ತುಮಕೂರು: ಜಿಲ್ಲೆಯ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಗುಬ್ಬಿ ತಾಲ್ಲೂಕಿನ ಗದ್ದೆಹಳ್ಳಿ ಗ್ರಾಮದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಧೀನದ ಇಲಾಖೆ ಕೆ.ಆರ್.ಐ.ಡಿ.ಎಲ್ ವತಿಯಿಂದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ತುರುವೇಕೆರೆ ಶಾಸಕ ಮಸಾಲೆ ಜಯರಾಂ ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ಜನತೆಗೆ ಚುನಾವಣೆಗೂ ಮೊದಲು ಕೊಟ್ಟ ಮಾತಿನಂತೆಯೇ ಈ ಭಾಗಕ್ಕೆ ಸಾಕಷ್ಟು ಅಭಿವೃದ್ಧಿ ಕಾಮಗಾರಿ ಮಾಡಲಾಗಿದ್ದು, ಸಿ.ಎಸ್.ಪುರ ಹೋಬಳಿಯನ್ನು ಮಾದರಿ ಹೋಬಳಿಯಾಗಿ ಮಾಡುವಲ್ಲಿ ಶ್ರಮಿಸಿದ್ದೇನೆ ಎಂದರು.
ಈ ಭಾಗದ ಎಲ್ಲಾ ಕೆರೆಗಳು ಕಟ್ಟೆಗಳಿಗೆ ಹೇಮಾವತಿ ನೀರು ಹರಿಸುವ ಮೂಲಕ ಈ ಭಾಗದ ಜನತೆಯ ಋಣ ತೀರಿಸಲು ಬದ್ದನಾಗಿದ್ದು, ಈಗಾಗಲೇ ಶೇ.80ರಷ್ಟು ಭಾಗ ಎಲ್ಲಾ ಅಭಿವೃದ್ಧಿ ಕಾಮಗಾರಿ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಅನುದಾನ ತರುವ ಮೂಲಕ, ಕ್ಷೇತ್ರವನ್ನು ಮಾದರಿ ಕ್ಷೇತ್ರ ವಾಗಿ ಮಾಡಲಾಗುತ್ತದೆ ಎಂದರು.
ಈ ಗದ್ದೆಹಳ್ಳಿಯಲ್ಲಿ ಹೆಚ್ಚು ಜನಸಂಖ್ಯೆ ಹೊಂದಿರುವುದರಿಂದ ಗ್ರಾಮದ ಅಭಿವೃದ್ಧಿ ದೃಷ್ಟಿಯಿಂದ ನವಗ್ರಾಮ ಯೋಜನೆಯಡಿ ಗದ್ದೆಹಳ್ಳಿ ಗ್ರಾಮವನ್ನು ಆಯ್ಕೆ ಮಾಡಿದ್ದು ಹೆಚ್ಚಿನ ಅನುದಾನ ಈ ಗ್ರಾಮಕ್ಕೆ ದೊರೆಯಲಿದ್ದು, ಈ ಗ್ರಾಮ ಸಂಪೂರ್ಣ ಅಭಿವೃದ್ಧಿ ಯಾಗಲಿದೆ ಎಂದು ಭರವಸೆ ನೀಡಿದರು.
ವರದಿ: ಮಂಜುನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB