ಕೊರಟಗೆರೆ: ತಾಲ್ಲೂಕಿನ ಮತ್ತೋರ್ವ ಭ್ರಷ್ಟ ಅಧಿಕಾರಿಕಾರಿ ಎಸಿಬಿ ಬಲೆಗೆ ಬಿದ್ದಿದ್ದು, ದಿನದಿಂದ ದಿನಕ್ಕೆ ಕೊರಟಗೆರೆ ಕ್ಷೇತ್ರದಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಆಡಳಿತ ವೈಫಲ್ಯವೇ ಕಾರಣ ಎಂದು ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಆಕ್ರೋಶ ಹೊರ ಹಾಕಿದ್ದಾರೆ.
ಈ ಬಗ್ಗೆ ಮಾತನಾಡಿದ ಜೆಟ್ಟಿ ಅಗ್ರಹಾರ ನಾಗರಾಜು, ಜಿಲ್ಲೆಯಾದ್ಯಂತ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಅರಕೆರೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀಧರ್ ಎಸಿಬಿ ಬಲೆಗೆ ಬಿದ್ದು ಕೆಲವೇ ದಿನಗಳಲ್ಲಿ ಕೊರಟಗೆರೆ ತಾಲ್ಲೂಕು ಚನ್ನರಾಯನದುರ್ಗ ಹೋಬಳಿ ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ PDO ಶ್ರೀರಂಗಯ್ಯ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದಾನೆ.
ಸೋಮಶೇಖರ್ ಎಂಬುವ ವ್ಯಕ್ತಿ ತನ್ನ ಕುಟುಂಬದ ಹೆಸರಿನಲ್ಲಿ ಇದ್ದ ಖಾತೆ ಬದಲಾವಣೆ ಮಾಡಿ ಈ ಸ್ವತ್ತು ಮಾಡಿಸಿಕೊಳ್ಳಲು ಪಂಚಾಯಿತಿ ಭೇಟಿ ನೀಡಿ ಅಭಿವೃದ್ಧಿ ಅಧಿಕಾರಿ ಶ್ರೀರಂಗಯ್ಯ ಅವರನ್ನು ಸಂಪರ್ಕಿಸಿದಾಗ 6,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಇದಲ್ಲದೇ 3,500 ಮುಂಗಡವಾಗಿ ಪಡೆದು 2,500 ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಈ ವೇಳೆ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ.
ಸುಮಾರು ಹದಿನೈದು ದಿನಗಳಿಂದ ಎಸಿಬಿ ಅಧಿಕಾರಿಗಳು ಹದ್ದಿನ ಕಣ್ಣಿಟ್ಟು ಕಾಯ್ದು ಆರೋಪಿ ಶ್ರೀರಂಗಯ್ಯನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾರ್ವಜನಿಕ ವಲಯದಲ್ಲಿ ಜಿಲ್ಲಾ ಪಂಚಾಯತ್ CEO ಅಧಿಕಾರದ ವೈಫಲ್ಯ ದ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಗೆ ಕಾರಣವಾಗಿದೆ. ರೆವಿನ್ಯೂ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭ್ರಷ್ಟಾಚಾರ ಹೆಚ್ಚುತ್ತಲೇ ಇದೆ. ವಿದ್ಯಾವಂತ ಯುವಕರು ಭ್ರಷ್ಟ ವ್ಯವಸ್ಥೆಯ ವಿರುದ್ಧ ಹೋರಾಟಕ್ಕೆ ಮುಂದಾಗಬೇಕು ಯುವಕರಿಂದ ಮಾತ್ರ ಬದಲಾವಣೆ ಸಾಧ್ಯ ಎಂದು ನಾಗರಾಜು ಹೇಳಿದರು.
ಅಗ್ರಹಾರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಎಸ್ ಸಿ ಪಿ ಟಿ ಎಸ್ ಪಿ ಯೋಜನೆ ಕಾಮಗಾರಿಗಳನ್ನು ದುರುಪಯೋಗ ಮಾಡಿಕೊಂಡು ಎಸಿಬಿ ಬಲೆಗೆ ಸಿಕ್ಕಿಬಿದ್ದು, ಆರೋಪಿ ಆಗಿರುವ ಮಂಜಮ್ಮ ಅವರ ಮೇಲೆ ಜಿಲ್ಲಾ ಪಂಚಾಯತ್ ಸಿ ಇ ಓ ಮೂರು ಜನ ತನಿಖಾ ಅಧಿಕಾರಿಗಳನ್ನು ನೇಮಿಸಿದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಿದ್ದರು.
ಜಿಲ್ಲಾ ಪಂಚಾಯತ್ ಸಿ ಇ ಓ ಮಂಜಮ್ಮ ನವರ ಮೇಲೆ ಎಸ್ ಸಿ, ಎಸ್ ಟಿ ಆಕ್ಟ್ ನ ಅಡಿ ಕ್ರಮ ಕೈಗೊಂಡಿಲ್ಲ. ಪಂಚಾಯತ್ ಗಳಲ್ಲಿ ಸಾಲು ಸಾಲು ಅಕ್ರಮಗಳು ನಡೆಯುತ್ತಿದ್ದರು ಸಿ ಇ ಓ ಮೇಡಂ ಮೌನವಾಗಿದ್ದಾರೆ. ಇಂತಹಾ ಭ್ರಷ್ಟ ಅಧಿಕಾರಿಗಳು ಬಡವರಿಂದ ಹಣ ಪಿಕುತ್ತಲೇ ಇದ್ದಾರೆ. ಪ್ರತಿ ಪಂಚಾಯಿತಿಗೆ ಕುದ್ದು ಭೇಟಿ ನೀಡಿ ಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿದ್ದಾರೆ .
ಸುಮಾರು ವರ್ಷಗಳಿಂದ ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡುತ್ತಿರುವ ಭ್ರಷ್ಟಾಚಾರ ವಿರೋಧಿ ವೇದಿಕೆ ಸದಸ್ಯರು ಮತ್ತು ಎಸಿಬಿ ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆಗೆ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಡಿವೈಎಸ್ಪಿ ಮಲ್ಲಿಕಾರ್ಜುನ್ ಚುಕ್ಕಿ, ಇನ್ಸ್ ಪೆಕ್ಟರ್ ವಿರೇಂದ್ರ ವಿಜಯಲಕ್ಷ್ಮಿ, ನರಸಿಂಹರಾಜು, ರಾಜಣ್ಣ, ಚಂದ್ರು, ಶಿವಣ್ಣ, ಹೋರಾಟಗಾರಾದ ಜೆಟ್ಟಿ ಅಗ್ರಹಾರ ನಾಗರಾಜು, ನವೀನ್ ಕುಮಾರ್, ಅರುಣ್ ಕುಮಾರ್, ನಯಾಜ್ ಅಹಮದ್, ಭ್ರಷ್ಟಾಚಾರ ವಿರೋಧಿ ವೇದಿಕೆ ತಂಡ ಸೇರಿದಂತೆ ಇನ್ನಿತರರಿದ್ದರು.
ವರದಿ: ಟೈಗರ್ ನಾಗ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz