ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜನ್ಮದಿನಾಚರಣೆ ಸಂದರ್ಭದಲ್ಲಿ, ಗ್ರಾಮದ ಮುಸ್ಲಿಂ ಬಾಂಧವರು ಭಾವೈಕ್ಯತೆ ಮೆರೆದರು.
ಗ್ರಾಮದಲ್ಲಿ ಆಯೋಜಿಸಿದ್ದ ಜಯಂತಿ ಕಾರ್ಯಕ್ರಮದಲ್ಲಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವು ಬೆಳ್ಳಿಯ ರಥದಲ್ಲಿ ನೂರಾರು ಜನರ ಸಮ್ಮುಖದಲ್ಲಿ, ಮಧ್ಯಾಹ್ನದ ವೇಳೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಈ ವೇಳೆ ಮಾವಿನಕೆರೆ ಮುಖ್ಯರಸ್ತೆಯಲ್ಲಿ ಸುಡುಬಿಸಿಲಿನಲ್ಲಿ ನೆರೆದಿದ್ದ ನೂರಾರು ಹಿಂದೂ ಕಾರ್ಯಕರ್ತರಿಗೆ ಗ್ರಾಮದ ಮುಸ್ಲಿಂ ಬಾಂಧವರು ಕುಡಿಯಲು ತಂಪು ಪಾನೀಯಗಳನ್ನು ವಿತರಿಸಿ ಭಾವೈಕ್ಯತೆ ಮೆರೆದರು. ಜೈ ಭೀಮ್ ಘೋಷಣೆಯನ್ನು ಕೂಗುತ್ತಾ, ನಮ್ಮ ಗ್ರಾಮದಲ್ಲಿ ಯಾವುದೇ ಭೇದ ಭಾವಗಳಿಲ್ಲ, ಸಮಾನತೆಯ ಭಾವೈಕ್ಯತೆ, ಎಂದಿಗೂ ಸಹ ಇರಲಿದೆ ನಮ್ಮ ಗ್ರಾಮ ನಮ್ಮ ಹೆಮ್ಮೆ ಎಂದರು.
ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಮುಖಂಡರಾದ ಮಹಮದ್ ಆರೂನ್. ಕಲೀಲ್ ಪಾಷಾ. ಯುವ ಮುಖಂಡರಾದ ರಹಮತ್ ಉಲ್ಲಾ. ಇಬ್ರಾತ್. ಹರ್ಷದ್. ದಿಲ್ಲು.ಮುಬಾರಕ್ (ಬನ್ನ). ಮತ್ತು ಗ್ರಾ.ಪಂ. ಸದಸ್ಯರಾದ ಖದೀರ್ ಪಾಷ. ತಬ್ರೇಜ್. ಸೇರಿದಂತೆ ಮುಂತಾದ ಮುಖಂಡರು, ಗ್ರಾಮಸ್ಥರು ಪಾಲ್ಗೊಂಡಿದ್ದರು.
ವರದಿ: ಸಚಿನ್ ಮಾಯಸಂದ್ರ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5