ಗುಬ್ಬಿ: ದಲಿತ ಸಮುದಾಯವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಮಾರ್ಚ್ 18 ಮತ್ತು 19ರಂದು ದಾವಣಗೆರೆ ಚಲೋ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಗುಬ್ಬಿ ತಾಲ್ಲೂಕಿನ ದಲಿತ ಸಂಘರ್ಷ ಸಮಿತಿ ಸಂಚಾಲಕ ಜೆ.ಸಿ.ನರಸಿಂಹ ಮೂರ್ತಿ ತಿಳಿಸಿದರು.
ಗುಬ್ಬಿ ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಡಕಾಗಿರುವ ದಲಿತ ಸಮುದಾಯದ ಮುಖಂಡರು ಹಾಗೂ ಸಮುದಾಯವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಎರಡು ದಿವಸಗಳಕಾಲ ರಾಜ್ಯ ಸಂಚಾಲಕರಾದ ಗುರುಮೂರ್ತಿ ಹಾಗೂ ರಾಜ್ಯ ಮಟ್ಟದ ನಾಯಕರು ಮತ್ತು ಮಠಾಧೀಶರು ಮತ್ತು ರಾಜಕೀಯ ಜನಪ್ರತಿನಿಧಿಗಳ ಸಮಕ್ಷಮದಲ್ಲಿ ಆಯೋಜಿಸಿದ್ದು, ಈ ಕಾರ್ಯಕ್ರಮಕ್ಕೆ ತಾಲ್ಲೂಕಿನ ಹಾಗೂ ಜಿಲ್ಲೆಯ ಎಲ್ಲಾ ಮುಖಂಡರು ಹಾಗೂ ದಲಿತ ಸಮುದಾಯದವರು ಭಾಗವಹಿಸುವ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಕಾನೂನು ಸಲಹೆಗಾರರಾದ ನಿಟ್ಟೂರು ನಾಗಭೂಷಣ್, ದೊಡ್ಡ ಗುಣಿ ಕೀರ್ತಿ, ನಿಟ್ಟೂರು ನಾಗರಾಜ್, ಬಿಕ್ಕೆಗುಡ್ದ ಕೃಷ್ಣಪ್ಪ, ನರೇಂದ್ರ ಕುಮಾರ್, ದಲಿತ್ ಗಂಗಣ್ಣ, ಜಿ.ಹೆಚ್.ಹರೀಶ್, ಶಿವು ಶೆಟ್ಟಿಹಳ್ಳಿ, ಹಾಗೂ ಇನ್ನಿತರರು ಹಾಜರಿದ್ದರು.
ವರದಿ: ಮಂಜುನಾಥ್, ಗುಬ್ಬಿ
ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB