nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025
    Facebook Twitter Instagram
    ಟ್ರೆಂಡಿಂಗ್
    • ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ
    • ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ
    • ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು
    • ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನೆ, ನಿವೇಶನ, ಜಮೀನು ಕಳೆದುಕೊಂಡವರಿಗೆ ಪರಿಹಾರ ನೀಡಲು ಕೆ.ಟಿ. ಶಾಂತಕುಮಾರ್ ಒತ್ತಾಯ
    ತಿಪಟೂರು March 9, 2022

    ಮನೆ, ನಿವೇಶನ, ಜಮೀನು ಕಳೆದುಕೊಂಡವರಿಗೆ ಪರಿಹಾರ ನೀಡಲು ಕೆ.ಟಿ. ಶಾಂತಕುಮಾರ್ ಒತ್ತಾಯ

    By adminMarch 9, 2022No Comments2 Mins Read
    kt shantharam

    ತಿಪಟೂರು: ತುಮಕೂರಿನಿಂದ ಶಿವಮೊಗ್ಗದವರೆಗೆ ರಾಷ್ಟ್ರೀಯ ಹೆದ್ದಾರಿ ಯೋಜನೆ ಪ್ರಾರಂಭಗೊಂಡಿದೆ ಆದರೆ ರಾಷ್ಟ್ರೀಯ ಹೆದ್ದಾರಿ ಯೋಜನೆಯಾಗಿ ಮನೆ ನಿವೇಶನ ಹಾಗೂ ಜಮೀನು ಕಳೆದುಕೊಂಡ ತಾಲೂಕಿನ ತಿಪ್ಪನಹಳ್ಳಿ ಗ್ರಾಮಸ್ಥರಿಗೆ ಇನ್ನೂ ಕೂಡ ಸೂಕ್ತ ಪರಿಹಾರ ನೀಡಿಲ್ಲ ಪರಿಹಾರ ನೀಡುವವರೆಗೂ ಶಾಂತಿಯುತವಾಗಿ ನಿರಂತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಕೆ.ಟಿ. ಶಾಂತಕುಮಾರ್ ತಿಳಿಸಿದರು.

    ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್ ನಲ್ಲಿ ಪ್ರತಿಭಟನೆ ಕೈಗೊಂಡ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು,  ಕಿಬ್ಬನಹಳ್ಳಿ ಕ್ರಾಸ್ ನಲ್ಲಿ 125ಕ್ಕೂ ಹೆಚ್ಚು ನಿವೇಶನದ ಮನೆಯನ್ನು ರಾಷ್ಟ್ರೀಯ ಹೆದ್ದಾರಿ ಗಾಗಿ ಸಂತ್ರಸ್ತರು ಕಳೆದುಕೊಂಡಿದ್ದಾರೆ.  ಆದರೆ ಕಳೆದ ಆರು ವರ್ಷಗಳಿಂದ ಹೆದ್ದಾರಿ ಪ್ರಾಧಿಕಾರದವರು ನೋಟಿಸ್ ನೀಡಿದ್ದು ಬಿಟ್ಟರೆ, ಒಂದು ನಯಾ ಪೈಸೆ ಕೂಡ ಪರಿಹಾರದ ಹಣವನ್ನು ಇದುವರೆಗೂ ನೀಡಿರುವುದಿಲ್ಲ. ಭೂ ಕಾಯ್ದೆ ಪ್ರಕಾರ ಭೂಮಿ ಕಳೆದುಕೊಂಡವರಿಗೆ ಒಂದು ವರ್ಷದ ಒಳಗೆ ಪರಿಹಾರ ನೀಡಬೇಕು. ಆದರೆ ಭೂಮಿ ಕಳೆದುಕೊಂಡು ಆರು ವರ್ಷ ಕಳೆದರೂ ಕೂಡ ಜಿಲ್ಲಾಡಳಿತ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ನಿವೇಶನ ಮನೆ ಜಮೀನು ಕಳೆದುಕೊಂಡವರು ಸರ್ಕಾರಿ ಕಚೇರಿಗೆ ಪರಿಹಾರಕ್ಕಾಗಿ ಸಾಕಷ್ಟು ಬಾರಿ ಅಲೆದಾಡಿದ್ದಾರೆ . ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ತಾಲೂಕಿನ ಈ ಭಾಗದ ಭೂಮಿ ಕಳೆದುಕೊಂಡವರಿಗೆ ಕೂಡಲೇ ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದರು.


    Provided by

    ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಷಡಕ್ಷರಿ ಮಾತನಾಡಿ, ಯಾವುದೇ ಸರ್ಕಾರಗಳಾಗಲಿ ಯೋಜನೆ ಮಾಡುವಾಗ ರೈತರ ಜಮೀನು ಪಡೆಯಬಾರದು ಎಂಬ ನಿಯಮ ಇದೆ. ನಗುಮುಖದಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮನೆ-ನಿವೇಶನ ಜಮೀನನ್ನು ಬಿಟ್ಟುಕೊಟ್ಟಿದ್ದೇವೆ. ನಮಗೆ ಭೂಸ್ವಾಧೀನಕ್ಕಾಗಿ ನೋಟಿಸ್ ನೀಡಿ ಆರು ವರ್ಷ ಕಳೆದಿದೆ. ಭೂಮಿ ಮತ್ತು ಮನೆಗಳನ್ನು ಕಳೆದುಕೊಂಡವರಿಗೆ ಪರಿಹಾರ ಮಾತ್ರ ದೊರಕಿಲ್ಲ ಸರ್ಕಾರ ಈ ಕೂಡಲೇ ಸ್ಪಂದಿಸಬೇಕು ಅಧಿಕಾರಿಗಳು ಸರಿಯಾದ ಉತ್ತರ ನೀಡಬೇಕು ಎಂದು ಪ್ರತಿಭಟನೆಯಲ್ಲಿ ತಿಳಿಸಿದರು.

    ರೈತರಾದ ಹೊನ್ನಪ್ಪ ಮಾತನಾಡಿ,  6 .ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳ ಅವರ ಮಾತುಗಳನ್ನು ಕೇಳಿ ಸಾಕಾಗಿದೆ ತುಮಕೂರಿನಿಂದ ಶಿವಮೊಗ್ಗಕ್ಕೆ ತಲುಪುವ 148 ಹಳ್ಳಿಗಳಿದ್ದು 148 ಹಳ್ಳಿಗಳಿಗೂ ಪರಿಹಾರ ಒದಗಿಸಲು ಸಾಧ್ಯವಾಗುತ್ತದೆ ಆದರೆ ತಿಪಟೂರು ತಾಲೂಕಿನ   ಕೆ.ಬಿ.ಕ್ರಾಸ್ ಗೆ ಪರಿಹಾರವನ್ನು ಒದಗಿಸಲು ಸಾಧ್ಯವಾಗುತ್ತಿಲ್ಲವೇ ಈ ವಿಚಾರವಾಗಿ  ಕೇಳಲು ಹೋದರೆ ನಮಗೆ ಬೇಜವಾಬ್ದಾರಿ ರೀತಿಯಲ್ಲಿ ಉತ್ತರವನ್ನು ಕೊಡುತ್ತಾರೆ. ಸರ್ಕಾರವು ಯಾವ ರೀತಿಯಲ್ಲಿ ಪರಿಹಾರವನ್ನು ನಿಗದಿಪಡಿಸುತ್ತದೆ. ಅಷ್ಟು ಪರಿಹಾರವನ್ನು ನಮಗೆ ನೀಡಬೇಕು ಅಥವಾ ಇಂದಿನ ಬೆಲೆಯು ಏನಿದೆ ಅದನ್ನು ಪರಿಹಾರವನ್ನಾಗಿ ನೀಡಲಿ ಒಂದು ವೇಳೆ ಯಾವುದೇ ರೀತಿಯ ಪರಿಹಾರವನ್ನು ನೀಡದೆ ಹೋದಲ್ಲಿ ಜಿಲ್ಲಾಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

    ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡರಾದ ಜಕ್ಕನಹಳ್ಳಿ ಲಿಂಗರಾಜು, ಲಕ್ಷ್ಮೀಶ,  ಸಂಗಮೇಶ್, ದೇವರಾಜ್, ಶಿವಶಂಕರಯ್ಯ ಮತ್ತಿತರರು ಭಾಗಿಯಾಗಿದ್ದರು.

    ವರದಿ: ಮಂಜು ಗುರುಗದಹಳ್ಳಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಹಾಲ್ಕುರಿಕೆಯಲ್ಲಿ ಮಿತಿಮೀರಿದ ಅಕ್ರಮ ಮದ್ಯಮಾರಾಟ: ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ

    May 29, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಮಾವಿನಕೆರೆ ಹುಚ್ಚಮ್ಮದೇವಿ ದೇವಸ್ಥಾನಕ್ಕೆ 50 ಸಾವಿರ ಡಿಡಿ ವಿತರಣೆ

    May 28, 2025

    KSRTC ಬಸ್ ಗೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

    May 28, 2025
    Our Picks

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಬೆಂಗಳೂರು: ಮಂಡ್ಯದಲ್ಲಿ  ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ…

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025

    ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.