ಕೆಎಸ್ ಆರ್ ಬೆಂಗಳೂರು ಭಾಗದ ಮಧ್ಯದಲ್ಲಿರುವ ಸೇತುವೆಯ ವಿವಿಧ ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.
ಜುಲೈ 30, ಆಗಸ್ಟ್ 6 ಮತ್ತು 13ರಂದು ಕೆಎಸ್ಆರ್ ಬೆಂಗಳೂರು -ಡಾ. ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಜುಲೈ 31, ಆಗಸ್ಟ್ 7 ಮತ್ತು 14 ರಂದು, ಡಾ., ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ -ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲುಗಳ ಸಂಚಾರ ಮಾಡಲಾಗಿದೆ.
ಜುಲೈ 30, ಆಗಸ್ಟ್ 6 ಮತ್ತು 13 ರಂದು ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಡುವ ಡಾ. ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ -ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ವೈಟ್ಫೀಲ್ಡ್- ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ, ನಾಂದೇಡ್ ನಿಲ್ದಾಣದಿಂದ ಹೊರಡುವ ರೈಲು ನಾಂದೇಡ್ -ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್ ರೈಲು ಯಲಹಂಕ ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದು ಮಾಡಲಾಗಿದೆ.
ಹುಬ್ಬಳ್ಳಿಯಿಂದ ಹೊರಡುವ ಎಸ್ ಎಸ್ ಎಸ್ ಹುಬ್ಬಳ್ಳಿ -ಕೆಎಸ್ ಆರ್ ಬೆಂಗಳೂರು ಡೈಲಿ ಎಕ್ಸ್ಪ್ರೆಸ್ ರೈಲು ಯಶವಂತಪುರ ಕೆಎಸ್ ಆರ್ ಬೆಂಗಳೂರು ನಿಲ್ದಾಣಗಳ ನಡುವೆ, ಹೊಸಪೇಟೆಯಿಂದ ಹೊರಡುವ ಹೊಸಪೇಟೆ ಕೆಎಸ್ಆರ್ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಯಶವಂತಪುರ ಕೆಎಸ್ ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ.
ಜುಲೈ 30, ಆಗಸ್ಟ್ 6 ಮತ್ತು 13 ರಂದು ಪ್ರಾರಂಭವಾಗುವ ರೈಲು ಸಂಖ್ಯೆ ಬೆಂಗಳೂರು -ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಎಸ್ ಎಂವಿಟಿ ಬೆಂಗಳೂರು, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಇದು ಬೆಂಗಳೂರು ಕಂಟ್ರೋಲ್ಮೆಂಟ್ ನಲ್ಲಿ ನಿಲ್ಲುವುದಿಲ್ಲ ಎಂದು ನೈರುತ್ಯ ರೈಲ್ವೆ ಮಾಹಿತಿ ನೀಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA