nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ

    November 5, 2025

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ

    November 5, 2025
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
    • ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
    • ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
    • ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
    • ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
    • ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ
    • ತುಮಕೂರು | SSLC ಫಲಿತಾಂಶ ಸೇರಿದಂತೆ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು ಜಿಲ್ಲೆಯ ಹಲವು ಸಮಸ್ಯೆಗಳು!
    • ಜಮೀನಿನ ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ: ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಲೋಕಾಯುಕ್ತ ಬಲೆಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಛೆ…! ಇವರೆಂಥಾ ಜನ?: ತುಂಬಿದ ಮರಳೂರು ಕೆರೆಗೆ ತ್ಯಾಜ್ಯದ ಬಾಗಿನ!: ಎಲ್ಲಿದ್ದಾರೆ ಅಧಿಕಾರಿಗಳು, ಜನಪ್ರತಿನಿಧಿಗಳು?
    ತುಮಕೂರು January 26, 2023

    ಛೆ…! ಇವರೆಂಥಾ ಜನ?: ತುಂಬಿದ ಮರಳೂರು ಕೆರೆಗೆ ತ್ಯಾಜ್ಯದ ಬಾಗಿನ!: ಎಲ್ಲಿದ್ದಾರೆ ಅಧಿಕಾರಿಗಳು, ಜನಪ್ರತಿನಿಧಿಗಳು?

    By adminJanuary 26, 2023No Comments2 Mins Read
    maraluru kere
    • ಶಿವಕುಮಾರ್,  ಮೇಷ್ಟ್ರು ಮನೆ

    ತುಮಕೂರು: ಮಳೆರಾಯನ ಕೃಪೆಯಿಂದ ಅದ್ಹೇಗೋ, ಕೆರೆತುಂಬಿತು, ಆದ್ರೆ, ತುಂಬಿದ ಕೆರೆಯನ್ನ ಇವರು ಹಾಗೆಯೇ ಇರಲು ಬಿಡ್ತಾರಾ? ಖಂಡಿತಾ ಇಲ್ಲ, ಆ ಕೆರೆ ಈಗ ತ್ಯಾಜ್ಯ ಸುರಿಯುವ, ಕಸ ಎಸೆಯುವ ಸ್ಥಳವಾಗಿ ಮಾರ್ಪಟ್ಟಿದೆ.

    ಹೌದು…! ಇಂತಹದ್ದೊಂದು ಅನಾಗರಿಕ ಕೃತ್ಯ ನಡೆದಿರುವುದು ತುಮಕೂರು ನಗರಕ್ಕೆ ಹೊಂದಿಕೊಂಡಿರುವ ಮರಳೂರು ಗ್ರಾಮಕ್ಕೆ ಸೇರಿದ ಮರಳೂರು ಕೆರೆಯಲ್ಲಿ. ಈ ಬಾರಿ ವರುಣನ ಕೃಪೆಯಿಂದಾಗಿ ಇಡೀ ಜಿಲ್ಲೆಯ ಕೆರೆಗಳು ತುಂಬಿ ಕೋಡಿ ಹರಿದಿತ್ತು. ಜನಪ್ರತಿನಿಧಿಗಳು ತುಂಬಿದ ಕೆರೆಗೆ ಬಾಗಿನ ಅರ್ಪಿಸಿದ್ದರು. ಆದರೆ, ಮಳೆ ನೀರನ್ನು ಉಳಿಸುವ ಸಾಮಾಜಿಕ ಜವಾಬ್ದಾರಿಯ ಬಗ್ಗೆ ಜನತೆ ಯೋಚನೆ ಮಾಡದಿರುವುದು ವಿಪರ್ಯಾಸವಾಗಿದೆ.


    Provided by
    Provided by

    ಮಳೆಗಾಲದಲ್ಲಿ ತುಂಬಿದ್ದ ಮರಳೂರು ಕೆರೆ ಇದೀಗ ಸತ್ತ ಕೋಳಿ, ಪ್ರಾಣಿಗಳ ತ್ಯಾಜ್ಯಗಳನ್ನು ಎಸೆಯಲು ಬಳಕೆಯಾಗುತ್ತಿದೆ. ಕೆರೆಯಲ್ಲಿರುವ ಶುದ್ಧ ನೀರು ಪ್ರತಿ ದಿನ ಸುರಿಯುತ್ತಿರುವ ತ್ಯಾಜ್ಯಗಳಿಂದಾಗಿ ಕಲುಶಿತಗೊಳ್ಳುತ್ತಿದೆ. ಇದರಿಂದಾಗಿ ಕೆರೆಯಲ್ಲಿರುವ ಜಲಚರ ಜೀವಿಗಳು ಸಾಯುತ್ತಿವೆ, ಅಂತರ್ಜಲ ಮಾಲಿನ್ಯವಾಗುತ್ತಿದ್ದು, ಪರಿಸರಕ್ಕೆ ಹಾನಿಯಾಗುತ್ತಿದೆ. ಮರಳೂರು ಗ್ರಾಮದ ಬೋರ್ ವೆಲ್ ಗಳಿಗೆ ಈ ಕೆರೆಯ ನೀರಿನ ಸಂಪರ್ಕವಿದೆ. ಕೆರೆಯ ನೀರು ಅಪಾಯಕಾರಿ ಮಟ್ಟಕ್ಕೆ ಕಲುಶಿತಗೊಂಡರೆ, ಗ್ರಾಮದಲ್ಲಿ ಸಾಂಕ್ರಾಮಿಕ ರೋಗ ಹರಡಲು ಇದು ಕಾರಣವಾಗಬಹುದು.

    ಛೆ…! ಇವರೆಂಥಾ ಜನ? ಇವರಿಗೆ ತ್ಯಾಜ್ಯ ಎಸೆಯಲು ಜೀವ ಜಲವಿರುವ ಇದೇ ಕೆರೆ ಬೇಕೆ? ತ್ಯಾಜ್ಯ ವಿಲೇವಾರಿಗೆ ಇವರಿಗೆ ಬೇರೆ ಯಾವುದೇ ಸ್ಥಳವಿಲ್ಲವೇ? ಶುದ್ಧ ನೀರಿಗೆ ತ್ಯಾಜ್ಯ ಸುರಿಯುವ ಇವರೆಷ್ಟು ನೀಚರು ಇರಬಹುದು? ಕಳೆದ 20 ವರ್ಷಗಳ ನಂತರ ಮರಳೂರು ಕೆರೆ ತುಂಬಿತ್ತು,  ಆದ್ರೆ ಇದೀಗ ಈ ಕೆರೆ ತ್ಯಾಜ್ಯ ಎಸೆಯುವ ಸ್ಥಳವಾಗಿ ಮಾರ್ಪಟ್ಟಿದೆ. ತುಮಕೂರು ನಗರಕ್ಕೆ ಹೊಂದಿಕೊಂಡಂತಿರುವ ಕೋಳಿ ಅಂಗಡಿಗಳ ತ್ಯಾಜ್ಯಗಳನ್ನು ಇಲ್ಲಿ ಸುರಿಯಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಕೆರೆ ದಿನದಿಂದ ದಿನಕ್ಕೆ ಕಲುಶಿತಗೊಳ್ಳುತ್ತಿದೆ. ಕೆರೆಯ ಸಮೀಪ ಮೂಗು ಮುಚ್ಚಿಕೊಂಡು ಹೋಗುವ ಸ್ಥಿತಿ ಇದ್ದರೂ, ಜವಾಬ್ದಾಯುತ ಸ್ಥಾನದಲ್ಲಿರುವ ಗ್ರಾಮಸ್ಥರು ಈ ಬಗ್ಗೆ ತಲೆ ಕೆಡಿಸಿಕೊಳ್ಳದೇ ಇರುವುದು ಅಚ್ಚರಿಗೆ ಕಾರಣವಾಗಿದೆ.

    ಸ್ಥಳೀಯ ಆಡಳಿತ, ಜಿಲ್ಲಾಡಳಿತ, ಇದೇ ಪರಿಸರದಲ್ಲಿ ದಿನನಿತ್ಯ ಓಡಾಡುತ್ತಿರುವ ಜವಾಬ್ದಾರಿಯುತ ಜನಪ್ರತಿನಿಧಿಗಳು ಈ ದುಷ್ಕೃತ್ಯವನ್ನು ಕಂಡೂ ಕಾಣದಂತೆ ಕುಳಿತಿರುವುದು ವಿಪರ್ಯಾಸವಾಗಿದೆ.

    ಮರುಕಳಿಸದಿರಲಿ ದುರಂತ!

    ಈ ಹಿಂದೆ ಸಿದ್ಧಾರ್ಥ ಕಾಲೇಜಿನ ಹಿಂಭಾಗದಲ್ಲಿ ಇದೇ ರೀತಿಯಾಗಿ ಕೋಳಿ ತ್ಯಾಜ್ಯವನ್ನು ಎಸೆಯಲಾಗಿತ್ತು. ಈ ವೇಳೆ ನೂರಾರು ಹದ್ದುಗಳು ಈ ತ್ಯಾಜ್ಯವನ್ನು ತಿಂದು ಸಾವನ್ನಪ್ಪಿದ್ದವು. ಆದರೆ, ಈ ಬಾರಿ ನೇರವಾಗಿ ಜನರ ಜೀವವೇ ಅಪಾಯದಲ್ಲಿದ್ದು, ಜನರು ದಿನನಿತ್ಯ ಬಳಸುತ್ತಿರುವ ನೀರಿಗೆ ತ್ಯಾಜ್ಯ ಸುರಿಯಲಾಗುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಇದೆ.

    ಜಿಲ್ಲಾಡಳಿತ, ಸ್ಥಳೀಯಾಡಳಿತ ಈ ಬಗ್ಗೆ ತಕ್ಷಣವೇ ಗಮನ ಹರಿಸಬೇಕಿದೆ. ಕೆರೆಯ ನೀರಿಗೆ ತ್ಯಾಜ್ಯ ಸುರಿಯುವವರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು. ಜೊತೆಗೆ ಕೆರೆಯ ನೀರಿನ ಸುರಕ್ಷಯ ಬಗ್ಗೆ ಗಮನ ಹರಿಸಬೇಕಿದೆ.

     


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ

    November 5, 2025

    ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ

    November 5, 2025

    ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ

    November 5, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    ಸರಗೂರು:   ಜಯಲಕ್ಷ್ಮೀಪುರ ಗ್ರಾಮಸ್ಥರು ಒತ್ತಾಯದ ಮೇರೆಗೆ ತಾಲೂಕಿನಿಂದ ಜಯಲಕ್ಷೀಪುರ ಗ್ರಾಮಕ್ಕೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಟ್ಟ ತಾಲೂಕಿನ ಶಾಸಕರಾದ ಅನಿಲ್…

    ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ

    November 5, 2025

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ

    November 5, 2025

    ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ

    November 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.