nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ

    September 20, 2026

    ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ

    September 20, 2026

    ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ

    September 20, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ
    • ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ
    • ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ
    • ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ
    • ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ
    • ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್
    • ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
    • ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಗಾಂಜಾ, ಕಳ್ಳತನ, ಸುಲಿಗೆ: 5 ಪ್ರಕರಣಗಳಲ್ಲಿ 12 ಆರೋಪಿಗಳ ಬಂಧನ
    ತುಮಕೂರು July 16, 2026

    ತುಮಕೂರು: ಗಾಂಜಾ, ಕಳ್ಳತನ, ಸುಲಿಗೆ: 5 ಪ್ರಕರಣಗಳಲ್ಲಿ 12 ಆರೋಪಿಗಳ ಬಂಧನ

    By adminJuly 16, 2026No Comments4 Mins Read
    tumakuru police.jpg

    ತುಮಕೂರು : ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಗಾಂಜಾ ಮಾರಾಟ, ಮನೆ ಕಳ್ಳತನ, ಬೋರ್ವೆಲ್ ಸ್ಟಾರ್ಟರ್ ಕಳ್ಳತನ ಹಾಗೂ ಹೆದ್ದಾರಿ ಮತ್ತು ಒಂಟಿ ಮನೆಗಳಲ್ಲಿ ನಡೆದ ಸುಲಿಗೆ ಪ್ರಕರಣಗಳನ್ನು ತುಮಕೂರು ಜಿಲ್ಲಾ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ ಎಂದು ಎಸ್ಪಿ ಅಶೋಕ್ ಕೆ.ವಿ. ತಿಳಿಸಿದರು.

    ನಗರದ ಎಸ್ ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಂಜಾ ಮಾರಾಟ ಪ್ರಕರಣಗಳನ್ನು ಒಟ್ಟು 6 ಮಂದಿ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿ, ಗಾಂಜಾ ಮಾರಾಟ, ಮನೆ ಕಳ್ಳತನ, ಬೋರ್ವೆಲ್ ಸ್ಟಾರ್ಟರ್ ಕಳ್ಳತನ ಹಾಗೂ ಹೆದ್ದಾರಿ ಮತ್ತು ಒಂಟಿ ಮನೆಗಳಲ್ಲಿ ನಡೆದ ಸುಲಿಗೆ ಪ್ರಕರಣಗಳ ಮಾಹಿತಿ ನೀಡಿದರು.

    ಪ್ರಕರಣ 1: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಬಂಧನ

    ತುಮಕೂರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಗಾಂಜಾ ಮತ್ತು ಹೈಡ್ರೋವಿಡ್ ಗಾಂಜಾ ಮಾರಾಟ ಮಾಡುತ್ತಿದ್ದ ಆರು ಸದಸ್ಯರ ಗ್ಯಾಂಗ್ ಅನ್ನು ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
    ಜುಲೈ 10ರಂದು ಶೇಷಾದ್ರಿಪುರಂ ಕಾಲೇಜು ಸಮೀಪ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖಾ ತಂಡ ರಚಿಸಿ, ಜುಲೈ 11ರಂದು ಕಾರ್ಯಾಚರಣೆ ನಡೆಸಿ 6 ಆರೋಪಿಗಳನ್ನು ಬಂಧಿಸಿತು. ಬಂಧಿತರಾದ ಸತೀಶ್ ಸಿ. (37), ಪ್ರಮೋದ್ ಕುಮಾರ್ (28), ದಿಶಾಂತ್ ಆರ್. (21), ದರ್ಶನ್ (28), ಅಮೋಘ ನಾಗಭೂಷಣ್ (31) ಹಾಗೂ ಮಂಜುನಾಥ್ (35).

    ಬಂಧಿತರಿಂದ ಸುಮಾರು 1 ಕೆ.ಜಿ. 655 ಗ್ರಾಂ ಗಾಂಜಾ, 23 ಗ್ರಾಂ ಹೈಡ್ರೋವಿಡ್ ಗಾಂಜಾ ಹಾಗೂ 40 ಲಕ್ಷ ರೂ. ಮೌಲ್ಯದ ಫಾರ್ಚೂನರ್ ಕಾರು ಸೇರಿದಂತೆ ಒಟ್ಟು 44.30 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳು ಮತ್ತು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

    ಪ್ರಕರಣ ತನಿಖಾ ತಂಡದ ತಿಲಕ್ ಪಾರ್ಕ್ ವೃತ್ತದ ಸಿಪಿಐ ಎಫ್.ಕೆ. ನಡಾಫ್, ಪಿಎಸ್ಐ ಯೋಗೀಶ್ ಟಿ.ಕೆ., ಲೋಕೇಶ್ ಬಾಬು ಹಾಗೂ ಸಿಬ್ಬಂದಿಗಳನ್ನು ಶ್ಲಾಘಿಸಿ ಪ್ರಶಂಸಾ ಪತ್ರ ನೀಡಿ ಗೌರವಿಸಿದರು.

