nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ: ಆರ್.ಅಶೋಕ್ ವಾಗ್ದಾಳಿ

    September 19, 2025

    ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ

    September 18, 2025

    ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ

    September 18, 2025
    Facebook Twitter Instagram
    ಟ್ರೆಂಡಿಂಗ್
    • ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ: ಆರ್.ಅಶೋಕ್ ವಾಗ್ದಾಳಿ
    • ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
    • ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
    • ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ
    • ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ
    • ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ
    • ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
    • ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಶ ಕಂಡ ಪ್ರಾಮಾಣಿಕರಲ್ಲಿ ಮನಮೋಹನ್ ಸಿಂಗ್ ಕೂಡ ಒಬ್ಬರು: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ December 27, 2024

    ದೇಶ ಕಂಡ ಪ್ರಾಮಾಣಿಕರಲ್ಲಿ ಮನಮೋಹನ್ ಸಿಂಗ್ ಕೂಡ ಒಬ್ಬರು: ಸಿಎಂ ಸಿದ್ದರಾಮಯ್ಯ

    By adminDecember 27, 2024No Comments2 Mins Read
    c m siddaramaya

    ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅತ್ಯಂತ ಪ್ರಾಮಾಣಿಕ ರಾಜಕಾರಣಿ, 10 ವರ್ಷ ಪ್ರಧಾನಿಯಾಗಿದ್ದ ಅವಧಿಯಲ್ಲಿ ಉತ್ತಮ ಆಡಳಿತ ನೀಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷಗಳಾಗಿತ್ತು. ಅವರ ಬದುಕನ್ನು ಪವಾಡದ ರೀತಿ ನೋಡಬಹುದಾಗಿದೆ. ಇವತ್ತಿನ ಪಾಕಿಸ್ತಾನದ ಕುಗ್ರಾಮವೊಂದರಲ್ಲಿ ಜನಿಸಿದ್ದ ಅವರು,ಅಲ್ಲಿಂದ ದೇಶ ಹಾಗೂ ಜಗತ್ತಿನಲ್ಲೇ ಖ್ಯಾತ, ಶ್ರೇಷ್ಠ ಅರ್ಥ ಶಾಸ್ತ್ರಜ್ಞರಾಗಿ ಬೆಳೆದರು ಎಂದರು.


    Provided by
    Provided by
    Provided by

    ಪಿ.ವಿ.ನರಸಿಂಹರಾವ್ ಪ್ರಧಾನಿಯಾಗಿದ್ದಾಗ ಐದು ವರ್ಷಗಳ ಕಾಲ ದೇಶದ ಆರ್ಥಿಕ ಸಲಹೆಗಾರರಾಗಿದ್ದರು. ಉದಾರೀಕರಣ ಹಾಗೂ ಖಾಸಗೀಕರಣದ ಮೂಲ ಭಾರತದ ಆರ್ಥಿಕತೆಯನ್ನು ಜಾಗತಿಕತೆಗೆ ಮುಕ್ತವಾಗಿಸಿದರು. ಆ ನಿರ್ಧಾರಗಳಿಂದ ದೇಶದ ಆರ್ಥಿಕ ಬಿಕ್ಕಟ್ಟು ನಿವಾರಣೆಯಾಯಿತು ಎಂದು ವಿಶ್ಲೇಷಿಸಿದರು.

    ಅದರ ನಂತರ 2004ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಗಳಿಸಿದಾಗ ಸೋನಿಯಾ ಗಾಂಧಿ ಪ್ರಧಾನಿಯಾಗಲು ನಿರಾಕರಿಸಿದರು. ಆ ವೇಳೆ ಮನಮೋಹನ್ ಸಿಂಗ್ ರನ್ನು ಪ್ರಧಾನಮಂತ್ರಿಯಾಗಿ ಆಯ್ಕೆ ಮಾಡಲಾಗುತ್ತದೆ. 10 ವರ್ಷಗಳ ಕಾಲ ದೇಶದ ಅಧಿಕಾರದ ಚುಕ್ಕಾಣಿ ಹಿಡಿದು ಪ್ರಧಾನಿಯಾಗಿ ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತಲು ಯತ್ನಿಸಿದ್ದರು ಎಂದರು.

    ದೇಶ ಕಂಡ ಪ್ರಾಮಾಣಿಕರಲ್ಲಿ ಮನಮೋಹನ್ ಸಿಂಗ್ ಕೂಡ ಒಬ್ಬರು. ರಾಜಕಾರಣದಲ್ಲಿ ಪ್ರಾಮಾಣಿಕತೆ ಕಾಣುವುದು ಕಷ್ಟ. ಇವರು ಹತ್ತು ವರ್ಷವೂ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರು. ದೇಶದ ಆರ್ಥಿಕತೆ ಮೇಲೆ ದೊಡ್ಡ ಪ್ರಭಾವ ಬಿಟ್ಟು ಹೋಗಿದ್ದಾರೆ. ಅವರ ಬದುಕು ಮತ್ತು ಆರ್ಥಿಕವಾಗಿ ಕೈಗೊಂಡ ನಿರ್ಣಯಗಳು ನಮೆಲ್ಲರಿಗೂ ಪ್ರೇರಣೆ ಮತ್ತು ಸ್ಪೂರ್ತಿಯಾಗಿದೆ. ಪ್ರಧಾನಿಯಾಗಿದ್ದೇನೆ ಎಂಬ ಕಾರಣಕ್ಕೆ ಎಂದೂ ಅಧಿಕಾರದ ಮದದಿಂದ ನಡೆದುಕೊಂಡಿರಲಿಲ್ಲ. ಅತ್ಯಂತ ಸರಳ, ಸಂಭಾವಿತ ರಾಜಕಾರಣಿ. ಅತ್ಯಂತ ಗೌರನ್ವಿತ ವ್ಯಕ್ತಿ ಎಂದು ಕೊಂಡಾಡಿದರು.

    ಇಂದು ಪ್ರಧಾನಿ ನರೇಂದ್ರ ಮೋದಿಯವರು ಐದು ಕೆಜಿ ಅಕ್ಕಿ ನೀಡಲು ಕಾರಣಕರ್ತರು ಮನಮೋಹನ್ ಸಿಂಗ್ ಎಂದು ಹೇಳಿದರು. ತಾವು ರಾಜ್ಯದಲ್ಲಿ ಅನ್ನಭಾಗ್ಯವನ್ನು ಮುಂದುವರೆಸಲು ಮನಮೋಹನ್ ಸಿಂಗ್ ಕಾರಣ. ಅವರ ಅಧಿಕಾರವಧಿಯಲ್ಲಿ ಬಡವರನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮಗಳನ್ನು ರೂಪಿಸಿದ್ದರು ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ: ಆರ್.ಅಶೋಕ್ ವಾಗ್ದಾಳಿ

    September 19, 2025

    ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ

    September 18, 2025

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ: ಆರ್.ಅಶೋಕ್ ವಾಗ್ದಾಳಿ

    September 19, 2025

    ಬೆಂಗಳೂರು: ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ. ತಮ್ಮ ಮಾತಿನಿಂದಲೇ ಅವರು ಇಡೀ ದೇಶದಲ್ಲಿ ಹೆಚ್ಚು ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ’…

    ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ

    September 18, 2025

    ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ

    September 18, 2025

    ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ

    September 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.