nammatumakuru

    Subscribe to Updates

    Get the latest creative news from FooBar about art, design and business.

    What's Hot

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ

    August 21, 2026

    ತುಮಕೂರು: ಸೆ.4ರಂದು ಶ್ರೀ ಕೃಷ್ಣ ಜಯಂತಿ: ಮೆರವಣಿಗೆ ನಡೆಸಲು ಎಡಿಸಿ ಸೂಚನೆ

    August 21, 2026
    Facebook Twitter Instagram
    ಟ್ರೆಂಡಿಂಗ್
    • ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ
    • ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ
    • ತುಮಕೂರು: ಸೆ.4ರಂದು ಶ್ರೀ ಕೃಷ್ಣ ಜಯಂತಿ: ಮೆರವಣಿಗೆ ನಡೆಸಲು ಎಡಿಸಿ ಸೂಚನೆ
    • ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಹೇಯ ಕೃತ್ಯ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ
    • ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ
    • ತುಮಕೂರು: ಆ.23 ರಿಂದ ಪರಿಸರ ಜಾಗೃತಿ ಕುರಿತು ಮೂರು ದಿನಗಳ ಕಾರ್ಯಾಗಾರ
    • ನೈಸ್ ರಸ್ತೆ ಟೋಲ್ ವಿವಾದ: ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಟೋಲ್ ಸಿಬ್ಬಂದಿ–ವಾಹನ ಸವಾರರ ನಡುವೆ ಕಿತ್ತಾಟ
    • ನಕಲಿ ದಾಖಲೆ ಸೃಷ್ಟಿಸಿ ಜಮೀನು ನೋಂದಣಿ: ಎಫ್.ಡಿ.ಎ.ವಿರುದ್ಧ ಐದು ಪ್ರಕರಣ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರಿನಲ್ಲಿ ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಸೇಷನ್ ವತಿಯಿಂದ ಬೃಹತ್ ಪ್ರತಿಭಟನೆ
    ತಿಪಟೂರು July 29, 2024

    ತಿಪಟೂರಿನಲ್ಲಿ ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಸೇಷನ್ ವತಿಯಿಂದ ಬೃಹತ್ ಪ್ರತಿಭಟನೆ

    By adminJuly 29, 2024No Comments2 Mins Read
    tipaturu

    ತಿಪಟೂರು: ಕರ್ನಾಟಕ ಟ್ಯಾಕ್ಸಿ ಡ್ರೈವರ್  ಆರ್ಗನೈಸೇಷನ್  ಮತ್ತು ಸಮಾನ ಮನಸ್ಕ ಪ್ರವಾಸಿ ವಾಹನ ಸಂಘಟನೆಗಳ ವತಿಯಿಂದ, ಪ್ರವಾಸಿ ವಾಹನಗಳಿಗೆ ಅವೈಜ್ಞಾನಿಕ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆ ಆದೇಶದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು.

    ನಗರದ ಡಾ. ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಸಹ ಕಾರ್ಯದರ್ಶಿ ಯೋಗೇಶ್, ಕೇಂದ್ರ ಸಾರಿಗೆ ಇಲಾಖೆಯ ಆದೇಶದಂತೆ, ರಾಜ್ಯ ಸಾರಿಗೆ ಇಲಾಖೆಯು ನೀಡಿರುವ ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿ.ಪಿ.ಆರ್.ಎಸ್ ಎಂಬ ಅವೈಜ್ಞಾನಿಕವಾದ ಸಾಧನವನ್ನು ಅಳವಡಿಸಲು ನೀಡಿರುವ ಆದೇಶ ತುಂಬಾ ತ್ರಾಸದಾಯಕವಾಗಿದ್ದು, ರಾಜ್ಯದ ಎಲ್ಲಾ ವಾಣಿಜ್ಯ ವಾಹನಗಳು,ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕ– ಮಾಲೀಕರುಗಳಿಗೆ ಇದರಿಂದ ತುಂಬಾ ತೊಂದರೆಯಾಗಲಿದ್ದು, ಬಾರಿ ಸಂಕಷ್ಟದಿಂದ ಜೀವನ ನಡೆಸುತ್ತಿದ್ದೇವೆ. ಈ ಆದೇಶದಿಂದ ಮತ್ತಷ್ಟು ನಾವುಗಳು ಬೀದಿಗೆ ಬರಲಿದ್ದೇವೆ ಎಂದು ತಿಳಿಸಿದರು.