    ಪ್ರಕರಣ 2: ಮನೆ ಕಳ್ಳತನ ಪ್ರಕರಣ ಭೇದಿಸಿದ ಜಯನಗರ ಪೊಲೀಸರು: ಅಂತರರಾಜ್ಯ ಕಳ್ಳನ ಬಂಧನ
    ತುಮಕೂರು ನಗರದ ಗೋಕುಲ ಬಡಾವಣೆಯಲ್ಲಿ 2023ರ ಡಿಸೆಂಬರ್ನಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಜಯನಗರ ಪೊಲೀಸರು ಭೇದಿಸಿ, ಅಂತರರಾಜ್ಯ ಕಳ್ಳನನ್ನು ಬಂಧಿಸಿ 55 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. 2023ರ ಡಿಸೆಂಬರ್ 30ರಂದು ಗೋಕುಲ ಬಡಾವಣೆಯ ಮನೆಯಲ್ಲಿ ಬೀಗ ಮುರಿದು ಸುಮಾರು 200 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಈ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ವಿಶೇಷ ತಂಡವು ಜೂನ್ 23, 2026ರಂದು ಉತ್ತರ ಪ್ರದೇಶ ಮೂಲದ ಫಹೀಮ್ ಎ.ಟಿ.ಎಂ. ಫಹೀಮ್ ಇಸ್ಲಾಮುದ್ದೀನ್ (38) ಎಂಬ ಆರೋಪಿಯನ್ನು ಬಂಧಿಸಿದೆ.

    ಆರೋಪಿಯಿಂದ ಒಟ್ಟು 401.12 ಗ್ರಾಂ ತೂಕದ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು 55 ಲಕ್ಷ ರೂ. ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿಯ ವಿರುದ್ಧ ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ರಾಜಸ್ಥಾನ, ಹರಿಯಾಣ, ಉತ್ತರಾಖಂಡ, ಉತ್ತರ ಪ್ರದೇಶ, ಲಕ್ಷದ್ವೀಪ ಹಾಗೂ ಛತ್ತೀಸ್ಗಢ ರಾಜ್ಯಗಳಲ್ಲಿ ಒಟ್ಟು 66 ಕಳವು ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

    ತನಿಖಾ ತಂಡದ ಸಿಪಿಐ ಎಫ್.ಕೆ. ನಡಾಫ್, ಪಿಎಸ್ಐ ಮೋಹನ್ ಎನ್., ಎಎಸ್ಐ ಮೋಹನ್ ಕುಮಾರ್ ಹಾಗೂ ಸಿಬ್ಬಂದಿಯು ಕಾರ್ಯಾಚರಣೆ ನಡೆಸಿದ್ದರು. ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ತನಿಖಾ ತಂಡವನ್ನು ಪ್ರಶಂಸಾಪತ್ರ ನೀಡಿ ಗೌರವಿಸಿದರು.

    ಪ್ರಕರಣ 4

    ಒಂಟಿ ಮನೆಯ ಮಹಿಳೆಗೆ ಕಾರದ ಪುಡಿ ಎರಚಿ ಸರ ಕದ್ದ ಇಬ್ಬರ ಬಂಧನ:

    ತುಮಕೂರು: ಒಂಟಿ ಮನೆಯಲ್ಲಿ ಇದ್ದ ಶಿಕ್ಷಕಿಯೊಬ್ಬರಿಗೆ ಕಾರದ ಪುಡಿ ಎರಚಿ ಚಿನ್ನದ ಮಾಂಗಲ್ಯ ಸರವನ್ನು ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ತುಮಕೂರು ಗ್ರಾಮಾಂತರ ಪೊಲೀಸರು ಬಂಧಿಸಿ, ಕಳವಾದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

    ಜೂನ್ 28ರಂದು ತಿಮ್ಮಲಾಪುರದ ತೋಟದ ಮನೆಯಲ್ಲಿ ಇದ್ದ ಶಿಕ್ಷಕಿ ಚಂದ್ರಮ್ಮ ಅವರ ಮನೆಗೆ ಬುರ್ಖಾ ಧರಿಸಿದ್ದ ಮಹಿಳೆ ಊಟ ಕೇಳುವ ನೆಪದಲ್ಲಿ ಪ್ರವೇಶಿಸಿದ್ದಳು. ಬಳಿಕ ಕಣ್ಣಿಗೆ ಕಾರದ ಪುಡಿ ಎರಚಿ, ಸುಮಾರು 73.480 ಗ್ರಾಂ ತೂಕದ 4 ಲಕ್ಷ ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಕಸಿದು, ಹೊರಗೆ ಬೈಕ್ನೊಂದಿಗೆ ಕಾಯುತ್ತಿದ್ದ ಸಹಚರನೊಂದಿಗೆ ಪರಾರಿಯಾಗಿದ್ದಳು.

    ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ವಿಶೇಷ ತಂಡ ಜುಲೈ 2ರಂದು ಆರೋಪಿಗಳಾದ ನಾಗರತ್ನ (34) ಹಾಗೂ ಶಿವಕುಮಾರ್ ಟಿ.ಆರ್. ಶೆಟ್ಟಿ (34) ಅವರನ್ನು ಬಂಧಿಸಿದೆ. ಆರೋಪಿಗಳಿಂದ ಸುಲಿಗೆ ಮಾಡಿದ್ದ ಮಾಂಗಲ್ಯ ಸರ, ಕೃತ್ಯಕ್ಕೆ ಬಳಸಿದ ಬೈಕ್ ಹಾಗೂ ಬುರ್ಖಾವನ್ನು ವಶಪಡಿಸಿಕೊಳ್ಳಲಾಗಿದೆ.

    ಗ್ರಾಮಾಂತರ ವೃತ್ತ ನಿರೀಕ್ಷಕ ಪುಟ್ಟೇಗೌಡ ಕೆ.ಬಿ., ಪಿಎಸ್ಐ ಪಿ.ಎಂ. ಆಮಣಿ ಹಾಗೂ ಇತರ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿತು. ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ತನಿಖಾ ತಂಡವನ್ನು ಪ್ರಶಂಸಾಪತ್ರ ನೀಡಿ ಗೌರವಿಸಿದರು.

    ಪ್ರಕರಣ 5

    ಹೆದ್ದಾರಿ ಸುಲಿಗೆ ಪ್ರಕರಣ ಭೇದಿಸಿದ ಪೊಲೀಸರು: ಓರ್ವ ಆರೋಪಿ ಬಂಧನ:

    ತುಮಕೂರು: ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಲಾರಿ ಚಾಲಕ ಹಾಗೂ ಕಾರು ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಸುಲಿಗೆ ನಡೆಸಿದ್ದ ಪ್ರಕರಣವನ್ನು ತುಮಕೂರು ಗ್ರಾಮಾಂತರ ಪೊಲೀಸರು ಭೇದಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
    ಮೇ 16ರಂದು ಊರುಕೆರೆ ಸರ್ವಿಸ್ ರಸ್ತೆಯಲ್ಲಿ ಲಾರಿ ಚಾಲಕ ನಾಗೇಶ್ ಯಮನಪ್ಪ ಗೊಂಡಿ ಅವರು ವಾಹನ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ವೇಳೆ ಇಬ್ಬರು ಆರೋಪಿಗಳು 57,400 ರೂ. ನಗದು ಹಾಗೂ ಮೊಬೈಲ್ ಫೋನ್ ಕಸಿದು ಪರಾರಿಯಾಗಿದ್ದರು. ಅದೇ ದಿನ ಕೋರ ಪೊಲೀಸ್ ಠಾಣೆ ವ್ಯಾಪ್ತಿಯ ವಿ.ಆರ್.ಎಲ್ ಹೋಟೆಲ್ ಸಮೀಪ ಕಾರಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಸಿಂಧು ಅವರಿಂದ 1.80 ಲಕ್ಷ ರೂ. ಮೌಲ್ಯದ 10.300 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಸುಲಿಗೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ವಿಶೇಷ ತಂಡ ಸೈಯದ್ ಉಸ್ಮಾನ್ (22) ಎಂಬ ಆರೋಪಿಯನ್ನು ಬಂಧಿಸಿ, ಸುಲಿಗೆ ಮಾಡಿದ್ದ ಚಿನ್ನದ ಮಾಂಗಲ್ಯ ಸರವನ್ನು ವಶಪಡಿಸಿಕೊಂಡಿದೆ. ಮತ್ತೊಬ್ಬ ಆರೋಪಿ ಆಕಾಶ್ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ಕೆ.ವಿ. ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ತನಿಖಾ ತಂಡವನ್ನು ಪ್ರಶಂಸಾಪತ್ರ ನೀಡಿ ಗೌರವಿಸಿದರು.

    ಬೋರ್ ವೆಲ್ ಸ್ಟಾರ್ಟರ್ ಕಳ್ಳತನ ಪ್ರಕರಣ: ಮಧುಗಿರಿ ಪೊಲೀಸರಿಂದ ಬಂಧನ

    ತುಮಕೂರು: ಮಧುಗಿರಿ ತಾಲೂಕಿನ ಶೆಟ್ಟಹಳ್ಳಿ ಗ್ರಾಮದಲ್ಲಿ ಬೋರ್ವೆಲ್ ಸ್ಟಾರ್ಟರ್ ಹಾಗೂ ಸಿಸಿ ಕ್ಯಾಮೆರಾ ಕಳವು ಪ್ರಕರಣವನ್ನು ಮಧುಗಿರಿ ಪೊಲೀಸರು ಭೇದಿಸಿ ಓರ್ವ ಆರೋಪಿಯನ್ನು ಬಂಧಿಸಿ 12.25 ಲಕ್ಷ ರೂ. ಮೌಲ್ಯದ ಕಳವು ಮಾಲನ್ನು ವಶಪಡಿಸಿಕೊಂಡಿದ್ದಾರೆ. ಜುಲೈ 6ರಂದು ರಾತ್ರಿ ಶೆಟ್ಟಹಳ್ಳಿ ಗ್ರಾಮದ ಜಮೀನಿನಲ್ಲಿದ್ದ ಬೋರ್ವೆಲ್ಗೆ ಅಳವಡಿಸಿದ್ದ ಸ್ಟಾರ್ಟರ್, ರೋಟೇಟಿಂಗ್ ಸೈರನ್ ಹಾಗೂ ಸಿಸಿ ಕ್ಯಾಮೆರಾವನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಜುಲೈ 8ರಂದು ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ಕೆ.ವಿ. ಅವರ ಮಾರ್ಗದರ್ಶನದಲ್ಲಿ ರಚಿಸಲಾದ ವಿಶೇಷ ತಂಡ ಜುಲೈ 11ರಂದು ಮಹೇಶ್ ಎಂ.ಎ. (28), ಮುರಿತಿಮ್ಮನಹಳ್ಳಿ ಮೂಲದ ಆರೋಪಿಯನ್ನು ಬಂಧಿಸಿತು. ಆರೋಪಿಯಿಂದ ವಿವಿಧ ಕಂಪನಿಗಳ 66 ಬೋರ್ ವೆಲ್ ಸ್ಟಾರ್ಟರ್ಗಳು (9.50 ಲಕ್ಷ ರೂ.), ಒಂದು ರೋಟೇಟಿಂಗ್ ಸಿಸಿ ಕ್ಯಾಮೆರಾ (25 ಸಾವಿರ ರೂ.), ಒಂದು ಓಮ್ನಿ ಕಾರು (2 ಲಕ್ಷ ರೂ.) ಹಾಗೂ ಒಂದು ಹೀರೊ ಸ್ಪ್ಲೆಂಡರ್ ಪ್ಲಸ್ ಬೈಕ್ (50 ಸಾವಿರ ರೂ.) ಸೇರಿದಂತೆ ಒಟ್ಟು 12.25 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಸಿಪಿಐ ಹನುಮಂತರಾಯಪ್ಪ ಎಚ್.ಜಿ., ಪಿಎಸ್ಐ ಚಂದ್ರಶೇಖರ್ ಎಂ.ಎಸ್. ಹಾಗೂ ಸಿಬ್ಬಂದಿಗಳನ್ನು ಶ್ಲಾಘಿಸಿ ಪ್ರಶಂಸಾ ಪತ್ರ ನೀಡಿ ಗೌರವಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ

    September 20, 2026

    ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ

    September 20, 2026

    ಬರಪೀಡಿತ ಕ್ಷೇತ್ರದಲ್ಲಿ ಹೇಮಾವತಿ ನೀರಿಗಾಗಿ ಪಟ್ಟು: ದಸರಾ ಉತ್ಸವ ಬಹಿಷ್ಕರಿಸಿದ ಶಾಸಕ ಸುರೇಶ್ ಗೌಡ

    September 19, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ

    September 20, 2026

    ತುಮಕೂರು: ಜಿಲ್ಲಾಡಳಿತದ ವತಿಯಿಂದ ಆಚರಿಸಲಾಗುವ ತುಮಕೂರು ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 17ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು…

    ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ

    September 20, 2026

    ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ

    September 20, 2026

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.