nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್

    January 21, 2026

    ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ

    January 20, 2026

    ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿ 6 ತಿಂಗಳ ನಂತರ ವಿದ್ಯಾರ್ಥಿನಿ ಶಾಲೆಗೆ: ವಿದ್ಯಾರ್ಥಿನಿಯ ಬೇಡಿಕೆ ಏನು?

    January 20, 2026
    Facebook Twitter Instagram
    ಟ್ರೆಂಡಿಂಗ್
    • ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್
    • ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ
    • ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿ 6 ತಿಂಗಳ ನಂತರ ವಿದ್ಯಾರ್ಥಿನಿ ಶಾಲೆಗೆ: ವಿದ್ಯಾರ್ಥಿನಿಯ ಬೇಡಿಕೆ ಏನು?
    • ಕೆಪಿಎಸ್ ಮ್ಯಾಗ್ನೆಟ್ ನೀತಿಯ ವಿರುದ್ಧ ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿ, ಪೋಷಕರ ಪ್ರತಿಭಟನೆ
    • 8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!
    • ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಕಿಡಿ
    • ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ
    • ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಅವಾಚ್ಯ ಹೇಳಿಕೆ: ಡಿ.ಕೆ.ಸುರೇಶ್ ವಿರುದ್ಧ ಜೆಡಿಎಸ್ ಮುಖಂಡರಿಂದ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೋಮಣ್ಣ ಗೆಲುವಿಗೆ ಕಾರಣವಾದ ಬಿಜೆಪಿ—ಜೆಡಿಎಸ್ ಕಾರ್ಯಕರ್ತರಿಗೆ ಮಸಾಲ ಜಯರಾಂ ಅಭಿನಂದನೆ
    ರಾಜ್ಯ ಸುದ್ದಿ June 8, 2024

    ಸೋಮಣ್ಣ ಗೆಲುವಿಗೆ ಕಾರಣವಾದ ಬಿಜೆಪಿ—ಜೆಡಿಎಸ್ ಕಾರ್ಯಕರ್ತರಿಗೆ ಮಸಾಲ ಜಯರಾಂ ಅಭಿನಂದನೆ

    By adminJune 8, 2024No Comments2 Mins Read
    thuruvekere

    ತುರುವೇಕೆರೆ: “ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತುರುವೇಕೆರೆ ತಾಲೂಕಿನ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರುಗಳು ಹೋರಾಟ ಮಾಡಿ, 45,000 ಮತಗಳ ಅಂತರದಿಂದ ನಮ್ಮ ಬಿಜೆಪಿ ಪಕ್ಷದ ಅಭ್ಯರ್ಥಿ ವಿ. ಸೋಮಣ್ಣರನ್ನು ಗೆಲ್ಲಿಸಿದ್ದಾರೆ. ಎರಡು ಪಕ್ಷಗಳ ಮುಖಂಡರುಗಳಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ತುರುವೇಕೆರೆ ಕ್ಷೇತ್ರದ ಮಾಜಿ ಶಾಸಕ ಮಸಾಲ ಜಯರಾಮ್ ಹೇಳಿದರು.

    ತುರುವೇಕೆರೆ ತಾಲೂಕಿನ ಚಿಕ್ಕೋನಹಳ್ಳಿಯ ಗೇಟ್ ಬಳಿ ಇರುವ ತಮ್ಮ ಫಾರ್ಮ್ ಹೌಸ್ ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ದಿನ ಬಹಳ ಖುಷಿಯಾಗುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರುಗಳು ಮುಖಂಡರುಗಳು ನಾಯಕರುಗಳು ಒಗ್ಗಟ್ಟಿನ ಮಂತ್ರದಿಂದ ವಿ. ಸೋಮಣ್ಣನವರ ಗೆಲುವಿಗೆ ಕಾರಣಕರ್ತರಾಗಿದ್ದಾರೆ. ನಮ್ಮ ಅಭ್ಯರ್ಥಿಯು ಬಹಳ ಸಜ್ಜನಿಕೆಯ ರಾಜಕಾರಣಿ, ಎರಡು ಬಾರಿ ಪರಾಜಿತರಾಗಿದ್ದರು. ಅವರಿಗೆ ತುಮಕೂರು ಜಿಲ್ಲೆ ಮತ್ತು ತುರುವೇಕೆರೆ ಕ್ಷೇತ್ರ ರಾಜಕೀಯವಾಗಿ ಮರುಜನ್ಮ ನೀಡಿದೆ ಎಂದು ಅಭಿಪ್ರಾಯಪಟ್ಟರು.


    Provided by
    Provided by

    ಮುಂದಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಣ್ಣನವರು ಹಾಗೂ ಸೋಮಣ್ಣನವರು ಕೇಂದ್ರ ಸರ್ಕಾರದ ಸಚಿವರಾಗುವ ಸಂಭವ ಹೆಚ್ಚಾಗಿದೆ. ಅವರು ಸಚಿವರಾದರೆ ಈ ತಾಲೂಕನ್ನು ಅಭಿವೃದ್ಧಿ ಮಾಡಬೇಕು. ಹೇಮಾವತಿ ನೀರಿನ ಹೋರಾಟಕ್ಕೆ ಭದ್ರವಾಗಿ ನಿಂತು ಹೋರಾಟ ಮಾಡಬೇಕು ಎಂದು ಅವರು ಇದೇ ವೇಳೆ ಮನವಿ ಮಾಡಿದರು.

    ಅನೇಕ ಅಭಿವೃದ್ಧಿ ಯೋಜನೆಗಳನ್ನು ತಾಲೂಕಿಗೆ ತಂದು ಅಭಿವೃದ್ಧಿ ಎಂದು ನಾನು ಅವರನ್ನ ಒತ್ತಾಯಿಸುತ್ತೇನೆ. ತಮಗೆಲ್ಲರಿಗೂ ಗೊತ್ತಿದ್ದ ಹಾಗೆ ಅವರು ಸುಖ–ಸುಮ್ಮನೆ ಕುಳಿತುಕೊಳ್ಳುವ ವ್ಯಕ್ತಿಯಲ್ಲ, ತಾವುಗಳೆಲ್ಲ ನೋಡಿರಬಹುದು ವಿಜಯನಗರದಲ್ಲಿ ಯಾವ ರೀತಿಯಲ್ಲಿ ಅಭಿವೃದ್ಧಿ ಮಾಡಿದ್ದಾರೆ ಎಂದು. ಅದೇ ರೀತಿಯಲ್ಲಿಯೇ ನಮ್ಮ ಕ್ಷೇತ್ರದಲ್ಲೂ ಅಭಿವೃದ್ಧಿಪಡಿಸಬೇಕು. ಅಭಿವೃದ್ಧಿ ಮಾಡುತ್ತಾರೆಂಬ ಆಶಾಭಾವನೆ ನಮ್ಮಲ್ಲಿ ಇದೆ. ನಾವು ಕೂಡ ಅವರ ಜೊತೆ ಕೈ ಜೋಡಿಸುತ್ತೇವೆ. ನೀರಾವರಿ, ರಸ್ತೆ,ಕೈಗಾರಿಕೆ, ಉದ್ಯೋಗ ಮತ್ತು ಬೇರೆ ಬೇರೆ ಸಮುದಾಯಗಳ ಅಭಿವೃದ್ಧಿ ಕೆಲಸ ಮಾಡಬೇಕು, ಎಂದು ಅವರಲ್ಲಿ ಕೇಳಿಕೊಳ್ಳುತ್ತೇನೆ ಎಂದರು.

    ಮತ್ತೊಮ್ಮೆ ಕ್ಷೇತ್ರದ ಮತದಾರರಿಗೆ ನಾಗರಿಕರಿಗೆ ಕಾರ್ಯಕರ್ತರಿಗೆ ಮಹಿಳೆಯರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಚುನಾವಣೆಯಲ್ಲಿ ಮಹಿಳೆಯರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ, ಗ್ಯಾರಂಟಿಗಳಿಗೆ ಒಳಗಾಗದೆ ಪುರುಷರಷ್ಟೇ ಸಮಾನವಾಗಿ ಮತ ನೀಡಿದ್ದಾರೆ ಎಂದರು.

    ಕ್ಷೇತ್ರದ 200 ಮತಗಟ್ಟೆಗಳಲ್ಲಿ ಬಿಜೆಪಿ ಲೀಡಾಗಿದೆ. ಅಂಚೆ ಮತ ಸೇರಿ 45,000 ಮತಗಳ ಅಂತರ ನೀಡಿದ್ದಾರೆ. ಸೋಮಣ್ಣನವರಿಗೆ ಅತಿ ಹೆಚ್ಚು ಅಂತರದಿಂದ ಗೆಲ್ಲಿಸಿಕೊಳ್ಳುತ್ತೇವೆ ಎಂಬ ಮಾತನ್ನು ಕೊಟ್ಟಿದ್ದೆವು. ಅದರಂತೆ ಮೈತ್ರಿ ಧರ್ಮ ಪಾಲನೆ ಮಾಡಿ ನಾವು ಅಧಿಕ ಅಂತರದಿಂದ ಗೆಲ್ಲಿಸಿಕೊಂಡಿದ್ದೇವೆ. ಜಿಲ್ಲೆಗೆ ಹೊಸ, ಹೊಸ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಹೆಚ್ಚು ಒತ್ತು ಕೊಡಬೇಕು ಎಂದು ಮನವಿ ಮಾಡುತ್ತೇನೆ” ಎಂದರು.

    ಈ ಸಂದರ್ಭದಲ್ಲಿ ಮುಖಂಡರಾದ ವಿ.ಬಿ. ಸುರೇಶ್, ಗುತ್ತಿಗೆದಾರ ಸಿದ್ದಲಿಂಗಯ್ಯ, ಪಟ್ಟಣ ಪಂಚಾಯಿತಿ ಮಾಜಿ ಮತ್ತು ಹಾಲಿ ಸದಸ್ಯ ಟಿ ಕೆ ಚಿದಾನಂದ್, ಗುತ್ತಿಗೆದಾರ ಕಾಳಂಜಿಹಳ್ಳಿ ಸೋಮಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್

    January 21, 2026

    ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಕಿಡಿ

    January 20, 2026

    ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ

    January 20, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್

    January 21, 2026

    ಗದಗ: ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ರಾಜ್ಯ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ…

    ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ

    January 20, 2026

    ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿ 6 ತಿಂಗಳ ನಂತರ ವಿದ್ಯಾರ್ಥಿನಿ ಶಾಲೆಗೆ: ವಿದ್ಯಾರ್ಥಿನಿಯ ಬೇಡಿಕೆ ಏನು?

    January 20, 2026

    ಕೆಪಿಎಸ್ ಮ್ಯಾಗ್ನೆಟ್ ನೀತಿಯ ವಿರುದ್ಧ ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿ, ಪೋಷಕರ ಪ್ರತಿಭಟನೆ

    January 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.