    ರಾಜ್ಯ ಜಂಟಿ ಕಾರ್ಯದರ್ಶಿ ಮಹಮ್ಮದ್ ಹುಸೇನ್ ಮಾತನಾಡಿ, ದುಬಾರಿ ತೆರಿಗೆ, ಸ್ಪೀಡ್ ಗವರ್ನರ್ ಬಾಡಿಗೆ ಮಾಡುವ ಖಾಸಗಿ ವಾಹನಗಳು ಹಾಗೂ ದುಬಾರಿ ಇನ್ಸೂರೆನ್ಸ್ ಮುಂತಾದ ಸರ್ಕಾರಿ ವೆಚ್ಚಗಳಿಂದ ಹೈರಾಣುವಾಗಿರುವಂತಹ  ರಾಜ್ಯದ ಎಲ್ಲಾ ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕ- ಮಾಲೀಕರಿಗೆ ನೆರವನ್ನು ನೀಡುವ ಬದಲು, ನಮ್ಮ ಉದ್ಯೋಗಕ್ಕೆ ಪೂರಕವಾಗಿರುವಂತಹ  ಅನೇಕ ಕಾಯ್ದೆಗಳು ಇದ್ದರೂ ಕೂಡ,ಅವುಗಳನ್ನು ಅನುಷ್ಠಾನಗೊಳಿಸದೆ ಕೇವಲ ತಮ್ಮ ಸ್ವಾರ್ಥಕ್ಕೆ ರಾಜ್ಯದ ಚಾಲಕ-ಮಾಲೀಕರ ಮೇಲೆ ಗಾಯದ ಮೇಲೆ ಬರೆ ಎಳೆಯುತ್ತಿದ್ದಾರೆ.ಈ ಆದೇಶವನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯದೆ ಇದ್ದಲ್ಲಿ ಮುಂದಿನ ದಿನದಂದು ರಾಜ್ಯ ಮತ್ತು ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಸಿದರು.

    ಪ್ರತಿಭಟನೆಯಲ್ಲಿ ತಾಲೂಕು ಘಟಕದ ಪದಾಧಿಕಾರಿಗಳಾದ ಸಿದ್ದೇಶ್, ಪ್ರಮೋದ್, ದೀಪು ಪ್ರವೀಣ್, ರೋಹಿತ್ ಧ್ರುವರಾಜ್, ಹರೀಶ್, ರಮೇಶ್, ಸಂತೋಷ್ ನಾಗರಾಜ್, ಕುಮಾರ ಸ್ವಾಮಿ ಮತ್ತು ಮೋಹನ್ ಸೇರಿದಂತೆ ಸಂಘಟನೆಯ ನೂರಾರು ಪದಾಧಿಕಾರಿಗಳು, ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕ ಹಾಗೂ ಮಾಲೀಕರುಗಳು ಹಾಜರಿದ್ದರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ನಾರಾಯಣ ದಾಸ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

    August 20, 2026

    ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಪೃಶ್ಯತೆ ಆಚರಣೆ ವಿರೋಧಿಸಿ ಛಲವಾದಿ ಮಹಾಸಭಾ ಪ್ರತಿಭಟನೆ

    August 19, 2026

    ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.

    August 15, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    ಕೊರಟಗೆರೆ: ತಾಲ್ಲೂಕಿನ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಅಮ್ಮನವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬಕ್ಕೆ ದೂರದ ಊರುಗಳಿಂದ ಸಾವಿರಾರು ಭಕ್ತರು ಆಗಮಿಸಿ ಅಮ್ಮನವರ…

    ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ

    August 21, 2026

    ತುಮಕೂರು: ಸೆ.4ರಂದು ಶ್ರೀ ಕೃಷ್ಣ ಜಯಂತಿ: ಮೆರವಣಿಗೆ ನಡೆಸಲು ಎಡಿಸಿ ಸೂಚನೆ

    August 21, 2026

    ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಹೇಯ ಕೃತ್ಯ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ

    August 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.