೋಜನೆ ತಯಾರಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಶೇಷಚೇತನರ ಸಂಜೀವಿನಿ ಸ್ವಸಹಾಯ ಸಂಘಗಳನ್ನು ಸ್ಥಾಪಿಸುವ ಮೂಲಕ ವಿಕಲಚೇತನರನ್ನು ಆರ್ಥಿಕವಾಗಿ ಸಬಲರನ್ನಾಗಿಸಬೇಕು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಜಿಲ್ಲಾ ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ. ದೊಡ್ಮನಿ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಕಲಚೇತನರ ಮೀಸಲಾತಿ ಪ್ರಮಾಣವನ್ನು ಶೇ.3 ರಿಂದ ಶೇ.5ಕ್ಕೆ ಏರಿಕೆ ಮಾಡಲಾಗಿದ್ದು, ಎಲ್ಲಾ ಇಲಾಖೆಗಳಲ್ಲೂ ಮುಂಬರುವ ಯೋಜನೆಗಳಲ್ಲಿ ಈ ಮೀಸಲಾತಿ ಪ್ರಮಾಣವನ್ನು ಅನುಷ್ಠಾನಗೊಳಿಸುವಂತೆ ಈಗಾಗಲೇ ಎಲ್ಲಾ ಇಲಾಖೆಗಳಿಗೂ ಸೂಚಿಸಲಾಗಿದೆ. ಅಧಿಕಾರಿಗಳು ವ್ಯಾಪಕವಾಗಿ ಈ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡು ವಿಕಲಚೇತನ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಮಾಡಬೇಕು ಎಂದು ತಿಳಿಸಲಾಗಿದೆ ಎಂದರಲ್ಲದೆ, ಜಿಲ್ಲಾಸ್ಪತ್ರೆಯಲ್ಲಿ ವಿಕಲಚೇತನರ ಚಿಕಿತ್ಸೆಗಾಗಿ ಪ್ರತ್ಯೇಕ ಚಿಕಿತ್ಸಾ ಕೊಠಡಿ ತೆರೆಯಲಾಗಿದೆ ಎಂದು ತಿಳಿಸಿದರು.

    ಜಿಲ್ಲೆಯ ವಿಕಲಚೇತನರಿಗೆ ಸರ್ಕಾರದ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಒದಗಿಸಲು 320 ಗ್ರಾಮೀಣ ಪುನರರ್ವಸತಿ ಕಾರ್ಯಕರ್ತರನ್ನು ನೇಮಿಸಲಾಗಿದೆ. ವಿಕಲಚೇತನ ಮತ್ತು ಅಶಕ್ತ ವೃದ್ಧರನ್ನು ಆರೈಕೆ ಮಾಡುವವರಿಗೆ ಪ್ರತಿ ತಿಂಗಳು 1000 ಪಿಂಚಣಿ ನೀಡುವ ವಿಶೇಷ ಯೋಜನೆಯನ್ನು ಜಾರಿಯಾಗಿದೆ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ

    June 20, 2026

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    ತುಮಕೂರು: ಮಕ್ಕಳ ಸರ್ವಾಂಗೀಣ ಪ್ರಗತಿಗಾಗಿ ನಗರದಲ್ಲಿರುವ ಬಾಲ ಭವನವನ್ನು ಅತ್ಯಾಧುನಿಕವಾಗಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್,…

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    June 20, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ

    June 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.