ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮಪಂಚಾಯ್ತಿಯಲ್ಲಿ ಗ್ರಾಮಸಭೆ ಹಮ್ಮಿಕೊಂಡಿದ್ದು, ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ರಾದ ಮಂಗಳಗೌರಮ್ಮ ವಹಿಸಿದ್ದರು.
ಕಾರ್ಯದರ್ಶಿ ಸುರೇಶ್ ಕಾರ್ಯಕ್ರಮಕ್ಕೆ ಅತಿಥಿಗಳನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಹಾಜರಿದ್ದು, ತಮ್ಮ ಇಲಾಖೆಯಲ್ಲಿ ಬರುವ ಅನುಕೂಲಗಳ ಹಾಗೂ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ನರೇಗಾ ಯೋಜನೆಯ ಮಾಹಿತಿಯನ್ನು ಕಾರ್ಯದರ್ಶಿಗಳಾದ, ಸುರೇಶ್ ಒದಗಿಸಿಕೊಟ್ಟರು. ನಿವೇಶನದ ಮಾಹಿತಿಯನ್ನ ಮುತ್ತುರಾಜ್ ನೀಡಿದರು. ಪಶುವೈದ್ಯಕೀಯ, ಇಲಾಖೆಯ ಸಿಬ್ಬಂದಿ ಕಿಸಾನ್ ಕಾರ್ಡ್ ಬಗ್ಗೆ ಇದರಲ್ಲಿನ ಸಾಲ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು.
ಜಲ ಜೀವನ್ ಮಿಷನ್ ಬಗ್ಗೆಯೂ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಯಿತು. ಈ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ನಿವಾಸಮೂರ್ತಿ ಸ್ಪಷ್ಟನೆ ನೀಡಿದರು.
ಈ ಸಭೆಯಲ್ಲಿ,ಸದಸ್ಯರು.ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ,ಗೋವಿಂದಯ್ಯ, ಬಿ.ಆರ್.ಸಿ.ಮುಂತಾದವರು ಭಾಗವಹಿಸಿದ್ದರು.
ವರದಿ: ಸುರೇಶ್ ಬಾಬು. ಎಂ.ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy