ತುಮಕೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದ ಕ್ಯಾತ್ಸಂದ್ರ 34 ನೇ ವಾರ್ಡ್ ನ SLN ಬಡಾವಣೆಯಲ್ಲಿ ಮನೆಯೊಂದು ಕುಸಿದು ಬಿದ್ದಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಈ ಮನೆಯಲ್ಲಿ ವಾಸಿಸುತ್ತಿದ್ದವರು ಬೀದಿ ಪಾಲಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಭೂಮಿ ವಸತಿ ಹೋರಾಟ ಸಮಿತಿಯ ಹೋರಾಟದಿಂದಾಗಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಮನೆ ಬಿದ್ದ ಬಳಿಕ ಕುಟುಂಬದ 8—10 ಸದಸ್ಯರು ಸಂಕಷ್ಟದಲ್ಲಿದ್ದರು. ಇವರಿಗೆ ಸರಿಯಾದ ನಿದ್ದೆ ಹಾಗೂ ಸರಿಯಾದ ಆಹಾರ ವ್ಯವಸ್ಥೆ ಇಲ್ಲದೆ ಕಂಗಾಲಾಗಿದ್ದರು ಎನ್ನಲಾಗಿದೆ. ಈ ವಿಚಾರವನ್ನು ಪಾಲಿಕೆ ಆಯುಕ್ತರಿಗೆ ತಿಳಿಸಿದಾಗ ಅವರು ಪರಿಶೀಲನೆ ನಡೆಸಲು ಅಧಿಕಾರಿಗಳನ್ನು ಕಳುಹಿಸಿದ್ದರು. ಸ್ಥಳಕ್ಕೆ ಬಂದ ಅಧಿಕಾರಿಗಳು ಬಡಾವಣೆಯಲ್ಲಿರುವ ಸಮುದಾಯ ಭವನವನ್ನು ಸ್ವಚ್ಛ ಮಾಡಿಸಿ ತಾತ್ಕಾಲಿಕ ಪುನರ್ವಸತಿ ಕಲ್ಪಿಸಿ ಕೊಡುತ್ತೇವೆಂದು ಕೇವಲ ಭರವಸೆ ನೀಡಿ ವಾಪಸ್ ಹೋಗಿದ್ದರೆನ್ನಲಾಗಿದೆ. ಆದರೆ ಕುಟುಂಬಕ್ಕೆ ಯಾವುದೇ ವ್ಯವಸ್ಥೆಗಳನ್ನು ಮಾಡಿಸಿಕೊಡಲಾಗಿಲ್ಲ ಎಂದು ಭೂಮಿ ವಸತಿ ಹೋರಾಟ ಸಮಿತಿಯು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗಿತ್ತು.
ಇದೀಗ ಸಂತ್ರಸ್ತ ಕುಟುಂಬಕ್ಕೆ ಪುನರ್ವಸತಿ ಕಲ್ಪಿಸಲು ಪಾಲಿಕೆಯು ಪೌರ ಕಾರ್ಮಿಕರ ಮೂಲಕ ಇಲ್ಲಿನ ಅಂಬೇಡ್ಕರ್ ಭವನ ಸ್ವಚ್ಛಗೊಳಿಸಿದೆ. ತಡವಾದರೂ ಸಂತ್ರಸ್ತ ಕುಟುಂಬಕ್ಕೆ ಪುನರ್ವಸತಿ ಸೌಲಭ್ಯ ಒದಗಿಸಿದಕ್ಕೆ ಆಡಳಿತ ವರ್ಗಕ್ಕೆ ಮತ್ತು ಅಲ್ಲಿನ 33,34 ನೇ ವಾರ್ಡ್ ನ ಕಾರ್ಪೊರೇಟರ್ ಗಳಿಗೆ ಹಾಗೂ ಸ್ವಚ್ಛತೆ ನಡೆಸಿದ ಪೌರಕಾರ್ಮಿಕರಿಗೆ ಸಹಕರಿಸಿದ ಎಲ್ಲರಿಗೂ ಕುಟುಂಬದ ಪರವಾಗಿ ಧನ್ಯವಾದಗಳು ಒಳ್ಳೆಯದನ್ನೇ ಮಾಡೋಣ ಮಾಡುತ್ತಲೇ ಇರೋಣ ಹಂದ್ರಾಳ್ ನಾಗಭೂಷಣ್ ಸ್ವಾಗತಿಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700