ತುಮಕೂರು: ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮ,ಜಿಲ್ಲಾಧಿಕಾರಿಗಳ ನಡೆ ,ಹಳ್ಳಿಯ ಕಡೆ ಹಾಗೂ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ,ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಕಂದಾಯ ಸಚಿವ ಆರ್.ಅಶೋಕ್ ಅವರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಾಸಕ ಮಸಾಲ ಜಯರಾಮ್ , ನನ್ನ ತುರುವೇಕೆರೆ ಕ್ಷೇತ್ರಕ್ಕೆ 1,600 ಕೋಟಿಗೂ ಹೆಚ್ಚಿನ ಅನುದಾನವನ್ನು ವಿವಿಧ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ನೀಡಿದೆ ಇನ್ನು ಹೆಚ್ಚಿನ ಅನುದಾನವನ್ನು ತರುತ್ತೇನೆ ಎಂದರಲ್ಲದೇ ಇತ್ತೀಚೆಗೆ ರಾಜ್ಯ ಸಭೆಗೆ ಆಯ್ಕೆಯಾದ ಚಿತ್ರ ನಟ ಜಗ್ಗೇಶ್ ಅವರನ್ನು ಅಭಿನಂದಿಸಿದರು.
ಇದೇ ವೇಳೆ ಮಾತನಾಡಿದ ನೂತನ ರಾಜ್ಯ ಸಭಾ ಸದಸ್ಯ ಜಗ್ಗೇಶ್, ತುರುವೇಕೆರೆ ವಿಧಾನ ಸಭಾ ಸದಸ್ಯನಾಗಿ ನಂತರ ವಿಧಾನ ಪರಿಷತ್ತಿನ ಸದಸ್ಯನಾಗಿ , ಈಗ ರಾಜ್ಯಸಭಾ ಸದಸ್ಯನಾಗಿ ಮೂರು ಅಧಿಕಾರವನ್ನು ಪಡೆದವರಲ್ಲಿ ನಾನೇ ಮೊದಲ ಇತಿಹಾಸ. ಆದುದರಿಂದ ನಾನೆಂದು ಮಾಯಸಂದ್ರದ ಮಣ್ಣನ್ನು ಮರೆಯುವುದಿಲ್ಲ. ಅದಕ್ಕಾಗೆ ನಾನು ರಾಜ್ಯ ಸಭಾ ಸದಸ್ಯರಾದ ತಕ್ಷಣ ನನ್ನ ಹುಟ್ಟೂರಿನಲ್ಲೇ ಈ ಕಾರ್ಯಕ್ರಮ ಆಯೋಜನೆ ಮಾಡಿಸಿ ಕಂದಾಯ ಸಚಿವರನ್ನು ಗ್ರಾಮವಾಸ್ತವ್ಯ ಮಾಡುವಂತೆ ಮಾಡಿದ್ದೇನೆ. ನೀವು ಹೆಮ್ಮೆಪಡಬೇಕು , ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಮಾಯಸಂದ್ರಕ್ಕೆ ಮಾಡುತ್ತೇನೆ ಎಂದರು .
ಕಂದಾಯ ಸಚಿವರಾದ ಆರ್ ಅಶೋಕ್ ಮಾತನಾಡಿ, ಈ ಕಾರ್ಯಕ್ರಮ ಒಂದು ಪಾಠಶಾಲೆ. ಪಾಠ ಕಲಿಯುತ್ತಿದ್ದೇನೆ . ಮಾಯಸಂದ್ರಕ್ಕೆ ಹೊಸದಾಗಿ ಒಂದು ಕೋಟಿ ವೆಚ್ಚದಲ್ಲಿ ನಾಡ ಕಚೇರಿ ಆಗಲಿದೆ. ಹತ್ತು ಕೋಟಿ ವೆಚ್ಚದಲ್ಲಿ ತಾಲ್ಲೂಕು ಕೇಂದ್ರದಲ್ಲಿ ಆಡಳಿತ ಸೌಧ ನಿರ್ಮಾಣಗೊಳ್ಳಲಿದೆ. ಮೇ 14ಕ್ಕೆ ಪ್ರಾರಂಭವಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಿಂದ ಈವರೆಗೆ 5,159 ಮಂದಿ ಪ್ರಯೋಜನ ಪಡೆದುಕೊಂಡಿದ್ದಾರೆ.
ಇನ್ನು ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ , ಜಿಲ್ಲಾ ಪಂಚಾಯತ್ ಸಿ.ಇ.ಓ. ವಿದ್ಯಾಕುಮಾರಿ, ಎಲ್ಲಾ ಹಿರಿಯ ಅಧಿಕಾರಿಗಳು ಹಾಗೂ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿ ಹಾಜರಿದ್ದರು.
ವರದಿ : ಸುರೇಶ್ ಬಾಬು, ತುರುವೇಕೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz