ಕಂದಾಯ ಇಲಾಖೆ ಅಧಿಕಾರಿಗಳು ಬಡ ಕುಟುಂಬಗಳ ಸಮಸ್ಯೆಯನ್ನು ಗಾಳಿಗೆ ತೂರುತ್ತಿದ್ದಾರಾ? ಎಂಬ ಪ್ರಶ್ನೆ ಕೇಳಿ ಬಂದಿದ್ದು, ತುರುವೇಕೆರೆ ತಾಲೂಕಿನ ದಂಡಿನ ಶಿವರ ಹೋಬಳಿಯ ಅಕ್ಕಾಳಸಂದ್ರ ಗ್ರಾಮದ ನಿವಾಸಿ, ಶಬಾನ ಬಾನು ಎಂಬವರ ಮನೆಗೆ ಸುಮಾರು ವರ್ಷದಿಂದ ಹಾದು ಹೋಗಲು ದಾರಿ ಇದ್ದು, ಕೆಲದಿನಗಳ ಹಿಂದೆ ಬಲಾಢ್ಯ ಹಣವಂತರು ಈ ಕುಟುಂಬ ಓಡಾಡುವ ದಾರಿಗೆ ಅಡ್ಡಲಾಗಿ ಬೇಲಿಯನ್ನು ಹಾಕಿದ್ದಾರೆ.
ಇದರ ವಿಷಯವಾಗಿ ಶಬಾನ ಬಾನು ಅವರ ಕುಟುಂಬ ಪೊಲೀಸ್ ಠಾಣೆಗೆ ದೂರು ಕೂಡ ಸಲ್ಲಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ . ಹೀಗಾಗಿ ಈ ಕುಟುಂಬ ಇದಕ್ಕೆ ಸಂಬಂಧಪಟ್ಟ ಕಂದಾಯ ಇಲಾಖೆ ಅಧಿಕಾರಿಗಳಿಗೆ ದೂರು ಕೂಡ ಸಲ್ಲಿಸಿ, ಸಮಸ್ಯೆ ಬಗೆಹರಿಸಲು ಹೇಳಿದ್ದಾರೆ.
ಇನ್ನು ಎಂಟು 10 ದಿನವಾದರೂ ತಾಲೂಕು ಕಚೇರಿ ಕಂದಾಯ ಇಲಾಖೆ ಅಧಿಕಾರಿಗಳು ಈ ಬಡ ಕುಟುಂಬದ ಸಮಸ್ಯೆಯನ್ನು ಆಲಿಸದೆ ಅಧಿಕಾರಿಗಳು ನಿರ್ಲಕ್ಷ ತೋರುತ್ತಿದ್ದಾರೆ ಎಂದು ಈ ಕುಟುಂಬ ನೇರ ಆರೋಪ ಮಾಡುತ್ತಿದೆ, ಇದರ ಬಗ್ಗೆ ಗಮನಹರಿಸಿ ತಾಲೂಕು ದಂಡಾಧಿಕಾರಿಯಾದ ರೇಣು ಕುಮಾರ್ ಅವರು ಈ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡುತ್ತಾರ ಕಾದುನೋಡಬೇಕು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA