nammatumakuru

    Subscribe to Updates

    Get the latest creative news from FooBar about art, design and business.

    What's Hot

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026
    Facebook Twitter Instagram
    ಟ್ರೆಂಡಿಂಗ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    • ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
    • ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ
    • ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.
    • ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
    • ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಛೆ…! ಇವರೆಂಥಾ ಜನ?: ತುಂಬಿದ ಮರಳೂರು ಕೆರೆಗೆ ತ್ಯಾಜ್ಯದ ಬಾಗಿನ!: ಎಲ್ಲಿದ್ದಾರೆ ಅಧಿಕಾರಿಗಳು, ಜನಪ್ರತಿನಿಧಿಗಳು?
    ತುಮಕೂರು January 26, 2023

    ಛೆ…! ಇವರೆಂಥಾ ಜನ?: ತುಂಬಿದ ಮರಳೂರು ಕೆರೆಗೆ ತ್ಯಾಜ್ಯದ ಬಾಗಿನ!: ಎಲ್ಲಿದ್ದಾರೆ ಅಧಿಕಾರಿಗಳು, ಜನಪ್ರತಿನಿಧಿಗಳು?

    By adminJanuary 26, 2023No Comments2 Mins Read
    maraluru kere
    • ಶಿವಕುಮಾರ್,  ಮೇಷ್ಟ್ರು ಮನೆ

    ತುಮಕೂರು: ಮಳೆರಾಯನ ಕೃಪೆಯಿಂದ ಅದ್ಹೇಗೋ, ಕೆರೆತುಂಬಿತು, ಆದ್ರೆ, ತುಂಬಿದ ಕೆರೆಯನ್ನ ಇವರು ಹಾಗೆಯೇ ಇರಲು ಬಿಡ್ತಾರಾ? ಖಂಡಿತಾ ಇಲ್ಲ, ಆ ಕೆರೆ ಈಗ ತ್ಯಾಜ್ಯ ಸುರಿಯುವ, ಕಸ ಎಸೆಯುವ ಸ್ಥಳವಾಗಿ ಮಾರ್ಪಟ್ಟಿದೆ.

    ಹೌದು…! ಇಂತಹದ್ದೊಂದು ಅನಾಗರಿಕ ಕೃತ್ಯ ನಡೆದಿರುವುದು ತುಮಕೂರು ನಗರಕ್ಕೆ ಹೊಂದಿಕೊಂಡಿರುವ ಮರಳೂರು ಗ್ರಾಮಕ್ಕೆ ಸೇರಿದ ಮರಳೂರು ಕೆರೆಯಲ್ಲಿ. ಈ ಬಾರಿ ವರುಣನ ಕೃಪೆಯಿಂದಾಗಿ ಇಡೀ ಜಿಲ್ಲೆಯ ಕೆರೆಗಳು ತುಂಬಿ ಕೋಡಿ ಹರಿದಿತ್ತು. ಜನಪ್ರತಿನಿಧಿಗಳು ತುಂಬಿದ ಕೆರೆಗೆ ಬಾಗಿನ ಅರ್ಪಿಸಿದ್ದರು. ಆದರೆ, ಮಳೆ ನೀರನ್ನು ಉಳಿಸುವ ಸಾಮಾಜಿಕ ಜವಾಬ್ದಾರಿಯ ಬಗ್ಗೆ ಜನತೆ ಯೋಚನೆ ಮಾಡದಿರುವುದು ವಿಪರ್ಯಾಸವಾಗಿದೆ.

    ಮಳೆಗಾಲದಲ್ಲಿ ತುಂಬಿದ್ದ ಮರಳೂರು ಕೆರೆ ಇದೀಗ ಸತ್ತ ಕೋಳಿ, ಪ್ರಾಣಿಗಳ ತ್ಯಾಜ್ಯಗಳನ್ನು ಎಸೆಯಲು ಬಳಕೆಯಾಗುತ್ತಿದೆ. ಕೆರೆಯಲ್ಲಿರುವ ಶುದ್ಧ ನೀರು ಪ್ರತಿ ದಿನ ಸುರಿಯುತ್ತಿರುವ ತ್ಯಾಜ್ಯಗಳಿಂದಾಗಿ ಕಲುಶಿತಗೊಳ್ಳುತ್ತಿದೆ. ಇದರಿಂದಾಗಿ ಕೆರೆಯಲ್ಲಿರುವ ಜಲಚರ ಜೀವಿಗಳು ಸಾಯುತ್ತಿವೆ, ಅಂತರ್ಜಲ ಮಾಲಿನ್ಯವಾಗುತ್ತಿದ್ದು, ಪರಿಸರಕ್ಕೆ ಹಾನಿಯಾಗುತ್ತಿದೆ. ಮರಳೂರು ಗ್ರಾಮದ ಬೋರ್ ವೆಲ್ ಗಳಿಗೆ ಈ ಕೆರೆಯ ನೀರಿನ ಸಂಪರ್ಕವಿದೆ. ಕೆರೆಯ ನೀರು ಅಪಾಯಕಾರಿ ಮಟ್ಟಕ್ಕೆ ಕಲುಶಿತಗೊಂಡರೆ, ಗ್ರಾಮದಲ್ಲಿ ಸಾಂಕ್ರಾಮಿಕ ರೋಗ ಹರಡಲು ಇದು ಕಾರಣವಾಗಬಹುದು.

    ಛೆ…! ಇವರೆಂಥಾ ಜನ? ಇವರಿಗೆ ತ್ಯಾಜ್ಯ ಎಸೆಯಲು ಜೀವ ಜಲವಿರುವ ಇದೇ ಕೆರೆ ಬೇಕೆ? ತ್ಯಾಜ್ಯ ವಿಲೇವಾರಿಗೆ ಇವರಿಗೆ ಬೇರೆ ಯಾವುದೇ ಸ್ಥಳವಿಲ್ಲವೇ? ಶುದ್ಧ ನೀರಿಗೆ ತ್ಯಾಜ್ಯ ಸುರಿಯುವ ಇವರೆಷ್ಟು ನೀಚರು ಇರಬಹುದು? ಕಳೆದ 20 ವರ್ಷಗಳ ನಂತರ ಮರಳೂರು ಕೆರೆ ತುಂಬಿತ್ತು,  ಆದ್ರೆ ಇದೀಗ ಈ ಕೆರೆ ತ್ಯಾಜ್ಯ ಎಸೆಯುವ ಸ್ಥಳವಾಗಿ ಮಾರ್ಪಟ್ಟಿದೆ. ತುಮಕೂರು ನಗರಕ್ಕೆ ಹೊಂದಿಕೊಂಡಂತಿರುವ ಕೋಳಿ ಅಂಗಡಿಗಳ ತ್ಯಾಜ್ಯಗಳನ್ನು ಇಲ್ಲಿ ಸುರಿಯಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಕೆರೆ ದಿನದಿಂದ ದಿನಕ್ಕೆ ಕಲುಶಿತಗೊಳ್ಳುತ್ತಿದೆ. ಕೆರೆಯ ಸಮೀಪ ಮೂಗು ಮುಚ್ಚಿಕೊಂಡು ಹೋಗುವ ಸ್ಥಿತಿ ಇದ್ದರೂ, ಜವಾಬ್ದಾಯುತ ಸ್ಥಾನದಲ್ಲಿರುವ ಗ್ರಾಮಸ್ಥರು ಈ ಬಗ್ಗೆ ತಲೆ ಕೆಡಿಸಿಕೊಳ್ಳದೇ ಇರುವುದು ಅಚ್ಚರಿಗೆ ಕಾರಣವಾಗಿದೆ.

    ಸ್ಥಳೀಯ ಆಡಳಿತ, ಜಿಲ್ಲಾಡಳಿತ, ಇದೇ ಪರಿಸರದಲ್ಲಿ ದಿನನಿತ್ಯ ಓಡಾಡುತ್ತಿರುವ ಜವಾಬ್ದಾರಿಯುತ ಜನಪ್ರತಿನಿಧಿಗಳು ಈ ದುಷ್ಕೃತ್ಯವನ್ನು ಕಂಡೂ ಕಾಣದಂತೆ ಕುಳಿತಿರುವುದು ವಿಪರ್ಯಾಸವಾಗಿದೆ.

    ಮರುಕಳಿಸದಿರಲಿ ದುರಂತ!

    ಈ ಹಿಂದೆ ಸಿದ್ಧಾರ್ಥ ಕಾಲೇಜಿನ ಹಿಂಭಾಗದಲ್ಲಿ ಇದೇ ರೀತಿಯಾಗಿ ಕೋಳಿ ತ್ಯಾಜ್ಯವನ್ನು ಎಸೆಯಲಾಗಿತ್ತು. ಈ ವೇಳೆ ನೂರಾರು ಹದ್ದುಗಳು ಈ ತ್ಯಾಜ್ಯವನ್ನು ತಿಂದು ಸಾವನ್ನಪ್ಪಿದ್ದವು. ಆದರೆ, ಈ ಬಾರಿ ನೇರವಾಗಿ ಜನರ ಜೀವವೇ ಅಪಾಯದಲ್ಲಿದ್ದು, ಜನರು ದಿನನಿತ್ಯ ಬಳಸುತ್ತಿರುವ ನೀರಿಗೆ ತ್ಯಾಜ್ಯ ಸುರಿಯಲಾಗುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಇದೆ.

    ಜಿಲ್ಲಾಡಳಿತ, ಸ್ಥಳೀಯಾಡಳಿತ ಈ ಬಗ್ಗೆ ತಕ್ಷಣವೇ ಗಮನ ಹರಿಸಬೇಕಿದೆ. ಕೆರೆಯ ನೀರಿಗೆ ತ್ಯಾಜ್ಯ ಸುರಿಯುವವರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು. ಜೊತೆಗೆ ಕೆರೆಯ ನೀರಿನ ಸುರಕ್ಷಯ ಬಗ್ಗೆ ಗಮನ ಹರಿಸಬೇಕಿದೆ.

     


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ

    August 15, 2026

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    ತುಮಕೂರು: ದೇಶಾದ್ಯಂತ ಶಿಕ್ಷಣದ ಖಾಸಗೀಕರಣ, ಆರೋಗ್ಯ ಕ್ಷೇತ್ರ ವ್ಯಾಪಾರೀಕರಣಗೊಳ್ಳುತ್ತಿರುವುದು, ದಿನೇ ದಿನೇ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಹಾಗೂ ಹೆಣ್ಣುಮಕ್ಕಳ ಮೇಲಿನ…

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026

    ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ

    August 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.