nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
    • ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
    • ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
    • ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
    • ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲ್ಪತರು ನಾಡಿನಲ್ಲಿ ನಡೆಯುವ ಪತ್ರಕರ್ತರ ಸಮ್ಮೇಳನ ಅರ್ಥಗರ್ಭಿತವಾಗಿರಲಿ: ಶಿವಾನಂದ ತಗಡೂರು
    ತುಮಕೂರು January 12, 2025

    ಕಲ್ಪತರು ನಾಡಿನಲ್ಲಿ ನಡೆಯುವ ಪತ್ರಕರ್ತರ ಸಮ್ಮೇಳನ ಅರ್ಥಗರ್ಭಿತವಾಗಿರಲಿ: ಶಿವಾನಂದ ತಗಡೂರು

    By adminJanuary 12, 2025No Comments2 Mins Read
    journalists

    ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ತುಮಕೂರು ಇವರ ವತಿಯಿಂದ ಚೊಚ್ಚಲ ಬಾರಿಗೆ ಕಲ್ಪತರು ನಗರಿ ತುಮಕೂರಿನಲ್ಲಿ ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನವನ್ನು ನಡೆಸಲು ನಿಶ್ಚಯಿಸಿದ್ದು, ಈಗಾಗಲೇ ನಿರೀಕ್ಷೆಗೂ ಮೀರಿದ ಸಿದ್ಧತೆಗಳನ್ನ ಕೈಗೊಳ್ಳಲಾಗಿದ್ದು ಕಲ್ಪತರು ನಾಡಿನಲ್ಲಿ ನಡೆಯುವರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಅರ್ಥಗರ್ಭಿತವಾಗಿ ನಡೆಯಬೇಕಿದೆ ಎಂದುಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.

    ನಗರದಎಸ್‌ ಎಸ್‌ ಐಟಿಕಾಲೇಜುಕ್ಯಾಂಪಸ್‌ ಆವರಣದ ಸ್ಟೇಪ್ ಬಿಲ್ಡಿಂಗ್ ಸಭಾಂಗಣದಲ್ಲಿ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಕುರಿತಾಗಿತುಮಕೂರು ಜಿಲ್ಲಾ ಘಟಕದ ವಿವಿಧ ಉಪ ಸಮಿತಿಗಳ ಸಿದ್ಧತೆ ಮತ್ತು ಕಾರ್ಯವೈಕರಿಗಳ ಬಗ್ಗೆ ಚರ್ಚೆ ನಡೆಸಲು ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು ಶ್ರೇಷ್ಠತೆಗಳಲ್ಲಿ ವಿಶೇಷತೆ ಎನಿಸಿರುವ ತುಮಕೂರು ಜಿಲ್ಲೆಯು ಶೈಕ್ಷಣಿಕ, ಕಲೆ, ಸಾಹಿತ್ಯ, ರಂಗಭೂಮಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತನ್ನದೇ ಆದ ಸಾಧನೆಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಅದೇ ನಿಟ್ಟಿನಲ್ಲಿ ಈ ಬಾರಿ ಇಲ್ಲಿ ನಡೆಯುವ 39ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವೂ ಕೂಡ ಇತಿಹಾಸದ ಮೈಲಿಗಲ್ಲು ಆಗಲಿದ್ದು ಅದಕ್ಕೆ ತಕ್ಕಂತಹ ಸಿದ್ಧತೆಗಳನ್ನು ಜಿಲ್ಲಾ ಸಂಘಟನೆಕೈಗೊಳ್ಳಬೇಕಿದೆ ಎಂದು ತಿಳಿಸಿದರು.


    Provided by
    Provided by

    ಉಪಸಮಿತಿಗಳ ಕಾರ್ಯ ಚಟುವಟಿಕೆಗಳು ತೃಪ್ತಿತರುವಂತೆ ಇರಬೇಕು ಕಳೆದ ಬಾರಿ ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಸಮ್ಮೇಳನಕ್ಕೂ ಮೀರಿದ ವಿಶೇಷತೆಗಳನ್ನ ಈ ಬಾರಿ ಕಾಣಲಿದ್ದೇವೆ ಇದಕ್ಕೆಅಧ್ಯಕ್ಷರು ಸೇರಿದಂತೆ ಸಂಘದ ಪದಾಧಿಕಾರಿಗಳು ನಿರೀಕ್ಷೆ ಮೀರಿ ಶ್ರಮ ಪಡುತ್ತಿದ್ದಾರೆ. ಡಾ.ಜಿ.ಪರಮೇಶ್ವರ್‌ ಅವರ ಆಶಯದಂತೆ ಅವರ ಮಾರ್ಗದರ್ಶನದಲ್ಲಿಎಸ್‌ ಎಸ್ ಐ ಟಿ ಕ್ಯಾಂಪಸ್‌ಆವರಣದಲ್ಲಿಎರಡು ದಿನಗಳ ಕಾಲ ಸಂಭ್ರಮದ ವಾತಾವರಣ ಸೃಷ್ಟಿಸಲಿದ್ದಾರೆ.  ಈ ಸಮ್ಮೇಳನ ಅನೇಕ ಚರ್ಚೆಗಳಿಗೆ ಕಾರಣವಾಗಲಿದೆ, ವಿವಿಧ ಗೋಷ್ಠಿಗಳು ಗಮನ ಸೆಳೆಯಲಿವೆ ಮುಖ್ಯವಾಗಿ ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಶೇಷ ವೈಶಿಷ್ಟತೆಯಿಂದ ಕೂಡಿವೆ. ಈ ಬಾರಿ ತುಮಕೂರು ಬ್ರಾಂಡ್ ಹೆಸರಿನಲ್ಲಿ ಸಾಧನೆಗೈದ ವಿವಿಧ ಸಾಧಕರಿಗಳಿಗೆ ಪ್ರಶಸ್ತಿ ಸನ್ಮಾನ ಮಾಡಲಾಗುತ್ತದೆ. ಪತ್ರಕರ್ತರಕ್ರೀಡಾಕೂಟವನ್ನು ಯಶಸ್ವಿಗೊಳಿಸಿದ ಜಿಲ್ಲಾ ಸಂಘಟನೆ ಸಮ್ಮೇಳನವನ್ನ ವಿಶೇಷವಾಗಿ ನಡೆಸಿಕೊಡಲಿದೆ ಎಂದು ಭಾವಿಸಿದ್ದೇನೆ ಎಂದು ತಿಳಿಸಿದರು.

    ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚೀನಿ ಪುರುಷೋತ್ತಮ್‌ ಅವರು ಮಾತನಾಡಿ, ತುಮಕೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ನಡೆಯುವ ಐತಿಹಾಸಿಕ 39ನೇ ಸಮ್ಮೇಳನದ ಯಶಸ್ವಿಗೆ ಉಪ ಸಮಿತಿಯ ಅಧ್ಯಕ್ಷರು ಸದಸ್ಯರು ಪದಾಧಿಕಾರಿಗಳು ಕಾರಣರಾಗಿದ್ದು ನಮ್ಮರಾಜ್ಯಾಧ್ಯಕ್ಷರ ಅಪೇಕ್ಷೆಯಂತೆ ಈಗಾಗಲೇ ನಿರೀಕ್ಷೆಗೂ ಮೀರಿದ ಸಿದ್ಧತೆಗಳನ್ನ ಕೈಗೊಳ್ಳಲಾಗಿದೆ ಈ ಬಾರಿಕೈಗಾರಿಕೆ ಕೃಷಿ ಪತ್ರಿಕೋದ್ಯಮ ಸಮಾಜ ಸೇವೆ ಸೇರಿದಂತೆ ವಿವಿಧ ಹಂತಗಳಲ್ಲಿ ಸಾಧನೆಗೈದ ಸಾಧಕರುಗಳಿಗೆ ಕಲ್ಪತರುರತ್ನ ಎಂಬ ಪ್ರಶಸ್ತಿಯನ್ನು ಸಮ್ಮೇಳನದ ಭಾಗವಾಗಿ ನೀಡಲಾಗುತ್ತದೆ, ರಾಜ್ಯದ ಮೂಲೆ ಮೂಲೆಗಳಿಂದ ಬರುವ ಪತ್ರಕರ್ತರುಗಳಿಗೆ ಮತ್ತು ಸಾರ್ವಜನಿಕರುಗಳಿಗೆ ಊಟ ವಸತಿ ಮನರಂಜನೆ ಚರ್ಚಾಗೋಷ್ಠಿ, ಸೇರಿದಂತೆ ಇತರೆ ವಿಚಾರಗಳಲ್ಲಿ ಯಾವುದೇ ರೀತಿಯ ಗೊಂದಲವಾಗದಂತೆ ನಮ್ಮ ಜಿಲ್ಲಾ ಸಂಘದ ಸದಸ್ಯರುಗಳು ಅವರ ಸೇವೆ ಮಾಡಲು ಕಟಿಬದ್ಧರಾಗಿ ನಿಂತಿದ್ದಾರೆ. ಟೌನ್ ಹಾಲ್ ವೃತ್ತದಿಂದ ಎಸ್‌ ಎಸ್ ಐ ಟಿ ಕ್ಯಾಂಪಸ್‌ ಅವರಣಕ್ಕೆಆಗಮಿಸಲಿರುವ ಮೆರವಣಿಗೆ ವಿಶೇಷತೆಯಿಂದಕೂಡಿದೆ. ಜನವರಿ 18 ಶನಿವಾರದ ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯದೆ ಸೆಳೆಯಲಿದೆ, ಖ್ಯಾತ ಗಾಯಕಿ ಶಮಿತಾ ಮಲ್ನಾಡ್‌ ಅವರಿಂದ, ಮ್ಯೂಸಿಕಲ್ ನೈಟ್ಸ್ ಕಾರ್ಯಕ್ರಮ ನಡೆಯಲಿದ್ದು, ಇದೇ ರೀತಿಯಾಗಿ ವಿವಿಧ ಕಾರ್ಯಕ್ರಮಗಳು ವಸ್ತು ಪ್ರದರ್ಶನ ಸಮ್ಮೇಳನದ ಪ್ರಮುಖ ಆಕರ್ಷಣೆಯಾಗಲಿವೆ ಎಂದು ತಿಳಿಸಿದರು.

    ಸಂದರ್ಭದಲ್ಲಿ ವಸತಿ, ಊಟ, ಸಾರಿಗೆ, ಪ್ರಚಾರ, ಸ್ವಯಂ ಸೇವೆ, ಸಾಂಸ್ಕೃತಿಕ, ನೋಂದಣಿ ಸೇರಿದಂತೆ ವಿವಿಧ ಉಪಸಮಿತಿಗಳ ಅಧ್ಯಕ್ಷರುಗಳು ತಾವು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಸಭೆಗೆ ತಿಳಿಸಿಕೊಟ್ಟರು, ಈ ವೇಳೆ ಕರ್ನಾಟಕ ರಾಜ್ಯಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಭವಾನಿಸಿಂಗ್, ಪುಂಡಲಿಕ ಬಾಳೋಜಿ, ಪ್ರಧಾನ ಕಾರ್ಯದರ್ಶಿಗಳಾದ ಜಿ.ಸಿ.ಲೋಕೇಶ್, ರಾಜ್ಯಛಾಯಾಗ್ರಾಹಕ ಶರಣ ಪ್ರಕಾಶ್, ಕಲ್ಬುರ್ಗಿ ಸಂಘದ ಉಪಾಧ್ಯಕ್ಷ ದೇವೇಂದ್ರಪ್ಪ, ತುಮಕೂರು ಕಾನಿಪ ಉಪಾಧ್ಯಕ್ಷರಾದಚಿಕ್ಕಿರಪ್ಪ, ತಿಪಟೂರುಕೃಷ್ಣ, ಪ್ರಧಾನ ಕಾರ್ಯದರ್ಶಿ ರಘುರಾಮ್, ರಾಷ್ಟ್ರೀಯ ಮಂಡಳಿ ಸದಸ್ಯರುಗಳಾದ ಸಿದ್ದಲಿಂಗಪ್ಪ, ಅನ್ನು ಫೋಟೋ ಫ್ಲಾಶ್ ಶಾಂತರಾಜು, ಟಿ.ಎನ್.ಮಧುಕರ್‌ ಜಿಲ್ಲಾಘಟಕದ ಪದಾಧಿಕಾರಿಗಳು ವಿವಿಧ ಉಪ ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ

    June 6, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಸಿರಾ: ಸಿರಾ ಕ್ಷೇತ್ರದ ಶಾಸಕರಾದ ಟಿ.ಬಿ. ಜಯಚಂದ್ರ ಅವರು ನುರಿತ ರಾಜಕೀಯ ಮುತ್ಸದ್ದಿಯಷ್ಟೇ ಅಲ್ಲದೆ ಕಳೆದ 50 ವರ್ಷಗಳ ರಾಜಕೀಯ…

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.